ಹಸಿರು ಪಟಾಕಿಯನ್ನಷ್ಟೇ ಸಿಡಿಸಿ: ಈಶ್ವರ ಖಂಡ್ರೆ
ಬೆಂಗಳೂರು: ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಲು, ಹಿರಿಯ ನಾಗರಿಕರು ಮತ್ತು ಪುಟ್ಟ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೇ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.
ಕತ್ತಲೆಂಬ ಅಜ್ಞಾನವನ್ನು ಕಳೆದು ಸುಜ್ಞಾನವೆಂಬ ದೀಪ ಹಚ್ಚುವ ಬೆಳಕಿನ ಹಬ್ಬಕ್ಕೂ ಪಟಾಕಿಗೂ ಅವಿನಾಭಾವ ಬಾಂಧವ್ಯ ಬೆಸೆದಿದೆ. ಆದರೆ ಈ ಪಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಉಂಟು ಮಾಡುತ್ತವೆ ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕ, ಭಾರ ಲೋಹಯುಕ್ತ ಪಟಾಕಿ ಬಳಸದಂತೆ ಮನವಿ ಮಾಡಿದ್ದಾರೆ.
ಹಸಿರು ಪಟಾಕಿ ಮಾತ್ರವೇ ಬಳಸಿ:
ಹಲವು ಮಕ್ಕಳು ಪಟಾಕಿ ಸಿಡಿಸುವಾಗ ಕಣ್ಣಿಗೆ ಪೆಟ್ಟು ಮಾಡಿಕೊಂಡಿದ್ದನ್ನು ನೋಡುತ್ತೇವೆ, ಹಲವರು ಗಾಯಗೊಳ್ಳುತ್ತಾರೆ. ಹೀಗಾಗಿ ಸಾಧ್ಯವಾದಷ್ಟು ಪಟಾಕಿ ಹಚ್ಚದಿರುವುದೇ ಉತ್ತಮ. ಪಟಾಕಿ ಸಿಡಿಸಲೇಬೇಕು ಎಂದಾದರೆ ಪರಿಸರಕ್ಕೆ ಹಾನಿ ಉಂಟು ಮಾಡದ ಹಸಿರು ಪಟಾಕಿ ಮಾತ್ರವೇ ಸಿಡಿಸಿ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
125 ಡೆಸಿಬಲ್ ಗಿಂತ ಕಡಿಮೆ ಶಬ್ದದ ಪಟಾಕಿಗೆ ಮಾತ್ರ ಅವಕಾಶ:
ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮತ್ತು ಸುಪ್ರೀಂಕೋರ್ಟ್ ತನ್ನ ಹಲು ತೀರ್ಪುಗಳಲ್ಲಿ 125 ಡೆಸಿಬಲ್ ಗಿಂತ ಹೆಚ್ಚು ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮುವ ರಾಸಾಯನಿಕಯುಕ್ತ ಪಟಾಕಿಗಳನ್ನು ನಿಷೇಧಿಸಿದೆ. ರಾತ್ರಿ 8 ರಿಂದ 10ಗಂಟೆ ವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಹಚ್ಚಲು ಅವಕಾಶ ಕಲ್ಪಿಸಿದೆ. ಸಾರ್ವಜನಿಕರು ಈ ನಿಯಮಗಳನ್ನು ಪಾಲಿಸಬೇಕು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಮುಚ್ಚಳಿಕೆ ಬರೆಸಿಕೊಳ್ಳಲು ಸೂಚನೆ:
ಗಣಪತಿ ಹಬ್ಬದ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿಗಳೊಂದಿಗೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಪಟಾಕಿ ಮಳಿಗೆಗೆ ಅನುಮತಿ ನೀಡುವಾಗ ಹಸಿರು ಪಟಾಕಿ ಮಾತ್ರ ದಾಸ್ತಾನು, ಸಾಗಾಟ ಹಾಗೂ ಮಾರಾಟ ಮಾಡುವುದಾಗಿ ಮಳಿಗೆ ಮಾಲೀಕರಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸೂಚಿಸಲಾಗಿದೆ. ನಿಯಮ ಉಲ್ಲಂಘಿಸುವವರಿಗೆ ಮುಂದಿನ ಸಾಲಿನಿಂದ ಪಟಾಕಿ ಮಳಿಗೆ ಅನುಮತಿ ನೀಡದಂತೆ ತಿಳಿಸಲಾಗಿದೆ. ಜಿಲ್ಲಾಡಳಿತ ಈ ಬಗ್ಗೆ ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.
ಜಾಗೃತಿ ಮೂಡಿಸಲು ಮನವಿ:
ಸಂಘ ಸಂಸ್ಥೆಗಳು, ಶಿಕ್ಷಕರು, ಬೋಧಕರು, ಉಪನ್ಯಾಸಕರು, ಪರಿಸರ ಪ್ರೇಮಿಗಳು, ಜನಪ್ರತಿನಿಧಿಗಳು ಜನರಲ್ಲಿ ಅದರಲ್ಲೂ ಮಕ್ಕಳಲ್ಲಿ ಪಟಾಕಿಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಪಟಾಕಿ ತ್ಯಜಿಸುವಂತೆ ಇಲ್ಲವೇ ಹಸಿರು ಪಟಾಕಿ ಮಾತ್ರ ಬಳಸಲು ಮನವಿ ಮಾಡಬೇಕು ಎಂದೂ ಪರಿಸರ ಸಚಿವರು ಮನವಿ ಮಾಡಿದ್ದಾರೆ.
ಹೆಚ್ಚು ಶಬ್ದ ಮತ್ತು ದಟ್ಟ ಹೊಗೆ ಹೊರಹೊಮ್ಮುವ ರಾಸಾಯನಿಕ ಮತ್ತು ಭಾರ ಲೋಹಯುಕ್ತ ಪಟಾಕಿಗಳಿಂದ ಉಸಿರಾಟಕ್ಕೂ ತೊಂದರೆ ಆಗುತ್ತದೆ. ಭಾರೀ ಶಬ್ದ ಮಾಡುವ ಪಟಾಕಿಗಳಿಂದ ಪಶು, ಪಕ್ಷಿಗಳಿಗೂ ಕಿರಿಕಿರಿ ಉಂಟಾಗುತ್ತದೆ. ಹೀಗಾಗಿ ಪಟಾಕಿಗಳನ್ನು ತ್ಯಜಿಸೋಣ. ದೀಪದಿಂದ ದೀಪ ಹಚ್ಚಿ ಪರಿಸರ ಸ್ನೇಹಿ ದೀಪಾವಳಿ ಆಚರಿಸೋಣ ಎಂದು ಈಶ್ವರ ಖಂಡ್ರೆ ಕರೆ ನೀಡಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…