ರಾಜ್ಯ

ಪ್ರಶಸ್ತಿ ಆಯ್ಕೆಗೆ ಹೊಸ ವ್ಯವಸ್ಥೆ ಜಾರಿಗೆ ತರಬೇಕಿದೆ : ಡಿಸಿಎಂ ಡಿಕೆಶಿ

ಬೆಂಗಳೂರು : ಸರ್ಕಾರ ನೀಡುವ ಪ್ರಶಸ್ತಿಗಳಿಗೆ ಅರ್ಜಿ ಹಾಕುವ ಪದ್ಧತಿ ನಿಲ್ಲಿಸಿ, ಪರಿಣಿತರ ಸಮಿತಿ ಮೂಲಕ ಆಯ್ಕೆ ಮಾಡುವ ವಿಧಾನದ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ನಗರದ ಗಾಂಧಿಭವನದಲ್ಲಿ ಶನಿವಾರ ನಡೆದ ಸಂಸ್ಕೃತಿ ಸಂಗಮ- 23 ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದ ಅವರು,ಪ್ರಶಸ್ತಿ ಆಯ್ಕೆಗೆ ಹೊಸ ವ್ಯವಸ್ಥೆ ಜಾರಿಗೆ ತರಬೇಕಿದೆ. ಯಾವುದೇ ಪ್ರಶಸ್ತಿಯಾದರೂ ಅದಕ್ಕೆ ಗೌರವ ಇರಬೇಕು. ಯಾವುದೇ ಒತ್ತಡಕ್ಕೆ ಒಳಗಾಗಿ ಪ್ರಶಸ್ತಿ ನೀಡಬಾರದು. ರಾಜ್ಯೋತ್ಸವದಷ್ಟೇ ವರ್ಷದ ಸಂಖ್ಯೆಯ ಪ್ರಶಸ್ತಿ ನೀಡುವ ಆಲೋಚನೆಯಿದೆ ಎಂದು ತಿಳಿಸಿದರು.

ನಾವೀಗ ಒಂದು ಸಂಕಷ್ಟದಲ್ಲಿ ಸಿಕ್ಕಿಹಾಕಿಕೊಂಡಿದ್ದೇವೆ. ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆನ್ಲೈನ್ ಅರ್ಜಿ ಕರೆದಿದ್ದೆವು. ಸುಮಾರು ಎರಡೂವರೆ ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಜಾತಿ, ಜಿಲ್ಲಾವಾರು ಮತ್ತು ಎಲ್ಲಾ ಕ್ಷೇತ್ರಗಳಿಗೆ ಆದ್ಯತೆ ನೀಡಬೇಕು. ಎಲ್ಲವನ್ನು ಲೆಕ್ಕ ಹಾಕುವಾಗ, ಯಾರನ್ನು ಆಯ್ಕೆ ಮಾಡುವುದು, ಯಾರನ್ನು ಬಿಡುವುದು ಎನ್ನುವ ಸವಾಲು ನಮ್ಮ ಮುಂದಿದೆ ಎಂದರು.

ಪ್ರಸ್ತುತ ವರ್ಷದ ಪ್ರಶಸ್ತಿ ನೀಡಲು ಎಲ್ಲಾ ಕ್ಷೇತ್ರಗಳ 20-30 ತಜ್ಞರ ಸಮಿತಿ ಮಾಡಲಾಗಿದೆ. ಸರ್ಕಾರ ನೀಡುವ ಯಾವುದೇ ಪ್ರಶಸ್ತಿಯನ್ನು ಸಮಿತಿಯೇ ಪರಿಶೀಲನೆ ಮಾಡಿ ನೀಡುವ ವ್ಯವಸ್ಥೆ ಜಾರಿಗೆ ತರಬೇಕು. ಹಿಂದೆ ಕೆಲವು ಸಲ ಪ್ರಶಸ್ತಿ ಪುರಸ್ಕೃತರ ಸಂಖ್ಯೆ 200- 300 ಕ್ಕೆ ಮುಟ್ಟಿದ್ದಿದೆ ಎಂದು ಹೇಳಿದರು.

ಸರ್ಕಾರ ಮಾಡಲು ಆಗದೇ ಇರುವ ಕೆಲಸಗಳನ್ನು ಸಂಘ- ಸಂಸ್ಥೆಗಳು, ಮಠಗಳು ಮಾಡುತ್ತಿವೆ. ಅನೇಕ ಸಾಧಕರನ್ನು ಗುರುತಿಸಿ, ಸಮಾಜದ ಒಳಿತಿಗೆ ಕೆಲಸ ಮಾಡುತ್ತಿವೆ. ಇಲ್ಲಿ ನಾನೊಬ್ಬನೇ ಅಲ್ಲ, ನಮ್ಮ ಹಿರಿಯರನ್ನು ನೆನಪಿಸಿಕೊಳ್ಳಬೇಕು. ಅಧಿಕಾರ ಇರಲಿ, ಇಲ್ಲದಿರಲಿ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಸಿ. ಸೋಮಶೇಖರ್ ಅವರು ಪತ್ನಿಯೊಟ್ಟಿಗೆ ಸೇರಿ ಮಾಡುತ್ತಿದ್ದಾರೆ. ದೇವರು ವರ, ಶಾಪ ಏನನ್ನೂ ಕೊಡುವುದಿಲ್ಲ, ಕೇವಲ ಅವಕಾಶ ಕೊಡುತ್ತಾನೆ. ಈ ಅವಕಾಶವನ್ನು ಸಿ.ಸೋಮಶೇಖರ್ ಅವರು ಸಮಾಜಮುಖಿ ಕೆಲಸಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

lokesh

Recent Posts

ಮೈಸೂರಿನಲ್ಲಿ ಯಾವುದೇ ಡ್ರಗ್ ಪತ್ತೆಯಾಗಿಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಮೈಸೂರು: ಮೈಸೂರು ಪೊಲೀಸರು ನನಗೆ ಸರಿಯಾದ ಮಾಹಿತಿ ಕೊಟ್ಟಿದ್ದು, ಯಾವುದೇ ಡ್ರಗ್ಸ್‌ ಪತ್ತೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ…

52 mins ago

ಸಿದ್ದರಾಮಯ್ಯ ಬದಲಾವಣೆ ಬಗ್ಗೆ ಹೈಕಮಾಂಡ್ ಎಲ್ಲೂ ಮಾತನಾಡಿಲ್ಲ: ಗೃಹ ಸಚಿವ ಪರಮೇಶ್ವರ್‌

ಮೈಸೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್‌ ಎಲ್ಲೂ ಕೂಡ ಮಾತನಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌…

1 hour ago

ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ: ಬಸ್‌ ಹರಿದು ಯುವತಿ ಸಾವು

ಬೆಂಗಳೂರು: ಕಿಲ್ಲರ್‌ ಬಿಎಂಟಿಸಿ ಬಸ್‌ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಟಿನ್‌ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು…

2 hours ago

ಬೆಂಗಳೂರಿನಲ್ಲಿ ಮತ್ತೆ ಹೆಚ್ಚಿದ ಚಳಿಯ ಅಬ್ಬರ: ತಾಪಮಾನ ಎಷ್ಟಿದೆ ಗೊತ್ತಾ?

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮತ್ತೆ ಚಳಿಯ ಅಬ್ಬರ ಜೋರಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕೆಲ…

2 hours ago

ಮೆಟ್ರೋ ದರ ಹೆಚ್ಚಳ ವಿಚಾರ: ಚೇರ್ಮನ್‌ ಜೊತೆ ಮಾತುಕತೆ ನಡೆಸುತ್ತೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಮಂಗಳೂರು: ಮೆಟ್ರೋ ದರ ಶೇಕಡಾ.5ರಷ್ಟು ಹೆಚ್ಚಳ ಸಂಬಂಧ ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್‌ ಜೊತೆ ಮಾತನಾಡುವೆ ಎಂದು ಡಿಸಿಎಂ…

2 hours ago

ಮೈಸೂರು: 140 ಕೋಟಿ ಮೌಲ್ಯದ ಜಾಗ ಅತಿಕ್ರಮಣ ತೆರವು ಕಾರ್ಯಾಚರಣೆ

ಮೈಸೂರು: ವಿಜಯನಗರ 3ನೇ ಹಂತದಲ್ಲಿನ ಸುಮಾರು 7 ಎಕರೆ ಜಾಗದ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ಮುಂಜಾನೆ ನಡೆಯಿತು.…

3 hours ago