ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2025-26ನೇ ಸಾಲಿನ ಬಜೆಟ್ ಸುಸ್ಥಿರ ಬೆಳವಣಿಗೆಗೆ ಪ್ರಾಯೋಗಿಕ ನೀಲ ನಕ್ಷೆ ಎಂದು ಎಫ್ಕೆಸಿಸಿಐನ ಅಧ್ಯಕ್ಷ ಎಂ.ಜಿ.ಬಾಲಕೃಷ್ಣ ಅವರು ಸ್ವಾಗತಿಸಿದ್ದಾರೆ.
ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಈ ಬಾರಿಯ ಬಜೆಟ್ ಸುಮಾರು 4 ಲಕ್ಷ ಕೋಟಿ ರೂಗಳ ಬಜೆಟ್ ಅಗಿದ್ದು, ಕರ್ನಾಟಕದ ಸುಸ್ಥಿರ ಅಭಿವೃದ್ದಿ ಗುರಿಗಳನ್ನು ಸಾಧಿಸಲು ಈ ಬಜೆಟ್ ಅಂತಿಮ ನಿರ್ಣಯವಾಗಲಿದೆ ಎಂದು ಹೇಳಿದರು.
ರಾಜ್ಯಾದಾದ್ಯಾಂತ ಮೂಲ ಸೌಕರ್ಯ, ಶಿಕ್ಷಣ ಮತ್ತು ಆರೋಗ್ಯ ರಕ್ಷಣೆಯಲ್ಲಿನ ಹೂಡಿಕೆಗಳ ಸಮಾನ ಬೇಳವಣಿಗೆಯನ್ನು ಖಚಿತ ಪಡಿಸಿಕೊಳ್ಳಲು, ಪ್ರಾದೇಶಿಕ ಅಸಮಾನತೆಗಳನ್ನು ಕಡಿಮೆ ಮಾಡಲು ಮತ್ತು ರಾಜ್ಯದ ಜನರ ಜೀವನದ ಗುಣಮಟ್ಟವನ್ನು ಹೆಚ್ಚಿಸಲು ಈ ಬಜೆಟ್ ಅನ್ನು ವಿನ್ಯಾಸಗೊಳಿಸಲಾಗಿದೆ. ಆದರೆ, ಮೂಲ ಸೌಕರ್ಯ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ನಿಖರವಾದ ಯೋಜನೆ ಮತ್ತು ಸಮನ್ವಯದ ಅವಶಯಕತೆ ಇದೆ ಎಂದರು.
ಒಂದು ಟ್ರಿಲಿಯನ್ ಆರ್ಥಿಕ ರಾಜ್ಯಾವಗುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ದಿಟ್ಟ ಹೆಜ್ಜೆ ಇರಿಸಿದ್ದಾರೆ. ಸರ್ವಜನರ ಅಭಿವೃದ್ದಿಗಾಗಿ ಸಮ ಸಮಾಜ ನಿರ್ಮಾಣ ಮಾಡುವ ಹಿತದೃಷ್ಠಿಯಿಂದ ಈ ಬಜೆಟ್ ಅನ್ನು ಮಂಡಿಸಿದ್ದಾರೆ ಎಂದು ಹೊಗಳಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…