ರಾಜ್ಯ

ಬಿಜೆಪಿ ನಾಯಕರಿಂದ ಬರ ಅಧ್ಯಯನ ಎಂಬ ಹೊಸ ನಾಟಕ : ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯ ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸ ಎಂಬ ಹೊಸ ನಾಟಕ ಶುರುಮಾಡಿದ್ದಾರೆ. ಇಲ್ಲಿ ನಾಟಕ ಮಾಡುವ ಬದಲು ಬರ ಅಧ್ಯಯನ ತಂದಿಂದ ಕೇಂದ್ರಕ್ಕೆ ವರದಿ ಕೊಡಲು ಒತ್ತಾಯಿಸಬಹುದಲ್ಲವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ದಿನೇಶ್, ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸ ಎಂಬ ಹೊಸ ನಾಟಕ ಶುರುಮಾಡಿದ್ದಾರೆ. ಈ ಪ್ರವಾಸದಿಂದ ಬಿಜೆಪಿ ನಾಯಕರು ಏನು ಕಡಿದು ಕಟ್ಟೆ ಹಾಕಲಿದ್ದಾರೆ? ಈಗಾಗಲೇ ಕೇಂದ್ರದ ಅಧಿಕಾರಿಗಳ ತಂಡ ರಾಜ್ಯಕ್ಕೆ ಬಂದು ಬರ ಅಧ್ಯಯನ ಮಾಡಿ ಹೋಗಿದೆ. ಕೇಂದ್ರದ ತಂಡ ರಾಜ್ಯಕ್ಕೆ ಬಂದು ಹೋದದ್ದಷ್ಟೇ ಗೊತ್ತು. ಆದರೆ, ಈವರೆಗೂ ಬರದ ಬಗ್ಗೆ ಕೇಂದ್ರದ ತಂಡ ಏನು ವರದಿ ನೀಡಿದೆ ಎಂಬ ಸುಳಿವೇ ಇಲ್ಲ. ರಾಜ್ಯ ಬಿಜೆಪಿ ನಾಯಕರು ಇಲ್ಲಿ ಬರ ಪ್ರವಾಸದ ನಾಟಕ ಮಾಡುವ ಬದಲು ಕೇಂದ್ರಕ್ಕೆ ವರದಿ ಕೊಡುವಂತೆ ಒತ್ತಾಯಿಸಬಹುದಲ್ಲವೆ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸ ಮಾಡಿ ಏನು ವರದಿ ನೀಡಲಿದ್ದಾರೆ? ರಾಜ್ಯದಲ್ಲಿ ಬರ ಇದೆ ಎಂದು ವರದಿ ನೀಡುವರೋ ಅಥವಾ ಇಲ್ಲ ಎಂದು ವರದಿ ನೀಡುವರೋ? ರಾಜ್ಯ ಬಿಜೆಪಿ ನಾಯಕರೇನು ಜನಪರ ಕಾಳಜಿಯಿಂದ ಈ ಅಧ್ಯಯನ ಪ್ರವಾಸ ಮಾಡುತ್ತಿಲ್ಲ. ಬದಲಿಗೆ ಕಳೆದು ಹೋಗಿರುವ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬರ ಅಧ್ಯಯನ ಪ್ರವಾಸದ ಪ್ರಹಸನ ಮಾಡುತ್ತಿದ್ದಾರಷ್ಟೆ ಎಂದು ಕಿಡಿಕಾರಿದ್ದಾರೆ.

ಎನ್‌ಡಿಆರ್‌ಎಫ್‌ ನಿಯಮದ ಅನುಸಾರ ಕೇಂದ್ರ ಬರ ಪರಿಹಾರದ ಹಣ ಬಿಡುಗಡೆ ಮಾಡಬೇಕು. ಅದರೆ ಇಲ್ಲಿಯವರೆಗೂ ಪರಿಹಾರದ ಹಣ ಬಿಡುಗಡೆಯಾಗಿಲ್ಲ. ಯಾಕೆಂದರೆ ಮೋದಿ ಸರ್ಕಾರಕ್ಕೆ ಕರ್ನಾಟಕ ನೆನಪಾಗುವುದು ಚುನಾವಣಾ ಸಂದರ್ಭದಲ್ಲಿ ಮಾತ್ರ. ಕರ್ನಾಟಕ ಸಂಕಷ್ಟದಲ್ಲಿದ್ದಾಗಲೆಲ್ಲಾ ಕೇಂದ್ರ ಕೈ ಕೊಡುವುದು ಸಾಮಾನ್ಯ ಸಂಗತಿ. ಬಿಜೆಪಿ ನಾಯಕರು ಬರ ಅಧ್ಯಯನಕ್ಕಾಗಿ ರಾಜ್ಯ ಪ್ರವಾಸ ಮಾಡುವುದು ಬಿಟ್ಟು ದೆಹಲಿ ಪ್ರವಾಸ ಮಾಡಲಿ. ಆಗಲಾದರೂ ಕೇಂದ್ರ ಪರಿಹಾರ ಹಣ ಬಿಡುಗಡೆ ಮಾಡಬಹುದೇನೋ ಎಂದಿದ್ದಾರೆ.

lokesh

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

4 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

17 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

17 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

17 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

17 hours ago