ಕಲಿಕೆ ಹಾಗೂ ಬೋಧನೆಯ ಗುಣಮಟ್ಟ ಸುಧಾರಿಸಲು ಕ್ರಮ…
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಆರಂಭಿಸಿರುವ ʻಆಟ ಆಧಾರಿತ ಗಣಿತ ಪಠ್ಯಕ್ರಮʼವನ್ನು ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೂ ಪರಿಚಯಿಸಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ.
ಬುನಾದಿ ಹಂತದಿಂದಲೇ ಕಲಿಕೆ ಮತ್ತು ಬೋಧನೆಯ ಗುಣಮಟ್ಟ ಸುಧಾರಿಸಲು, ನಾವೀನ್ಯತೆಗೆ ಒತ್ತು ನೀಡಲು ಶಿಕ್ಷಣ ಇಲಾಖೆ ʻಜೆ-ಪಿಎಎಲ್ ದಕ್ಷಿಣ ಏಷ್ಯಾʼ ಜೊತೆ ಬುಧವಾರ ಒಪ್ಪಂದ ಮಾಡಿಕೊಂಡಿದೆ.
ಮೊದಲ ಹಂತದಲ್ಲಿ ಪೂರ್ವ ಪ್ರಾಥಮಿಕ ಶಾಲೆಯ ಮಕ್ಕಳ ಗಣಿತ ಕಲಿಕೆಗೆ ‘ಚಿಲಿ-ಪಿಲಿ’ ಪರಿಚಯ, 6, 7 ಮತ್ತು 8ನೇ ತರಗತಿಗಳಲ್ಲಿ ಹಿಂದುಳಿದ ಮಕ್ಕಳಿಗೆ ಪರಿಹಾರ ಬೋಧನೆಗೆ ‘ಮರು ಸಿಂಚನ’ ಹಾಗೂ 3ರಿಂದ 8ನೇ ತಗರತಿಯ ಮಕ್ಕಳಿಗೆ ‘ಗಣಿತ–ಗಣಕ’ ಕಲಿಕೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ನೆರವು ದೊರೆಯಲಿದೆ.
ಸರ್ಕಾರಿ ಶಾಲೆಯ ಶಿಕ್ಷಕರಿಗೆ ವಾರಕ್ಕೆ ಒಂದು ದಿನ ಕನಿಷ್ಠ 45 ನಿಮಿಷ ಮೊಬೈಲ್ ಫೋನ್ಗಳ ಮೂಲಕ ವಿಶೇಷ ತರಗತಿ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಪರಿಕಲ್ಪನೆಗಳನ್ನು ವಿವರಿಸಲು, ಗಣಿತದ ಸಮಸ್ಯೆಗಳನ್ನು ಪರಿಹರಿಸಲು ಸಂಸ್ಥೆಯ ಪ್ರತಿನಿಧಿಗಳು ನೆರವಾಗಲಿದ್ದಾರೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…