Mysore
30
scattered clouds

Social Media

ಭಾನುವಾರ, 08 ಫೆಬ್ರವರಿ 2026
Light
Dark

ಕ್ಯಾನ್ಸರ್‌ ಇರುವ ಮಕ್ಕಳಿಗಾಗಿಯೇ ಪ್ರತ್ಯೇಕ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ

madhu bangarappa

ಬೆಂಗಳೂರು: ಕ್ಯಾನ್ಸರ್‌ನಿಂದ ಸಂಕಷ್ಟಕ್ಕೊಳಗಾದ ವಿದ್ಯಾರ್ಥಿಗಳಿಗೆ ಚಿಕಿತ್ಸೆಯ ಜೊತೆಗೆ ಓದಿಗೂ ಅವಕಾಶವಾಗುವಂತೆ ನಗರದ ಕಿದ್ವಾಯಿ ಆಸ್ಪತ್ರೆಯ ಬಳಿ ವಸತಿ ಸಹಿತ ಶಾಲೆ ಆರಂಭಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 3,500 ಮಕ್ಕಳು ಕ್ಯಾನ್ಸರ್‌ನಿಂದ ಬಾಧಿತರಾಗಿದ್ದು, ಅವರು ಕಲಿಕೆಯಲ್ಲಿ ವಂಚಿತರಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಕ್ಯಾನ್ಸರ್ ಗುಣಮುಖವಾಗುವ ಆರೋಗ್ಯ ಸಮಸ್ಯೆ. ರೋಗ ಬಂದಾಕ್ಷಣ ಬಹಳಷ್ಟು ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ. ಕ್ಯಾನ್ಸರ್ ಕಾರಣಕ್ಕಾಗಿ ಅವರಿಗೆ ಶಿಕ್ಷಣ ಕೈಗೆಟಕುದಂತಿರಬಾರದು ಎಂದು ಹೇಳಿದರು.

ಕಿದ್ವಾಯಿ ಬಳಿ ಜಾಗ ಹುಡುಕಲು ಈಗಾಗಲೇ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ್ದೇವೆ. ನಮ್ಮ ಇಲಾಖೆಗೆ 3 ಎಕರೆಯಷ್ಟು ಜಾಗ ಸಿಕ್ಕರೆ ಇದೇ ವರ್ಷದ ಜುಲೈನಿಂದಲೇ ಶಾಲೆ ಆರಂಭಿಸುವ ಉಮೇದಿನಲ್ಲಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಗತ್ಯವಿರುವ ಎಲ್ಲಾ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಮಕ್ಕಳಿಗೆ ಓದಲು ಅನುಕೂಲವಾಗುವಂತೆ ಶಾಲೆ, ಅದರ ಪಕ್ಕದಲ್ಲೇ ಹಾಸ್ಟೆಲ್, 5 ರಿಂದ 6 ವರ್ಷದೊಳಗಿನ ಮಕ್ಕಳನ್ನು ನೋಡಿಕೊಳ್ಳಲು ಪೋಷಕರಿರಬೇಕಾಗುತ್ತದೆ. ಅದಕ್ಕಾಗಿ ಪ್ರತ್ಯೇಕ ಕಟ್ಟಡ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಈ ಶಾಲೆಯಲ್ಲಿ ಒದಗಿಸಲಾಗುವುದು. ಜೊತೆಗೆ ಆಸ್ಪತ್ರೆಗೆ ಮತ್ತು ಶಾಲೆಗೆ ಮಿನಿ ಬಸ್‍ನಂತಹ ವಾಹನದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ ಎಂದರು.

Tags:
error: Content is protected !!