ಬೆಂಗಳೂರು : ರಾಜ್ಯ ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸ ಎಂಬ ಹೊಸ ನಾಟಕ ಶುರುಮಾಡಿದ್ದಾರೆ. ಇಲ್ಲಿ ನಾಟಕ ಮಾಡುವ ಬದಲು ಬರ ಅಧ್ಯಯನ ತಂದಿಂದ ಕೇಂದ್ರಕ್ಕೆ ವರದಿ ಕೊಡಲು ಒತ್ತಾಯಿಸಬಹುದಲ್ಲವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ದಿನೇಶ್, ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸ ಎಂಬ ಹೊಸ ನಾಟಕ ಶುರುಮಾಡಿದ್ದಾರೆ. ಈ ಪ್ರವಾಸದಿಂದ ಬಿಜೆಪಿ ನಾಯಕರು ಏನು ಕಡಿದು ಕಟ್ಟೆ ಹಾಕಲಿದ್ದಾರೆ? ಈಗಾಗಲೇ ಕೇಂದ್ರದ ಅಧಿಕಾರಿಗಳ ತಂಡ ರಾಜ್ಯಕ್ಕೆ ಬಂದು ಬರ ಅಧ್ಯಯನ ಮಾಡಿ ಹೋಗಿದೆ. ಕೇಂದ್ರದ ತಂಡ ರಾಜ್ಯಕ್ಕೆ ಬಂದು ಹೋದದ್ದಷ್ಟೇ ಗೊತ್ತು. ಆದರೆ, ಈವರೆಗೂ ಬರದ ಬಗ್ಗೆ ಕೇಂದ್ರದ ತಂಡ ಏನು ವರದಿ ನೀಡಿದೆ ಎಂಬ ಸುಳಿವೇ ಇಲ್ಲ. ರಾಜ್ಯ ಬಿಜೆಪಿ ನಾಯಕರು ಇಲ್ಲಿ ಬರ ಪ್ರವಾಸದ ನಾಟಕ ಮಾಡುವ ಬದಲು ಕೇಂದ್ರಕ್ಕೆ ವರದಿ ಕೊಡುವಂತೆ ಒತ್ತಾಯಿಸಬಹುದಲ್ಲವೆ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸ ಮಾಡಿ ಏನು ವರದಿ ನೀಡಲಿದ್ದಾರೆ? ರಾಜ್ಯದಲ್ಲಿ ಬರ ಇದೆ ಎಂದು ವರದಿ ನೀಡುವರೋ ಅಥವಾ ಇಲ್ಲ ಎಂದು ವರದಿ ನೀಡುವರೋ? ರಾಜ್ಯ ಬಿಜೆಪಿ ನಾಯಕರೇನು ಜನಪರ ಕಾಳಜಿಯಿಂದ ಈ ಅಧ್ಯಯನ ಪ್ರವಾಸ ಮಾಡುತ್ತಿಲ್ಲ. ಬದಲಿಗೆ ಕಳೆದು ಹೋಗಿರುವ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬರ ಅಧ್ಯಯನ ಪ್ರವಾಸದ ಪ್ರಹಸನ ಮಾಡುತ್ತಿದ್ದಾರಷ್ಟೆ ಎಂದು ಕಿಡಿಕಾರಿದ್ದಾರೆ.
ಎನ್ಡಿಆರ್ಎಫ್ ನಿಯಮದ ಅನುಸಾರ ಕೇಂದ್ರ ಬರ ಪರಿಹಾರದ ಹಣ ಬಿಡುಗಡೆ ಮಾಡಬೇಕು. ಅದರೆ ಇಲ್ಲಿಯವರೆಗೂ ಪರಿಹಾರದ ಹಣ ಬಿಡುಗಡೆಯಾಗಿಲ್ಲ. ಯಾಕೆಂದರೆ ಮೋದಿ ಸರ್ಕಾರಕ್ಕೆ ಕರ್ನಾಟಕ ನೆನಪಾಗುವುದು ಚುನಾವಣಾ ಸಂದರ್ಭದಲ್ಲಿ ಮಾತ್ರ. ಕರ್ನಾಟಕ ಸಂಕಷ್ಟದಲ್ಲಿದ್ದಾಗಲೆಲ್ಲಾ ಕೇಂದ್ರ ಕೈ ಕೊಡುವುದು ಸಾಮಾನ್ಯ ಸಂಗತಿ. ಬಿಜೆಪಿ ನಾಯಕರು ಬರ ಅಧ್ಯಯನಕ್ಕಾಗಿ ರಾಜ್ಯ ಪ್ರವಾಸ ಮಾಡುವುದು ಬಿಟ್ಟು ದೆಹಲಿ ಪ್ರವಾಸ ಮಾಡಲಿ. ಆಗಲಾದರೂ ಕೇಂದ್ರ ಪರಿಹಾರ ಹಣ ಬಿಡುಗಡೆ ಮಾಡಬಹುದೇನೋ ಎಂದಿದ್ದಾರೆ.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…