ರಾಜ್ಯ

ಬಿಜೆಪಿ ನಾಯಕರಿಂದ ಬರ ಅಧ್ಯಯನ ಎಂಬ ಹೊಸ ನಾಟಕ : ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯ ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸ ಎಂಬ ಹೊಸ ನಾಟಕ ಶುರುಮಾಡಿದ್ದಾರೆ. ಇಲ್ಲಿ ನಾಟಕ ಮಾಡುವ ಬದಲು ಬರ ಅಧ್ಯಯನ ತಂದಿಂದ ಕೇಂದ್ರಕ್ಕೆ ವರದಿ ಕೊಡಲು ಒತ್ತಾಯಿಸಬಹುದಲ್ಲವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ದಿನೇಶ್, ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸ ಎಂಬ ಹೊಸ ನಾಟಕ ಶುರುಮಾಡಿದ್ದಾರೆ. ಈ ಪ್ರವಾಸದಿಂದ ಬಿಜೆಪಿ ನಾಯಕರು ಏನು ಕಡಿದು ಕಟ್ಟೆ ಹಾಕಲಿದ್ದಾರೆ? ಈಗಾಗಲೇ ಕೇಂದ್ರದ ಅಧಿಕಾರಿಗಳ ತಂಡ ರಾಜ್ಯಕ್ಕೆ ಬಂದು ಬರ ಅಧ್ಯಯನ ಮಾಡಿ ಹೋಗಿದೆ. ಕೇಂದ್ರದ ತಂಡ ರಾಜ್ಯಕ್ಕೆ ಬಂದು ಹೋದದ್ದಷ್ಟೇ ಗೊತ್ತು. ಆದರೆ, ಈವರೆಗೂ ಬರದ ಬಗ್ಗೆ ಕೇಂದ್ರದ ತಂಡ ಏನು ವರದಿ ನೀಡಿದೆ ಎಂಬ ಸುಳಿವೇ ಇಲ್ಲ. ರಾಜ್ಯ ಬಿಜೆಪಿ ನಾಯಕರು ಇಲ್ಲಿ ಬರ ಪ್ರವಾಸದ ನಾಟಕ ಮಾಡುವ ಬದಲು ಕೇಂದ್ರಕ್ಕೆ ವರದಿ ಕೊಡುವಂತೆ ಒತ್ತಾಯಿಸಬಹುದಲ್ಲವೆ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸ ಮಾಡಿ ಏನು ವರದಿ ನೀಡಲಿದ್ದಾರೆ? ರಾಜ್ಯದಲ್ಲಿ ಬರ ಇದೆ ಎಂದು ವರದಿ ನೀಡುವರೋ ಅಥವಾ ಇಲ್ಲ ಎಂದು ವರದಿ ನೀಡುವರೋ? ರಾಜ್ಯ ಬಿಜೆಪಿ ನಾಯಕರೇನು ಜನಪರ ಕಾಳಜಿಯಿಂದ ಈ ಅಧ್ಯಯನ ಪ್ರವಾಸ ಮಾಡುತ್ತಿಲ್ಲ. ಬದಲಿಗೆ ಕಳೆದು ಹೋಗಿರುವ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬರ ಅಧ್ಯಯನ ಪ್ರವಾಸದ ಪ್ರಹಸನ ಮಾಡುತ್ತಿದ್ದಾರಷ್ಟೆ ಎಂದು ಕಿಡಿಕಾರಿದ್ದಾರೆ.

ಎನ್‌ಡಿಆರ್‌ಎಫ್‌ ನಿಯಮದ ಅನುಸಾರ ಕೇಂದ್ರ ಬರ ಪರಿಹಾರದ ಹಣ ಬಿಡುಗಡೆ ಮಾಡಬೇಕು. ಅದರೆ ಇಲ್ಲಿಯವರೆಗೂ ಪರಿಹಾರದ ಹಣ ಬಿಡುಗಡೆಯಾಗಿಲ್ಲ. ಯಾಕೆಂದರೆ ಮೋದಿ ಸರ್ಕಾರಕ್ಕೆ ಕರ್ನಾಟಕ ನೆನಪಾಗುವುದು ಚುನಾವಣಾ ಸಂದರ್ಭದಲ್ಲಿ ಮಾತ್ರ. ಕರ್ನಾಟಕ ಸಂಕಷ್ಟದಲ್ಲಿದ್ದಾಗಲೆಲ್ಲಾ ಕೇಂದ್ರ ಕೈ ಕೊಡುವುದು ಸಾಮಾನ್ಯ ಸಂಗತಿ. ಬಿಜೆಪಿ ನಾಯಕರು ಬರ ಅಧ್ಯಯನಕ್ಕಾಗಿ ರಾಜ್ಯ ಪ್ರವಾಸ ಮಾಡುವುದು ಬಿಟ್ಟು ದೆಹಲಿ ಪ್ರವಾಸ ಮಾಡಲಿ. ಆಗಲಾದರೂ ಕೇಂದ್ರ ಪರಿಹಾರ ಹಣ ಬಿಡುಗಡೆ ಮಾಡಬಹುದೇನೋ ಎಂದಿದ್ದಾರೆ.

lokesh

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

2 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

2 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

2 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

2 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

2 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

2 hours ago