ರಾಜ್ಯ

ವಿಕಲಚೇತನರಿಗಾಗಿಯೇ ಬೃಹತ್‌ ಉದ್ಯೋಗ ಮೇಳ ಆಯೋಜನೆ: ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್ ಆರ್. ಪಾಟೀಲ್ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಸಕ್ತ ಸಾಲಿನಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ರಾಜ್ಯದ ವಿಕಲಚೇತನರನ್ನು ತಾಂತ್ರಿಕ ಜ್ಞಾನದೊಂದಿಗೆ ಆರ್ಥಿಕತೆಯಲ್ಲಿ ಮುನ್ನಡೆಸುವ ಉದ್ದೇಶದಿಂದ ಮಾರುಕಟ್ಟೆ ಬೇಡಿಕೆಗೆ ಅನುಗುಣವಾದ ವೃತ್ತಿ ತರಬೇತಿ ಮೂಲಕ ಒಂದು ಸಾವಿರ ಅಭ್ಯರ್ಥಿಗಳಿಗೆ 3 ಕೋಟಿ ರೂ. ವೆಚ್ಚದಲ್ಲಿ ಕೌಶಲ್ಯ ತರಬೇತಿಯ ಜೊತೆಗೆ ಟೂಲ್‍ಕಿಟ್ ವಿತರಣೆ ಹಾಗೂ ಉದ್ಯೋಗಾವಕಾಶವನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರದಿಂದ ಉದ್ಯಮಶೀಲತಾಭಿವೃದ್ಧಿ ತರಬೇತಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ವಿಕಲಚೇತನರಿಗೆ ಸರ್ಕಾರದ ಆದೇಶದ ಅನ್ವಯ ಶೇ.3ರಷ್ಟಿದ್ದ ಮೀಸಲಾತಿ ಪ್ರಮಾಣವನ್ನು ಶೇ.5ಕ್ಕೆ ಹೆಚ್ಚಿಸಿ ತರಬೇತಿ ಕಾರ್ಯಕ್ರಮಗಳನ್ನು ಒದಗಿಸಲಾಗಿದೆ.

2017-18 ನೇ ಸಾಲಿನಿಂದ 2024-25ನೇ ಸಾಲಿನವರೆಗೆ ನೋಂದಣಿಯಾದ ಅಭ್ಯರ್ಥಿಗಳಲ್ಲಿ 540 ಅಭ್ಯರ್ಥಿಗಳು ವಿವಿಧ ಜಾಬ್‍ರೋಲ್‍ಗಳಡಿ ವಿವಿಧ ತರಬೇತಿದಾರ ಸಂಸ್ಥೆಗಳ ಮೂಲಕ ತರಬೇತಿ ಪಡೆದಿದ್ದಾರೆ. 83 ವಿಕಲಚೇತನ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ದೊರೆತಿದೆ. ಮುಖ್ಯಮಂತ್ರಿಯವರ ಕೌಶಲ್ಯ ಕರ್ನಾಟಕ ಯೋಜನೆಯಡಿಯಲ್ಲಿ 10 ಜನರಿಗೆ ತರಬೇತಿ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಬಿಎಂಎಸ್ ಕಾಲೇಜಿನಲ್ಲಿ ಆಯೋಜಿಸಿದ್ದ ಉದ್ಯೋಗಮೇಳದಲ್ಲಿ 1200 ಅಭ್ಯರ್ಥಿಗಳು ಭಾಗವಹಿಸಿದ್ದು, 75 ಜನರಿಗೆ ಉದ್ಯೋಗ ದೊರೆತಿದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

6 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

8 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

17 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

17 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

17 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

17 hours ago