ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ವಿಧಾನ ಪರಿಷತ್ನಲ್ಲಿ ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಪ್ರಶ್ನೆಗೆ ಉತ್ತರಿಸಿದ ಅವರು, ನಕಲಿ ದಾಖಲೆ ಸೃಷ್ಠಸಿ ಭಾರತದಲ್ಲಿ ನೆಲೆಸಿದ್ದ 24 ಜನ ಪಾಕಿಸ್ತಾನ, 159 ಮಂದಿ ಬಾಂಗ್ಲಾದೇಶಿಯರನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ 115 ಮಂದಿ ನಕಲಿ ದಾಖಲೆ ಮೂಲಕ ಭಾರತದಲ್ಲಿ ವಾಸವಿರುವುದು ತಿಳಿದುಬಂದಿದೆ. ಅಕ್ರಮವಾಗಿ ಇರೋರನ್ನು ಗಡಿಪಾರು ಮಾಡುವ ಕೆಲಸ ಮಾಡುತ್ತಿದ್ದೇವೆ. ನಮ್ಮ ಪೊಲೀಸರು ಕೂಡ ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡಿದ್ದಾರೆ ಎಂದರು.
ನಕಲಿ ದಾಖಲೆ ಸೃಷ್ಟಿಸಿ ಭಾರತಕ್ಕೆ ಪ್ರವೇಶಿಸುವ ಪ್ರಜೆಗಳನ್ನು ಕಂಡುಹಿಡಿಯಲು ಬೆಂಗಳೂರಿನಲ್ಲಿ ವಿಶೇಷ ಘಟಕ ಸ್ಥಾಪಿಸಲಾಗಿದೆ. ಅಕ್ರಮವಾಗಿ ವಲಸೆ ಬರುವುದು ಹೊಸದೇನಲ್ಲ. ಬಾರ್ಡರ್ನಲ್ಲಿ ಸೈನಿಕರು ಅಕ್ರಮ ವಲಸೆ ತಡೆಗಟ್ಟುವಲ್ಲಿ ನಿರಂತರ ಕೆಲಸ ಮಾಡುತ್ತಿದ್ದಾರೆ. ಆದರೂ ಹೇಗೆ ಬರುತ್ತಾರೆ ಎನ್ನುವುದು ಪ್ರಶ್ನೆಯಾಗಿದೆ. ಪ್ರತಿವರ್ಷ ಅಕ್ರಮ ವಲಸೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಅಕ್ರಮವಾಗಿ ಇರೋರನ್ನು ಗಡಿಪಾರು ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಆಫ್ರಿಕಾದಿಂದ ಸ್ಟೂಡೆಂಟ್ ವಿಸಾದಲ್ಲಿ ಭಾರತಕ್ಕೆ ಬಂದು ಡ್ರಂಗ್ ದಂಧೆ ಮಾರಾಟ ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಇದೆ. ಈ ರೀತಿ ಅಕ್ರಮವಾಗಿ ಬಂದು ಇಲ್ಲಿ ಡ್ರಗ್ ದಂಧೆ ಜೊತೆಗೆ ಇನ್ನಿತರ ಕಾರ್ಯಚಟುವಟಿಕೆಯಲ್ಲಿ ತೊಡಗಿರುವವರನ್ನು ಪತ್ತೆಹಚ್ಚಲು ಪ್ರತಿ ಜಿಲ್ಲೆಯಲ್ಲೂ ಸ್ಪೆಷಲ್ ಟಾಸ್ಕ್ ಪೋರ್ಸ್ ರಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…
ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…
ಫಾತಿಮಾ ರಲಿಯಾ ಯು ಟ್ಯೂಬ್ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್ಜಿಪಿಟಿಯ ಬಳಿ…
ಜಯಶಂಕರ್ ನಾನು ಶಾಲೆಯ ಅಂಗಳದಲ್ಲಿ ಕುಳಿತುಕೊಂಡು ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವಂತಹ ಸಂದರ್ಭದಲ್ಲಿ ನಾಲ್ಕಾರು ಸೋಲಿಗರು ಗುಂಪಿನಲ್ಲಿ ಏನೇನೋ ಗೊಣಗಾಡಿಕೊಂಡು ಹೋಗುತ್ತಿದ್ದರು.…
ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ…
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…