Categories: ರಾಜ್ಯ

ನಿಖಿಲ್‌ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ನಿಖಿಲ್‌ ಕುಮಾರಸ್ವಾಮಿಗೆ ಅಭಿಮಾನಿಯೊಬ್ಬರು ರಕ್ತದಿಂದ ಪತ್ರ ಬರೆದು ಸಮಾಧಾನ ಹೇಳಿದ್ದಾರೆ.

ರಾಜ್ಯದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್‌ ಕುಮಾರಸ್ವಾಮಿ ಭಾರೀ ಮತಗಳ ಅಂತರದಿಂದ ಸೋಲನ್ನನುಭವಿಸಿದರು.

ಈ ಹಿನ್ನೆಲೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಸಮಾಧಾನ ಮಾಡುವ ಸಲುವಾಗಿ ಕಡೂರು ಮೂಲದ ಹರ್ಷಿತ್‌ ಎಂಬುವವರು ರಕ್ತದಲ್ಲಿ ಪತ್ರ ಬರೆದಿದ್ದಾರೆ. ನೀವು ಸೋತಿರಬಹುದು ಆದರೆ ಜನರ ಮನಸ್ಸಿನಲ್ಲಿದ್ದೀರಿ. ನಿಷ್ಠಾವಂತ ಕಾರ್ಯಕರ್ತರಲ್ಲಿ ಜೆಡಿಎಸ್‌ ಉಸಿರಿದೆ. ಮುಂದಿನ ದಿನಗಳಲ್ಲಿ ಒಳ್ಳೆಯತನ ಗೆದ್ದೇ ಗೆಲ್ಲುತ್ತೆ. ನೀವು ಎದೆಗುಂದಲೇ ಪಕ್ಷದಲ್ಲಿ ಕೆಲಸ ಮಾಡಿ. ಮುಂದಿನ ದಿನಗಳಲ್ಲಿ ಒಳ್ಳೆಯ ಅವಕಾಶ ಸಿಗುತ್ತೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

7 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

8 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

9 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

9 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

9 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

17 hours ago