R Ashok
ಬೆಂಗಳೂರು: ಮುಂದಿನ ಸೆಪ್ಟೆಂಬರ್ ತಿಂಗಳ ವೇಳೆಗೆ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಕ್ಷಿಪ್ರ ಕ್ರಾಂತಿ ಆಗುವುದು 100ಕ್ಕೆ ನೂರರಷ್ಟು ಖಚಿತ. ನನ್ನ ಹೇಳಿಕೆಗೆ ಈಗಲೂ ನಾನು ಬದ್ಧನಾಗಿದ್ದೇನೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಪುನರುಚ್ಚರಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಡಾ.ಜಿ.ಪರಮೇಶ್ವರ್ ರಹಸ್ಯವಾಗಿ ಭೇಟಿಯಾಗುವ ಉದ್ದೇಶವಾದರೂ ಏನಿತ್ತು? ಕೆಲವರು ಕ್ಷಿಪ್ರ ಕ್ರಾಂತಿ ಆಗುವುದಿಲ್ಲ. ಕಡಿಮೆ ಮಟ್ಟದಲ್ಲಿ ಕ್ರಾಂತಿಯಾಗುತ್ತದೆ ಎಂದು ಸಚಿವರೇ ಒಪ್ಪಿಕೊಂಡಿದ್ದಾರೆ. ಅಂದರೆ ಕಾಂಗ್ರೆಸ್ನಲ್ಲಿ ಭಿನ್ನಮತ ಇರುವುದನ್ನು ಅವರು ಒಪ್ಪಿಕೊಂಡಂತಲ್ಲವೇ ಎಂದು ಮರುಪ್ರಶ್ನೆ ಮಾಡಿದರು.
ನಮ್ಮಲ್ಲಿ ಏನೂ ಇಲ್ಲ ಎಂದು ಕೆಲವರು ಹೇಳಬಹುದು. ಎರಡು ವರ್ಷಗಳಿಂದ ಕುರ್ಚಿ ಕಿತ್ತಾಟ ನಡೆಯುತ್ತಲೇ ಇದೆ. ಇದನ್ನು ಯಾರೊಬ್ಬರು ನಿರಾಕರಿಸುತ್ತಿಲ್ಲ. ಕಾಲ ಬಂದಿದೆ. ಕಾದು ನೋಡಿ. ಇನ್ನು ಬಹಳಷ್ಟು ಬೆಳವಣಿಗೆಗಳು ನಡೆಯಲಿವೆ ಎಂದು ಭವಿಷ್ಯ ನುಡಿದರು.
ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ…
ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…
ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…
ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…
ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…