ರಾಜ್ಯ

ಅರಣ್ಯದ ಧಾರಣಾಶಕ್ತಿ ತಿಳಿಯಲೂ ಸೂಚನೆ: ಸಚಿವ ಈಶ್ವರ್ ಖಂಡ್ರೆ

ಬೀದರ್: ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಹುಲಿ ಸಂರಕ್ಷಿತ ಧಾಮ ಸೇರಿದಂತೆ ರಾಜ್ಯದ ಎಲ್ಲ ಅರಣ್ಯ ಪ್ರದೇಶದಲ್ಲಿ ಇಂದಿನಿಂದ ಹುಲಿ ಹಾಗೂ ಮಾಂಸಹಾರಿ ಪ್ರಾಣಿಗಳ ಗಣತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಭಾಲ್ಕಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ದೇಶಾದ್ಯಂತ ಹುಲಿ ಅಂದಾಜು -2026 ನಡೆಯುತ್ತಿದ್ದು, ಇದು 6ನೇ ಅಂತ ಪ್ರಯೋಗವಾಗಿದೆ. ಈ ಹಿಂದೆ 2006, 2010, 2014, 2018 ಮತ್ತು 2022ರಲ್ಲಿ ಗಣತಿ ನಡೆದಿತ್ತು. ರಾಜ್ಯದಲ್ಲಿ ಸುಮಾರು 563 ಹುಲಿಗಳಿವೆ ಎಂದು ಅಂದಾಜಿಸಲಾಗಿತ್ತು ಮತ್ತು ರಾಜ್ಯ ಹುಲಿ ಸಂಖ್ಯೆಯಲ್ಲಿ ದೇಶದಲ್ಲೇ 2ನೇ ಸ್ಥಾನ ಪಡೆದಿತ್ತು ಎಂದರು.

ರಾಜ್ಯದ ಅರಣ್ಯ ಪ್ರದೇಶಗಳ ಪ್ರತಿ ವಲಯದಲ್ಲಿರುವ ಎಲ್ಲ 38 ಅರಣ್ಯ ವಿಭಾಗದ ಗಸ್ತುಗಳಲ್ಲಿ ಈ ಪ್ರಕ್ರಿಯೆ ನಡೆಯಲಿದ್ದು, ಇದಕ್ಕಾಗಿ ಕಳೆದ ಅಕ್ಟೋಬರ್ -ಡಿಸೆಂಬರ್ ನಲ್ಲಿ 5 ಹುಲಿ ಸಂರಕ್ಷಿತ ಪ್ರದೇಶಗಳಿಗೆ ಪ್ರತ್ಯೇಕವಾಗಿ ಮತ್ತು ರಾಜ್ಯದ ಎಲ್ಲಾ 13 ಅರಣ್ಯ ವೃತ್ತಗಳ ಮುಂಚೂಣಿ ಸಿಬ್ಬಂದಿಗೂ ತರಬೇತಿ ನೀಡಲಾಗಿದೆ. ಇಂದಿನಿಂದ 3 ದಿನಗಳ ಕಾಲ ರಾಜ್ಯದ ಎಲ್ಲ ಗಸ್ತಿನಲ್ಲಿ 3 ಜನರ ತಂಡ ಪ್ರತಿ ನಿತ್ಯ 5 ಕಿ.ಮೀ. ಕಾಡಿನಲ್ಲಿ ಸಂಚರಿಸಿ ಹುಲಿ, ಚಿರತೆ ಸೇರಿದಂತೆ ಎಲ್ಲ ಮಾಂಸಹಾರಿ ಪ್ರಾಣಿಗಳ ಮತ್ತು ಆನೆಯ ಕಾಲುಗುರುತು, ಲದ್ದಿ, ಪ್ರತ್ಯಕ್ಷ ದರ್ಶನ ಇತ್ಯಾದಿ ವಿವರ ಕಲೆ ಹಾಕಲಿವೆ. ಬಳಿಕ ಜನವರಿ 15ರಿಂದ 17ರವರೆಗೆ 14 ಅರಣ್ಯ ವಿಭಾಗದಲ್ಲಿ 2ನೇ ಹಂತದ ಗಣತಿ ಅಂದಾಜು ನಡೆಯಲಿದ್ದು, ಪ್ರತಿ ತಂಡ ಕಾಡಿನಲ್ಲಿ ಸಂಚರಿಸಿ ಜಿಂಕೆ, ಕಡವೆ, ಕಾಡೆಮ್ಮೆ, ಕಾಡುಕೋಣ ಸೇರಿದಂತೆ ಸಸ್ಯಹಾರಿ ಪ್ರಾಣಿಗಳ ಸಾಕ್ಷಾತ್ ದರ್ಶನದ ಮಾಹಿತಿ ಕಲೆ ಹಾಕುತ್ತವೆ ಇದರಿಂದ ಎಲ್ಲಿ ಕ್ಯಾಮರಾ ಟ್ರ್ಯಾಪ್ ಅಳವಡಿಸಬೇಕು ಎಂಬುದನ್ನು ನಿರ್ಧರಿಸಲು ಅನುಕೂಲವಾಗುತ್ತದೆ ಎಂದರು.

ಹುಲಿ ಯೋಜನೆ ನಿರ್ದೇಶಕ ರಮೇಶ್ ಕುಮಾರ್ ಅವರನ್ನು ಎನ್.ಟಿ.ಸಿ.ಎ.ಗೆ ನೋಡಲ್ ಅಧಿಕಾರಿಯಾಗಿ ನಾಮನಿರ್ದೇಶನ ಮಾಡಿದ್ದು, ಇವರು ಈ ಅಂದಾಜಿನ ಉಸ್ತುವಾರಿ ವಹಿಸಲಿದ್ದಾರೆ. ಇವರಿಗೆ, ಯಾವ ಪ್ರದೇಶದಲ್ಲಿ ಎಷ್ಟು ಹುಲಿ ಮತ್ತು ಇತರ ಮಾಂಸಹಾರಿ ಪ್ರಾಣಿಗಳಿವೆ. ಆ ವಿಭಾಗದಲ್ಲಿ ಎಷ್ಟು ಸಸ್ಯಹಾರಿ ಪ್ರಾಣಿಗಳಿವೆ ಎಂಬುದನ್ನು ಪಟ್ಟಿಮಾಡಿ, ಯಾವ ಅರಣ್ಯದಲ್ಲಿ ಎಷ್ಟು ಹುಲಿಗಳಿವೆ, ಅವುಗಳಿಗೆ ಅಗತ್ಯ ಆಹಾರವಾದ ಸಸ್ಯಹಾರಿ ಪ್ರಾಣಿಗಳು ಎಷ್ಟಿವೆ ಎಂದು ಗ್ರಹಿಸಿ ಕಾನನದ ಧಾರಣಾ ಸಾಮರ್ಥ್ಯ (ಕ್ಯಾರಿಯಿಂಗ್ ಕ್ಯಪಾಸಿಟಿ) ಗುರುತಿಸಲೂ ಸೂಚಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

2 ಹಂತದ ಸಮೀಕ್ಷೆಯಲ್ಲಿ ಕಲೆಹಾಕಲಾದ ಮಾಂಸಹಾರಿ ಪ್ರಾಣಿಗಳ ದತ್ತಾಂಶ ಬಳಿಸಿಕೊಂಡು ಮೂರನೇ ಹಂತದಲ್ಲಿ ಸೂಕ್ತ ಸ್ಥಳಗಳಲ್ಲಿ ಕ್ಯಾಮೆರಾ ಟ್ರ್ಯಾಪ್ ಗಳನ್ನು ಅಳವಡಿಸಲಾಗುವುದು, 5 ಹುಲಿ ಮೀಸಲು ಪ್ರದೇಶಗಳಲ್ಲಿ 2230 ಕ್ಯಾಮೆರಾ ಟ್ರ್ಯಾಪ್ ಗಳಿದ್ದು, ಎಲ್ಲಾ 5 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಕ್ಯಾಮೆರಾ ಟ್ರ್ಯಾಪ್ ಸಮೀಕ್ಷೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ ಎಂದೂ ತಿಳಿಸಿದರು.
ಈ ಪೈಕಿ ನಾಗರಹೊಳೆ ಹುಲಿ ಮೀಸಲು ಪ್ರದೇಶ (600 ಕ್ಯಾಮೆರಾ ಟ್ರ್ಯಾಪ್), ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ (550 ); ಬಿಆರ್.ಟಿ ಯಲ್ಲಿ (300); ಭದ್ರಾದಲ್ಲಿ (330); ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ (450 ಕ್ಯಾಮೆರಾ ಟ್ರ್ಯಾಪ್ ಇದೆ ಎಂದು ವಿವರಿಸಿದರು.

ಹುಲಿ ಸಂರಕ್ಷಿತ ಪ್ರದೇಶದ ಹೊರಗೆ ಸಹ ಕ್ಯಾಮೆರಾ ಟ್ರ್ಯಾಪ್ ಅಳವಡಿಸಲು ಕ್ರಮ ವಹಿಸಲಾಗಿದ್ದು, ಕ್ಯಾಮರಾ ಟ್ರ್ಯಾಪ್ ಸಮೀಕ್ಷೆ ಪೂರ್ಣಗೊಂಡಿರುವ ಹತ್ತಿರದ ಹುಲಿ ಮೀಸಲು ಪ್ರದೇಶಗಳು ಕ್ಯಾಮರಾ ಪೂರೈಸುತ್ತವೆ ಎಂದೂ ತಿಳಿಸಿದರು.

ಉದಾಹರಣಗೆ ಕಾವೇರಿ ವನ್ಯಜೀವಿ ಧಾಮಕ್ಕೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಕ್ಯಾಮರಾ ಒದಗಿಸಿದರೆ, ಎಂಎಂ ಹಿಲ್ಸ್ ವನ್ಯಜೀವಿ ಧಾಮಕ್ಕೆ ಬಿಆರ್.ಟಿ.ಯಿಂದ ಕ್ಯಾಮರಾ ಒದಗಿಸಲಾಗುವುದು ಅದೇ ರೀತಿ ನಾಗರಹೊಳೆ ಹುಲಿ ಮೀಸಲು ಪ್ರದೇಶದಿಂದ ಮಡಿಕೇರಿ ವನ್ಯಜೀವಿ ವಿಭಾಗ ಮತ್ತು ಮೈಸೂರು ಪ್ರಾದೇಶಿಕ ವಿಭಾಗಕ್ಕೆ ಕ್ಯಾಮೆರಾ ಪೂರೈಸಲಾಗುವುದು ಎಂದರು.

ಹುಲಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಡಿನಿಂದ ನಾಡಿಗೆ ಬರುತ್ತಿರುವುದನ್ನು ನೋಡಿದರೆ ಈ ಬಾರಿ ರಾಜ್ಯದಲ್ಲಿ ಹುಲಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವುದು ಗೋಚರಿಸುತ್ತಿದೆ. ಇದು ಗಣತಿಯಿಂದ ನಿಖರವಾಗಿ ತಿಳಿಯಲಿದೆ ಎಂದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

17 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

17 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

17 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

17 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

17 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

17 hours ago