ಬೆಳಗಾವಿ: ಪ್ರಾಥಮಿಕ-ಪ್ರೌಢ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಅವರೊಂದಿಗೆ ಕೊಡಗು ಜಿಲ್ಲಾ ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಶಾಲಾ-ಕಾಲೇಜುಗಳ ಮೂಲ ಸೌಕರ್ಯ ಮತ್ತು ಬೇಡಿಕೆಗಳ ಕುರಿತು ಸಿಎಂ ಶಾಸಕ ಎ. ಎಸ್. ಪೊನ್ನಣ್ಣ ಸಭೆ ನಡೆಸಿ ಚರ್ಚಿಸಿದ್ದಾರೆ.
ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್.17) ಈ ಕುರಿತು ಸಚಿವರ ಕೊಠಡಿಯಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಕೊಡಗು ಜಿಲ್ಲೆಯ ಅನುದಾನಿತ ಶಾಲಾ- ಕಾಲೇಜುಗಳ ನೌಕರರ ಸಂಘ ಮಡಿಕೇರಿಯೂ ಅನುದಾನಿತ ಕಾಲೇಜು ತರಬೇತಿವಾರು ಕನಿಷ್ಠ 40 ವಿದ್ಯಾರ್ಥಿಗಳನ್ನು ನಿಗದಿಪಡಿಸಿದೆ. ಕೊಡಗು ಜಿಲ್ಲೆ ಗುಡ್ಡಗಾಡು ಪ್ರದೇಶವಾಗಿದ್ದು, ಕನಿಷ್ಠ 40 ವಿದ್ಯಾರ್ಥಿಗಳ ಸಂಖ್ಯೆಯನ್ನು 20 ವಿದ್ಯಾರ್ಥಿಗಳಿಗೆ ಇಳಿಸಬೇಕು. ಉಪನ್ಯಾಸಕರ ವೇತನವನ್ನು ತಡೆಹಿಡಿಯದೆ ವೇತನ ಪಾವತಿಸಬೇಕು. ಪ್ರಜಾ ಪ್ರತಿನಿಧಿ ಕಾಯ್ದೆಯ ತಿದ್ದುಪಡಿ ಅನ್ವಯ ಮಲೆನಾಡು ಜಿಲ್ಲೆಗಳಿಗೆ ರಿಯಾಯಿತಿಯನ್ನು ನೀಡಲಾಗಿದೆ. ಅದೇ ರೀತಿ ಕೊಡಗು ಮತ್ತು ಮಲೆನಾಡು ಜಿಲ್ಲೆಗಳನ್ನು ವಿಶೇಷವಾಗಿ ಪರಿಗಣಿಸಬೇಕು ಎಂದು ಹೇಳಿದ್ದಾರೆ.
ಈ ವೇಳೆ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಿದ್ದು, ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕೊಡುವ ಜಾತಿ ಪ್ರಮಾಣ ಪತ್ರಕ್ಕೆ ಕೊಡವ ಎಂದು ನಮೂದಿಸಿ ಅಧಿಸೂಚನೆ ಹೊರಡಿಸುವುದು. ಸಾಂಧೀಪನಿ ವಿದ್ಯಾಪೀಠ ಶಾಲೆ ಕೊಡಗು ಜಿಲ್ಲೆ ಅದರ ಸಮಸ್ಯೆಗಳ ಬಗ್ಗೆ ಹಾಗೂ ತಾಲ್ಲೂಕಿನ ಮೆಕೇರಿ ಗ್ರಾಮದ ಸರ್ವೆ ನಂಬರ್ 99/2 ಜಾಗದಲ್ಲಿ ಸರ್ಕಾರಿ ಶಾಲೆ ನಿರ್ಮಾಣ ಮತ್ತು ಪಂಚಾಯತ್ ಹೆಸರಿಗೆ ಮಂಜೂರು ಮಾಡಬೇಕು. ಅಲ್ಲದೇ ಪ್ರಾಥಮಿಕ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಮೂಲಸೌಕರ್ಯ ಮತ್ತು ಅನುದಾನ ನೀಡುವಂತೆ ಕೋರಿದ್ದಾರೆ.
ಇದೇ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಅವರು, ಮಡಿಕೇರಿ ತಾಲೂಕು ಕೊಯನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ನಿರ್ಮಾಣದ ಕುರಿತು ವಿಶೇಷವಾಗಿ ಆದ್ಯತೆ ನೀಡಿ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…