ರಾಜ್ಯ

ನಂದಿನಿ ಬ್ರ್ಯಾಂಡ್‌ ಹೆಸರಲ್ಲಿ ಕಲಬೆರಕೆ ತುಪ್ಪ ತಯಾರಿಕೆ ಬೃಹತ್‌ ಜಾಲ ಪತ್ತೆ..!

ಬೆಂಗಳೂರು : ನಂದಿನಿ ಬ್ರ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ವಾರಾಟದ ಬೃಹತ್ ಜಾಲವೊಂದು ನಗರದಲ್ಲಿ ಪತ್ತೆ ಆಗಿದೆ. ಸಿಸಿಬಿ ಪೊಲೀಸರು ಮತ್ತು ಕೆಎಂಎಫ್ ಜಾಗೃತ ದಳ ಜಂಟಿ ಕಾರ್ಯಾಚರಣೆ ನಡೆಸಿ ಬೃಹತ್ ಜಾಲ ಪತ್ತೆ ಮಾಡಿದ್ದು, ಕೆಎಂಎಫ್ ವಿತರಕ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ಮಹೇಂದ್ರ, ದೀಪಕ್, ಮುನಿರಾಜು ಬಂಧಿತರು. ಮತ್ತೋರ್ವ ಅಭಿ ಅರಸು ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಒಟ್ಟು ೧.೨೬ ಕೋಟಿ ರೂ. ಮೌಲ್ಯದ ವಸ್ತುವನ್ನು ಬಂಧಿತರಿಂದ ಜಪ್ತಿ ವಾಡಲಾಗಿದೆ.

ಇದನ್ನು ಓದಿ: ನಕಲಿ ನಂದಿನಿ ತುಪ್ಪ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ 

ಬೆಂಗಳೂರಿನಿಂದ ತಮಿಳುನಾಡಿಗೆ ನಂದಿನಿ ತುಪ್ಪ ಪೂರೈಕೆ
ಬೆಂಗಳೂರಿನಿಂದ ತಮಿಳುನಾಡಿಗೆ ಶುದ್ಧ ನಂದಿನಿ ತುಪ್ಪ ಪೂರೈಕೆ ವಾಡುತ್ತಿದ್ದರು. ಕೆಎಂಎಫ್ ಡಿಸ್ಟ್ರಿಬ್ಯೂಟರ್ ಮಹೇಂದ್ರ ಒರಿಜಿನಲ್ ತುಪ್ಪ ಖರೀದಿಸುತ್ತಿದ್ದರು. ಇಲ್ಲಿ ಖರೀದಿಸಿದ ಒರಿಜಿನಲ್ ತುಪ್ಪ ತಮಿಳುನಾಡಿಗೆ ಕಳುಹಿಸುತ್ತಿದ್ದರು. ಅದನ್ನು ತಮಿಳುನಾಡಿನಲ್ಲಿ ಕಲಬೆರಕೆ ವಾಡುತ್ತಿದ್ದರು. ಒಂದು ಲೀಟರ್ ತುಪ್ಪಕ್ಕೆ ೪ ಲೀಟರ್ ನಕಲಿ ತುಪ್ಪ ಬೆರೆಸುತ್ತಿದ್ದರು. ಪಾಮ್ ಆಯಿಲ್, ತೆಂಗಿನ ಎಣ್ಣೆ ಮತ್ತು ಡಾಲ್ಡಾ ಬೆರೆಸುತ್ತಿದ್ದರು. ಅದನ್ನು ಮತ್ತೆ ಕರ್ನಾಟಕಕ್ಕೆ ತಂದು ಮಾರಾಟ ವಾಡುತ್ತಿದ್ದರು.

ಶುಕ್ರವಾರ ಚಾಮರಾಜಪೇಟೆಯ ನಂಜಾಂಬ ಅಗ್ರಹಾರದಲ್ಲಿರುವ ಕೃಷ್ಣ ಎಂಟರ್‌ಪ್ರೈಸಸ್ ಮಾಲೀಕರಿಗೆ ಸೇರಿದ ಗೋಡೌನ್ ಹಾಗೂ ಅಂಗಡಿಗಳ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ವಾಡಿದ್ದಾರೆ. ದಾಳಿ ವೇಳೆ ಒಟ್ಟು ೮,೧೩೬ ಲೀ. ಕಲಬೆರಕೆ ತುಪ್ಪ, ೪ ವಾಹನ, ತೆಂಗು ಹಾಗೂ ಪಾಮ್ ಆಯಿಲ್, ನಕಲಿ ತುಪ್ಪ ತಾಯಾರು ಮಾಡುವ ಯಂತ್ರಗಳು ಸೇರಿ ೧,೨೬,೯೫,೦೦೦ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಆಂದೋಲನ ಡೆಸ್ಕ್

Recent Posts

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

1 hour ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

2 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

2 hours ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

2 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

3 hours ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

4 hours ago