ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ. ಈ ವಿಚಾರ ಹಾದಿ ರಂಪ ಬೀದಿ ರಂಪಾಟ ಆಗಬಾರದು ಎಂದು ಪಕ್ಷದ ವರಿಷ್ಠರು ನಿರ್ಧಾರ ಮಾಡಿದ್ದಾರೆ. ಹಿಂದಿನಿಂದಲೂ ಅದನ್ನೇ ನಾನು ಹೇಳಿಕೊಂಡು ಬಂದಿದ್ದೇನೆ. ಈಗ ಬದಲಾವಣೆಯಾಗುವ ಸಮಯ ಬಂದಿದೆ. ಯಾವುದೇ ಗೊಂದಲಗಳಿಲ್ಲದೆ ಸರಿಯಾಗುತ್ತದೆ ಎಂದುಕೊಂಡಿದ್ದೇನೆ. ನಮ್ಮ ಸರ್ಕಾರ 3 ವರ್ಷಗಳಿಂದ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ಮುಂದೆಯು ಕೂಡ ಅದೇ ರೀತಿ ಜನಪರವಾಗಿ ಕೆಲಸ ಮಾಡಲಿದೆ ಎಂದು ಹೇಳಿದರು.
ಇನ್ನು ಸಿಎಂ ಬ್ರೇಕ್ ಫಾಸ್ಟ್ ಆಹ್ವಾನದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಎಲ್ಲಾ ಸಭೆಗಳಲ್ಲೂ ನಾವು ಇರಬೇಕು ಅಂತ ಏನು ಇಲ್ಲ. ಸಂಪುಟ ಸರ್ಜರಿ ಅಗುವುದಿಲ್ಲ. ಹೊಸ ಸಂಪುಟವೇ ಬರಲಿದೆ. ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಈ ಹಿಂದೆ ಎಲ್ಲಾ 3 ಜನ ಅಲ್ಪಸಂಖ್ಯಾತ ಸಮುದಾಯದವರಿಗೆ ಸಚಿವ ಸ್ಥಾನಗಳನ್ನು ಕೊಟ್ಟಿದ್ದರು. ಆದರೆ, ಈ 3 ವರ್ಷದಲ್ಲಿ ಸಮುದಾಯದ ಇಬ್ಬರಿಗೆ ಮಾತ್ರ ಸಚಿವರಾಗುವ ಅವಕಾಶ ಸಿಕ್ಕಿತ್ತು. ಈಗ ಮೂರು ಸ್ಥಾನ ಕೊಡಬೇಕು ಅಂತ ಒತ್ತಾಯ ಮಾಡುತ್ತೇನೆ ಎಂದು ಹೇಳಿದರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…