ಉಡುಪಿ: ತೋಟದ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವ ಹೋಗದಂತೆ ಹೋರಾಡಿದ 62 ವರ್ಷದ ವೃದ್ಧನನ್ನು ಗ್ಯಾಸ್ ಸಿಲಿಂಡರ್ನ ಓಟಿಪಿ ಸಂದೇಶವೇ ಬದುಕಿಸಿದೆ.
ಉಡುಪಿಯ ಕೊಡವೂರು ವಾರ್ಡ್ನ ಕಂಬ್ಳಕಟ್ಟ ಎಂಬ ನಿರ್ಜನ ಪ್ರದೇಶದಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಶ್ರೀನಿವಾಸ್ ಆಚಾರ್ಯ (62) ಎಂಬುವವರು, ಅನಾರೋಗ್ಯದಿಂದ ಸುಧಾರಿಸಿಕೊಂಡ ಬಳಿಕ ತೋಟಕ್ಕೆ ನೀರು ಹಾಯಿಸಲು ಹೋಗಿದ್ದರು. ಬಾವಿಯ ಪಂಪ್ನಲ್ಲಿ ಕಸ ತುಂಬಿದ್ದರಿಂದ ಅದನ್ನು ಸ್ವಚ್ಛಗೊಳಿಸಲು ಹೋದಾಗ ಹಗ್ಗ ತುಂಡಾಗಿ ಸುಮಾರು 15-20 ಅಡಿ ಆಳದ ಬಾವಿಗೆ ಬಿದ್ದುಬಿಟ್ಟಿದ್ದರು.
ಬಾವಿಯಲ್ಲಿ ಪೈಪ್ ಹಿಡಿದುಕೊಂಡು ಮೂರು ದಿನಗಳ ಕಾಲ ಕುಳಿತಿದ್ದ ಶ್ರೀನಿವಾಸ್ ಅವರು ಬೊಬ್ಬೆ ಹೊಡೆದರೂ ಯಾರ ಗಮನಕ್ಕೂ ಬಂದಿರಲಿಲ್ಲ. ಆ ಸಮಯದಲ್ಲಿ ಅವರ ಗ್ಯಾಸ್ ಸಿಲಿಂಡರ್ಗೆ ಹೊಸ ಸಿಲಿಂಡರ್ ಬುಕ್ ಮಾಡಲು ಓಟಿಪಿ ಬಂದಿತ್ತು.
ಗ್ಯಾಸ್ ಏಜೆನ್ಸಿ ಸಿಬ್ಬಂದಿ ಗಣೇಶ್ ಅವರು ಸಿಲಿಂಡರ್ ತಲುಪಿಸಲು ಮನೆಗೆ ಬಂದಾಗ ವೃದ್ಧರು ನಾಪತ್ತೆಯಾಗಿರುವುದು ಗಮನಕ್ಕೆ ಬಂದಿತು. ಸ್ಥಳೀಯರ ಸಹಾಯದಿಂದ ಹುಡುಕಾಡಿದಾಗ ಬಾವಿಯಲ್ಲಿ ಬಿದ್ದಿರುವುದು ಪತ್ತೆಯಾಯಿತು. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ವೃದ್ಧನನ್ನು ಬಾವಿಯಿಂದ ಮೇಲಕ್ಕೆ ಎತ್ತಿ ರಕ್ಷಿಸಿದರು.
ಸದ್ಯ ಶ್ರೀನಿವಾಸ್ ಆಚಾರ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಂಪೂರ್ಣ ಗುಣಮುಖರಾಗಿದ್ದಾರೆ ಎನ್ನಲಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…