ರಾಜ್ಯ

ಪ್ರಾಥಮಿಕ-ಪ್ರೌಢ ಶಿಕ್ಷಣ ಸಚಿವರೊಂದಿಗೆ ಎ.ಎಸ್‌.ಪೊನ್ನಣ್ಣ ಸಭೆ

ಬೆಳಗಾವಿ: ಪ್ರಾಥಮಿಕ-ಪ್ರೌಢ ಶಿಕ್ಷಣ ಸಚಿವ ಎಸ್‌.ಮಧು ಬಂಗಾರಪ್ಪ ಅವರೊಂದಿಗೆ ಕೊಡಗು ಜಿಲ್ಲಾ ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಶಾಲಾ-ಕಾಲೇಜುಗಳ ಮೂಲ ಸೌಕರ್ಯ ಮತ್ತು ಬೇಡಿಕೆಗಳ ಕುರಿತು ಸಿಎಂ ಶಾಸಕ ಎ. ಎಸ್. ಪೊನ್ನಣ್ಣ ಸಭೆ ನಡೆಸಿ  ಚರ್ಚಿಸಿದ್ದಾರೆ.

ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್‌.17) ಈ ಕುರಿತು ಸಚಿವರ ಕೊಠಡಿಯಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಕೊಡಗು ಜಿಲ್ಲೆಯ ಅನುದಾನಿತ ಶಾಲಾ- ಕಾಲೇಜುಗಳ ನೌಕರರ ಸಂಘ ಮಡಿಕೇರಿಯೂ ಅನುದಾನಿತ ಕಾಲೇಜು ತರಬೇತಿವಾರು ಕನಿಷ್ಠ 40 ವಿದ್ಯಾರ್ಥಿಗಳನ್ನು ನಿಗದಿಪಡಿಸಿದೆ. ಕೊಡಗು ಜಿಲ್ಲೆ ಗುಡ್ಡಗಾಡು ಪ್ರದೇಶವಾಗಿದ್ದು, ಕನಿಷ್ಠ 40 ವಿದ್ಯಾರ್ಥಿಗಳ ಸಂಖ್ಯೆಯನ್ನು 20 ವಿದ್ಯಾರ್ಥಿಗಳಿಗೆ ಇಳಿಸಬೇಕು. ಉಪನ್ಯಾಸಕರ ವೇತನವನ್ನು ತಡೆಹಿಡಿಯದೆ ವೇತನ ಪಾವತಿಸಬೇಕು. ಪ್ರಜಾ ಪ್ರತಿನಿಧಿ ಕಾಯ್ದೆಯ ತಿದ್ದುಪಡಿ ಅನ್ವಯ ಮಲೆನಾಡು ಜಿಲ್ಲೆಗಳಿಗೆ ರಿಯಾಯಿತಿಯನ್ನು ನೀಡಲಾಗಿದೆ. ಅದೇ ರೀತಿ ಕೊಡಗು ಮತ್ತು ಮಲೆನಾಡು ಜಿಲ್ಲೆಗಳನ್ನು ವಿಶೇಷವಾಗಿ ಪರಿಗಣಿಸಬೇಕು ಎಂದು ಹೇಳಿದ್ದಾರೆ.

ಈ ವೇಳೆ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಿದ್ದು, ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕೊಡುವ ಜಾತಿ ಪ್ರಮಾಣ ಪತ್ರಕ್ಕೆ ಕೊಡವ ಎಂದು ನಮೂದಿಸಿ ಅಧಿಸೂಚನೆ ಹೊರಡಿಸುವುದು. ಸಾಂಧೀಪನಿ ವಿದ್ಯಾಪೀಠ ಶಾಲೆ ಕೊಡಗು ಜಿಲ್ಲೆ ಅದರ ಸಮಸ್ಯೆಗಳ ಬಗ್ಗೆ ಹಾಗೂ ತಾಲ್ಲೂಕಿನ ಮೆಕೇರಿ ಗ್ರಾಮದ ಸರ್ವೆ ನಂಬರ್ 99/2 ಜಾಗದಲ್ಲಿ ಸರ್ಕಾರಿ ಶಾಲೆ ನಿರ್ಮಾಣ ಮತ್ತು ಪಂಚಾಯತ್ ಹೆಸರಿಗೆ ಮಂಜೂರು ಮಾಡಬೇಕು. ಅಲ್ಲದೇ ಪ್ರಾಥಮಿಕ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಮೂಲಸೌಕರ್ಯ ಮತ್ತು ಅನುದಾನ ನೀಡುವಂತೆ ಕೋರಿದ್ದಾರೆ.

ಇದೇ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಅವರು, ಮಡಿಕೇರಿ ತಾಲೂಕು ಕೊಯನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ನಿರ್ಮಾಣದ ಕುರಿತು ವಿಶೇಷವಾಗಿ ಆದ್ಯತೆ ನೀಡಿ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

20 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

20 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

20 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

20 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

20 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

20 hours ago