ರಾಜ್ಯ

ಪಟಾಕಿ ಮಾರಾಟಗಾರರಿಂದ ಮುಚ್ಚಳಿಕೆ; ದೀಪ ಹಚ್ಚಿ ದೀಪಾವಳಿ ಆಚರಿಸಲು ಕರೆ

ಹಸಿರು ಪಟಾಕಿಯನ್ನಷ್ಟೇ ಸಿಡಿಸಿ: ಈಶ್ವರ ಖಂಡ್ರೆ
ಬೆಂಗಳೂರು: ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಲು, ಹಿರಿಯ ನಾಗರಿಕರು ಮತ್ತು ಪುಟ್ಟ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೇ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.

ಕತ್ತಲೆಂಬ ಅಜ್ಞಾನವನ್ನು ಕಳೆದು ಸುಜ್ಞಾನವೆಂಬ ದೀಪ ಹಚ್ಚುವ ಬೆಳಕಿನ ಹಬ್ಬಕ್ಕೂ ಪಟಾಕಿಗೂ ಅವಿನಾಭಾವ ಬಾಂಧವ್ಯ ಬೆಸೆದಿದೆ. ಆದರೆ ಈ ಪಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಉಂಟು ಮಾಡುತ್ತವೆ ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕ, ಭಾರ ಲೋಹಯುಕ್ತ ಪಟಾಕಿ ಬಳಸದಂತೆ ಮನವಿ ಮಾಡಿದ್ದಾರೆ.

ಹಸಿರು ಪಟಾಕಿ ಮಾತ್ರವೇ ಬಳಸಿ:
ಹಲವು ಮಕ್ಕಳು ಪಟಾಕಿ ಸಿಡಿಸುವಾಗ ಕಣ್ಣಿಗೆ ಪೆಟ್ಟು ಮಾಡಿಕೊಂಡಿದ್ದನ್ನು ನೋಡುತ್ತೇವೆ, ಹಲವರು ಗಾಯಗೊಳ್ಳುತ್ತಾರೆ. ಹೀಗಾಗಿ ಸಾಧ್ಯವಾದಷ್ಟು ಪಟಾಕಿ ಹಚ್ಚದಿರುವುದೇ ಉತ್ತಮ. ಪಟಾಕಿ ಸಿಡಿಸಲೇಬೇಕು ಎಂದಾದರೆ ಪರಿಸರಕ್ಕೆ ಹಾನಿ ಉಂಟು ಮಾಡದ ಹಸಿರು ಪಟಾಕಿ ಮಾತ್ರವೇ ಸಿಡಿಸಿ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

125 ಡೆಸಿಬಲ್ ಗಿಂತ ಕಡಿಮೆ ಶಬ್ದದ ಪಟಾಕಿಗೆ ಮಾತ್ರ ಅವಕಾಶ:
ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮತ್ತು ಸುಪ್ರೀಂಕೋರ್ಟ್ ತನ್ನ ಹಲು ತೀರ್ಪುಗಳಲ್ಲಿ 125 ಡೆಸಿಬಲ್ ಗಿಂತ ಹೆಚ್ಚು ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮುವ ರಾಸಾಯನಿಕಯುಕ್ತ ಪಟಾಕಿಗಳನ್ನು ನಿಷೇಧಿಸಿದೆ. ರಾತ್ರಿ 8 ರಿಂದ 10ಗಂಟೆ ವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಹಚ್ಚಲು ಅವಕಾಶ ಕಲ್ಪಿಸಿದೆ. ಸಾರ್ವಜನಿಕರು ಈ ನಿಯಮಗಳನ್ನು ಪಾಲಿಸಬೇಕು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಮುಚ್ಚಳಿಕೆ ಬರೆಸಿಕೊಳ್ಳಲು ಸೂಚನೆ:
ಗಣಪತಿ ಹಬ್ಬದ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿಗಳೊಂದಿಗೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಪಟಾಕಿ ಮಳಿಗೆಗೆ ಅನುಮತಿ ನೀಡುವಾಗ ಹಸಿರು ಪಟಾಕಿ ಮಾತ್ರ ದಾಸ್ತಾನು, ಸಾಗಾಟ ಹಾಗೂ ಮಾರಾಟ ಮಾಡುವುದಾಗಿ ಮಳಿಗೆ ಮಾಲೀಕರಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸೂಚಿಸಲಾಗಿದೆ. ನಿಯಮ ಉಲ್ಲಂಘಿಸುವವರಿಗೆ ಮುಂದಿನ ಸಾಲಿನಿಂದ ಪಟಾಕಿ ಮಳಿಗೆ ಅನುಮತಿ ನೀಡದಂತೆ ತಿಳಿಸಲಾಗಿದೆ. ಜಿಲ್ಲಾಡಳಿತ ಈ ಬಗ್ಗೆ ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.

ಜಾಗೃತಿ ಮೂಡಿಸಲು ಮನವಿ:
ಸಂಘ ಸಂಸ್ಥೆಗಳು, ಶಿಕ್ಷಕರು, ಬೋಧಕರು, ಉಪನ್ಯಾಸಕರು, ಪರಿಸರ ಪ್ರೇಮಿಗಳು, ಜನಪ್ರತಿನಿಧಿಗಳು ಜನರಲ್ಲಿ ಅದರಲ್ಲೂ ಮಕ್ಕಳಲ್ಲಿ ಪಟಾಕಿಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಪಟಾಕಿ ತ್ಯಜಿಸುವಂತೆ ಇಲ್ಲವೇ ಹಸಿರು ಪಟಾಕಿ ಮಾತ್ರ ಬಳಸಲು ಮನವಿ ಮಾಡಬೇಕು ಎಂದೂ ಪರಿಸರ ಸಚಿವರು ಮನವಿ ಮಾಡಿದ್ದಾರೆ.

ಹೆಚ್ಚು ಶಬ್ದ ಮತ್ತು ದಟ್ಟ ಹೊಗೆ ಹೊರಹೊಮ್ಮುವ ರಾಸಾಯನಿಕ ಮತ್ತು ಭಾರ ಲೋಹಯುಕ್ತ ಪಟಾಕಿಗಳಿಂದ ಉಸಿರಾಟಕ್ಕೂ ತೊಂದರೆ ಆಗುತ್ತದೆ. ಭಾರೀ ಶಬ್ದ ಮಾಡುವ ಪಟಾಕಿಗಳಿಂದ ಪಶು, ಪಕ್ಷಿಗಳಿಗೂ ಕಿರಿಕಿರಿ ಉಂಟಾಗುತ್ತದೆ. ಹೀಗಾಗಿ ಪಟಾಕಿಗಳನ್ನು ತ್ಯಜಿಸೋಣ. ದೀಪದಿಂದ ದೀಪ ಹಚ್ಚಿ ಪರಿಸರ ಸ್ನೇಹಿ ದೀಪಾವಳಿ ಆಚರಿಸೋಣ ಎಂದು ಈಶ್ವರ ಖಂಡ್ರೆ ಕರೆ ನೀಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

8 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

17 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago