kn rajanna (1)
ತುಮಕೂರು: ಕಾಂಗ್ರೆಸ್ ಜೊತೆಗೆ ಬಿಜೆಪಿ ಪಕ್ಷದಲ್ಲೂ ನವೆಂಬರ್ ಕ್ರಾಂತಿ ಆಗೋದು ಪಕ್ಕಾ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಹಾರ ಚುನಾವಣೆ ಬಳಿಕ ಸಂಪುಟ ವಿಸ್ತರಣೆಯಾಗುತ್ತದೆ. ನಾನು ಕಹಿ ಹಾಗೂ ಸಿಹಿ ಎರಡನ್ನೂ ಸ್ವೀಕರಿಸುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ:-ರಂಗೇರಿದ ಬಿಹಾರ ವಿಧಾನಸಭಾ ಕಣ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಜೊತೆಗೆ ಬಿಜೆಪಿಯಲ್ಲೂ ನವೆಂಬರ್ನಲ್ಲಿ ಕ್ರಾಂತಿ ಆಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ ಅವರನ್ನು ತೆಗೆಯಲು ದೊಡ್ಡ ಗುಂಪೊಂದು ಕಾದು ಕುಳಿತಿದೆ. ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ತೆಗೆದರೆ ಯಡಿಯೂರಪ್ಪ ಸುಮ್ಮನೆ ಇರಲ್ಲ ಎಂದರು.
ಇನ್ನು 1972ರಲ್ಲಿ ಡಿ.ದೇವರಾಜ ಅರಸು ಅವರು ಶಾಸಕರಲ್ಲದಿದ್ದರೂ ಸಿಎಂ ಆಗಿದ್ದರು. ಇದಕ್ಕೆಲ್ಲಾ ಅಂದಿನ ಶಾಸಕರ ಅಭಿಪ್ರಾಯವೇ ಕಾರಣವಾಗಿತ್ತು. ಸಿದ್ದರಾಮಯ್ಯ ಒಬ್ಬ ಎಲೆಕ್ಟೆಡ್ ಮುಖ್ಯಮಂತ್ರಿ. ಮುಂದೆ ಏನಾದರೂ ಸಿಎಂ ಬದಲಿಸಬೇಕಾದರೆ ವೀಕ್ಷಕರನ್ನು ಕಳುಹಿಸಿ ಎಐಸಿಸಿ ಅಭಿಪ್ರಾಯ ಸಂಗ್ರಹಿಸುತ್ತದೆ. ಈ ಎಲ್ಲಾ ಗೊಂದಲಕ್ಕೆ ಹೈಕಮಾಂಡ್ ತೆರೆ ಎಳೆಯಬೇಕು ಎಂದು ಆಗ್ರಹಿಸಿದರು.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…