ರಾಜ್ಯ

ಕ್ಯಾನ್ಸರ್‌ ಇರುವ ಮಕ್ಕಳಿಗಾಗಿಯೇ ಪ್ರತ್ಯೇಕ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಕ್ಯಾನ್ಸರ್‌ನಿಂದ ಸಂಕಷ್ಟಕ್ಕೊಳಗಾದ ವಿದ್ಯಾರ್ಥಿಗಳಿಗೆ ಚಿಕಿತ್ಸೆಯ ಜೊತೆಗೆ ಓದಿಗೂ ಅವಕಾಶವಾಗುವಂತೆ ನಗರದ ಕಿದ್ವಾಯಿ ಆಸ್ಪತ್ರೆಯ ಬಳಿ ವಸತಿ ಸಹಿತ ಶಾಲೆ ಆರಂಭಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 3,500 ಮಕ್ಕಳು ಕ್ಯಾನ್ಸರ್‌ನಿಂದ ಬಾಧಿತರಾಗಿದ್ದು, ಅವರು ಕಲಿಕೆಯಲ್ಲಿ ವಂಚಿತರಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಕ್ಯಾನ್ಸರ್ ಗುಣಮುಖವಾಗುವ ಆರೋಗ್ಯ ಸಮಸ್ಯೆ. ರೋಗ ಬಂದಾಕ್ಷಣ ಬಹಳಷ್ಟು ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ. ಕ್ಯಾನ್ಸರ್ ಕಾರಣಕ್ಕಾಗಿ ಅವರಿಗೆ ಶಿಕ್ಷಣ ಕೈಗೆಟಕುದಂತಿರಬಾರದು ಎಂದು ಹೇಳಿದರು.

ಕಿದ್ವಾಯಿ ಬಳಿ ಜಾಗ ಹುಡುಕಲು ಈಗಾಗಲೇ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ್ದೇವೆ. ನಮ್ಮ ಇಲಾಖೆಗೆ 3 ಎಕರೆಯಷ್ಟು ಜಾಗ ಸಿಕ್ಕರೆ ಇದೇ ವರ್ಷದ ಜುಲೈನಿಂದಲೇ ಶಾಲೆ ಆರಂಭಿಸುವ ಉಮೇದಿನಲ್ಲಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಗತ್ಯವಿರುವ ಎಲ್ಲಾ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಮಕ್ಕಳಿಗೆ ಓದಲು ಅನುಕೂಲವಾಗುವಂತೆ ಶಾಲೆ, ಅದರ ಪಕ್ಕದಲ್ಲೇ ಹಾಸ್ಟೆಲ್, 5 ರಿಂದ 6 ವರ್ಷದೊಳಗಿನ ಮಕ್ಕಳನ್ನು ನೋಡಿಕೊಳ್ಳಲು ಪೋಷಕರಿರಬೇಕಾಗುತ್ತದೆ. ಅದಕ್ಕಾಗಿ ಪ್ರತ್ಯೇಕ ಕಟ್ಟಡ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಈ ಶಾಲೆಯಲ್ಲಿ ಒದಗಿಸಲಾಗುವುದು. ಜೊತೆಗೆ ಆಸ್ಪತ್ರೆಗೆ ಮತ್ತು ಶಾಲೆಗೆ ಮಿನಿ ಬಸ್‍ನಂತಹ ವಾಹನದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ ಎಂದರು.

ಆಂದೋಲನ ಡೆಸ್ಕ್

Recent Posts

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

31 mins ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

9 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

9 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

9 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

9 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

9 hours ago