ಕಲಿಕೆ ಹಾಗೂ ಬೋಧನೆಯ ಗುಣಮಟ್ಟ ಸುಧಾರಿಸಲು ಕ್ರಮ…
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಆರಂಭಿಸಿರುವ ʻಆಟ ಆಧಾರಿತ ಗಣಿತ ಪಠ್ಯಕ್ರಮʼವನ್ನು ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೂ ಪರಿಚಯಿಸಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ.
ಬುನಾದಿ ಹಂತದಿಂದಲೇ ಕಲಿಕೆ ಮತ್ತು ಬೋಧನೆಯ ಗುಣಮಟ್ಟ ಸುಧಾರಿಸಲು, ನಾವೀನ್ಯತೆಗೆ ಒತ್ತು ನೀಡಲು ಶಿಕ್ಷಣ ಇಲಾಖೆ ʻಜೆ-ಪಿಎಎಲ್ ದಕ್ಷಿಣ ಏಷ್ಯಾʼ ಜೊತೆ ಬುಧವಾರ ಒಪ್ಪಂದ ಮಾಡಿಕೊಂಡಿದೆ.
ಮೊದಲ ಹಂತದಲ್ಲಿ ಪೂರ್ವ ಪ್ರಾಥಮಿಕ ಶಾಲೆಯ ಮಕ್ಕಳ ಗಣಿತ ಕಲಿಕೆಗೆ ‘ಚಿಲಿ-ಪಿಲಿ’ ಪರಿಚಯ, 6, 7 ಮತ್ತು 8ನೇ ತರಗತಿಗಳಲ್ಲಿ ಹಿಂದುಳಿದ ಮಕ್ಕಳಿಗೆ ಪರಿಹಾರ ಬೋಧನೆಗೆ ‘ಮರು ಸಿಂಚನ’ ಹಾಗೂ 3ರಿಂದ 8ನೇ ತಗರತಿಯ ಮಕ್ಕಳಿಗೆ ‘ಗಣಿತ–ಗಣಕ’ ಕಲಿಕೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ನೆರವು ದೊರೆಯಲಿದೆ.
ಸರ್ಕಾರಿ ಶಾಲೆಯ ಶಿಕ್ಷಕರಿಗೆ ವಾರಕ್ಕೆ ಒಂದು ದಿನ ಕನಿಷ್ಠ 45 ನಿಮಿಷ ಮೊಬೈಲ್ ಫೋನ್ಗಳ ಮೂಲಕ ವಿಶೇಷ ತರಗತಿ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಪರಿಕಲ್ಪನೆಗಳನ್ನು ವಿವರಿಸಲು, ಗಣಿತದ ಸಮಸ್ಯೆಗಳನ್ನು ಪರಿಹರಿಸಲು ಸಂಸ್ಥೆಯ ಪ್ರತಿನಿಧಿಗಳು ನೆರವಾಗಲಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…