ಬೆಂಗಳೂರು: ಕಡಿಮೆ ವೆಚ್ಚ, ಕಡಿಮೆ ನೀರಿನಲ್ಲಿಯೂ ಬೆಳೆಯಬಹುದಾದ ಸಿರಿಧಾನ್ಯಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿದ್ದು, ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. ಇತ್ತೀಚೆಗಿನ ವರ್ಷಗಳಲ್ಲಿ ಸಿರಿಧಾನ್ಯಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಇದು ರೈತರಿಗೂ ಆರ್ಥಿಕವಾಗಿ ಅನುಕೂಲವಾಗಲಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾವಯವ ಕೃಷಿ ಪದ್ಧತಿ, ಸಿರಿಧಾನ್ಯದ ಬಗ್ಗೆ ಆಸಕ್ತಿ ಕಡಿಯಾಗಿತ್ತು. ಈಗ 4-5 ವರ್ಷಗಳಿಂದ ಸಾರ್ವಜನಿಕರಿಗೆ ಈ ಬಗ್ಗೆ ಆಸಕ್ತಿ ಇದ್ದು, ಸಾರ್ವಜನಿಕರ ಆಸಕ್ತಿಗೆ ಸರ್ಕಾರ ಜವಾಬ್ದಾರಿಯುತವಾಗಿ ಸ್ಪಂಧಿಸುವ ನಿಟ್ಟಿನಲ್ಲಿ ಇದಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಾರುಕಟ್ಟೆ ವ್ಯವಸ್ಥೆ ಮಾಡಿಕೊಡಲಾಗುತ್ತಿದೆ ಎಂದರು.
ಸಿರಿಧಾನ್ಯ ಬೆಳೆಯಲು ರೈತಸಿರಿ ಕಾರ್ಯಕ್ರಮದ ಮೂಲಕ ಹೆಕ್ಟೆರ್ಗೆ 1೦ ಸಾವಿರ ರೂ ನೀಡಿ ಪ್ರೋತ್ಸಾಹ ನೀಡಿದ್ದರಿಂದ ಸಿರಿಧಾನ್ಯದ ಉತ್ಪತ್ತಿ ಮಾಡಲು ರೈತರು ಉತ್ಸುಕರಾಗಿದ್ದಾರೆ. ಇದುವರೆಗೆ 104 ಕೋಟಿ ರೂ ವಿತರಣೆ ಮಾಡಲಾಗಿದೆ ಎಂದು ಹೇಳಿದರು.
ಸಿರಿಧಾನ್ಯ ಮೇಳದ ಮೂಲಕ ರೈತರ ಸಿರಿಧಾನ್ಯಗಳಿಗೆ ಮಾರುಕಟ್ಟೆ ದೊರೆಕಿಸಿಕೊಡುತ್ತಿದ್ದು, ಮೇಳದ ಮೂಲಕ ಆಹಾರ ಉತ್ಪನ್ನ ತಯಾರಿಸಿ ವಿತರಿಸುವ ಕೆಲಸ ಮಾಡಲಾಗುತ್ತಿದೆ. ನನ್ನ ನೇತೃತ್ವದಲ್ಲಿ ಎರಡು ವರ್ಷಗಳ ಕಾಲ ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಮಾಡಲಾಗುತ್ತಿದೆ ಎಂದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…