ರಾಜ್ಯ

ರಾಜ್ಯದಲ್ಲಿ 1 ಲಕ್ಷ ಕೋಟಿ ಮೊತ್ತದ ಗಣಿ ಹಗರಣ ನಡೆದಿದೆ: ಸಿಎಂಗೆ ಪತ್ರ ಬರೆದ ಕೈ ಮುಖಂಡರು

ಬೆಂಗಳೂರು: ರಾಜ್ಯದಲ್ಲಿ 1 ಲಕ್ಷ ಕೋಟಿ ಮೊತ್ತದ ಗಣಿ ಹಗರಣ ನಡೆದಿದೆ. ಈ ಸಂಬಂಧ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಕೋರಿ ಕಾಂಗ್ರೆಸ್ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಎಚ್.ಎಂ.ರೇವಣ್ಣ, ಡಾ.ಸಿ.ಎಸ್.ದ್ವಾರಕಾನಾಥ್, ವಿ.ಆರ್.ಸುದರ್ಶನ್, ಡಾ.ಎಲ್.ಹನುಮಂತಯ್ಯ, ಮೋಹನ್ ಕೊಂಡಜ್ಜಿ ಅವರು ಪತ್ರ ಬರೆದಿದ್ದಾರೆ.

ಇದನ್ನು ಓದಿ; ‘ದೂರದರ್ಶನ’ ನಿರ್ದೇಶಕರ ಚಿತ್ರದಲ್ಲಿ ‘ಪೀಟರ್‍’ ಆದ ರಾಜೇಶ್‍ ಧ್ರುವ

ಅಕ್ರಮ ಗಣಿಗಾರಿಕೆ ವಿಚಾರದ ಕುರಿತು ಅಧ್ಯಯನ ನಡೆಸಲು ಕಾನೂನು ಸಚಿವ ಎಚ್.ಕೆ. ಪಾಟೀಲ್ ನೇತೃತ್ವದಲ್ಲಿ ರಚಿಸಲಾಗಿದ್ದ ಸಂಪುಟ ಉಪ ಸಮಿತಿ ಸರಕಾರಕ್ಕೆ ಸಲ್ಲಿಸಿದ ವರದಿಯಂತೆ 1 ಲಕ್ಷ ಕೋಟಿ ರೂ.ಗೂ ಅಧಿಕ ಬೆಲೆ ಬಾಳುವ ಕಬ್ಬಿಣದ ಅದಿರನ್ನು ಲೂಟಿ ಮಾಡಿರುವುದು ತಿಳಿದು ಬಂದಿದೆ. ಎಚ್.ಕೆ.ಪಾಟೀಲ್ ನೇತೃತ್ವದ ಸಂಪುಟ ಉಪ ಸಮಿತಿ ವರದಿಯನ್ನು ರಾಜ್ಯ ಸರಕಾರ ಸ್ವೀಕರಿಸಿದ್ದರೂ ಇದುವರೆಗೂ ಯಾವುದೇ ಕ್ರಮವಹಿಸಿಲ್ಲ. ಆದ್ದರಿಂದ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕೆಲವು ವ್ಯಕ್ತಿ, ಸಂಘ-ಸಂಸ್ಥೆಗಳು, ರಾಜಕಾರಣಿಗಳು ಮತ್ತು ಅಧಿಕಾರಿಗಳ ಸಹಕಾರದಿಂದ ಅಕ್ರಮವಾಗಿ 1ಲಕ್ಷ ಕೋಟಿ ರೂ. ಬೆಲೆಬಾಳುವ ಕಬ್ಬಿಣದ ಅದಿರನ್ನು ಲೂಟಿ ಮಾಡಿ, ಸರಕಾರದ ಬೊಕ್ಕಸಕ್ಕೆ ನಷ್ಟವುಂಟು ಮಾಡಿದ್ದಾರೆ. ಆದ್ದರಿಂದ ಕಾನೂನು ಸಚಿವ ಎಚ್.ಕೆ.ಪಾಟೀಲ್ ನೇತೃತ್ವದ ಸಂಪುಟ ಉಪ ಸಮಿತಿ ನೀಡಿರುವ ವರದಿಯಂತೆ ತಪ್ಪಿತಸ್ಥರು ಯಾವುದೇ ಪಕ್ಷದವರಾಗಿದ್ದರೂ, ಯಾವುದೇ ಅಧಿಕಾರಿಗಳಾಗಿರಲಿ, ಯಾವುದೇ ಸಂಘ-ಸಂಸ್ಥೆಯವರಾಗಿರಲಿ ಅಂತವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

1 hour ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

1 hour ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

1 hour ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

2 hours ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

11 hours ago