ರಾಜ್ಯ

ತೆರೆಯಲಿದೆ ಜಾಗತಿಕ ಶಿಕ್ಷಣದ ಹೆಬ್ಬಾಗಿಲು : ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ವಿಶೇಷ ಮೇಳ

ಬೆಂಗಳೂರು : ವಿದೇಶ ವ್ಯಾಸಂಗ ಶ್ರೀಮಂತರಿಗೆ ಮಾತ್ರವಲ್ಲ ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ. ಇದೆಲ್ಲಾ ಸಾಧ್ಯವಾಗುತ್ತಿರುವುದು ಕರ್ನಾಟಕ‌ ಸರ್ಕಾರದ ಹೊಸ ಯೋಜನೆಯಿಂದ. ಆರ್ಥಿಕವಾಗಿ ದುರ್ಬಲವಾಗಿರುವ, ಮಧ್ಯಮವರ್ಗದ ಹಿನ್ನೆಲೆಯ ವಿದ್ಯಾರ್ಥಿಗಳು ಸಹ ಈಗ ವಿದೇಶದಲ್ಲಿ ಉನ್ನತ ಶಿಕ್ಷಣವನ್ನು ಯಾವುದೇ ತೊಂದರೆಯಿಲ್ಲದೇ ಪಡೆಯಬಹುದಾಗಿದೆ.

ಕೌಶಲ್ಯ ಅಭಿವೃದ್ಧಿ ಇಲಾಖೆ ಅಡಿಯ ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ (ಕೆವಿಟಿಎಸ್‌ಡಿಸಿ) ಆಗಸ್ಟ್ 17 ರ ಭಾನುವಾರ ಹೋಟೆಲ್ ಲಲಿತ್ ಅಶೋಕ್‌ನಲ್ಲಿ ಅಂತಾರಾಷ್ಟ್ರೀಯ ವಿದೇಶದಲ್ಲಿ ಅಧ್ಯಯನ ಮೇಳ – 2025 ಅನ್ನು ಆಯೋಜಿಸಿದೆ. ಈ ವಿಶೇಷ ಕಾರ್ಯಕ್ರಮದಲ್ಲಿ 50 ಕ್ಕೂ ಹೆಚ್ಚು ಪ್ರಮುಖ ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸುವ ನಿರೀಕ್ಷೆ ಇದೆ.

ಈ ಸಂಸ್ಥೆಗಳು ವಿಶ್ವದ ಟಾಪ್ 500 ರಲ್ಲಿ ಸ್ಥಾನ ಪಡೆದಿವೆ. ಈ ಕುರಿತು ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ಹೆಚ್ಚಿನ ಮಾಹಿತಿ ನೀಡಿದರು. “ಸಮಾಜದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಅಧ್ಯಯನ ಮಾಡುವ ಅವಕಾಶವನ್ನು ಒದಗಿಸಲಾಗುವುದು. ಇದೇ ಮೊದಲ ಬಾರಿಗೆ ಈ ರೀತಿಯ ಯೋಜನೆಯನ್ನು ದೇಶದಲ್ಲಿ ಜಾರಿಗೆ ತರಲಾಗುತ್ತಿದೆ” ಎಂದು ತಿಳಿಸಿದರು.

ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಇದು “ಜಾಗತಿಕ ಶಿಕ್ಷಣದ ಹೆಬ್ಬಾಗಿಲು” ಎಂದು ಸಚಿವರು ತಿಳಿಸಿದರು. ವಿದ್ಯಾರ್ಥಿಗಳು ವಿದೇಶದಲ್ಲಿ ವ್ಯಾಸಂಗ ಮಾಡಲು ಭಾರತದಿಂದ ತೆರಳಿದ ನಂತರ ಅವರಿಗೆ ಎಲ್ಲ ರೀತಿಯ ಬೆಂಬಲ ಒದಗಿಸುವುದು ನಮ್ಮ ಗುರಿಯಾಗಿದೆ.

ಈ ಸರ್ಕಾರಿ ಬೆಂಬಲಿತ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಹೆಚ್ಚು ಆಪ್ತವಾಗಿರಲಿದೆ. ಶೈಕ್ಷಣಿಕ ಪ್ರಗತಿ ಮತ್ತು ಕಾನೂನು ನೆರವು ಎಲ್ಲವೂ ದೊರೆಯಲಿದೆ ಎಂದು ಸಚಿವರು ವಿವರಿಸಿದರು. ಈ ಎಕ್ಸ್‌ಪೋದಲ್ಲಿ ಹೆಚ್ಚು ವಿಶ್ವಾಸಾರ್ಹತೆ ಮತ್ತು ಪಾರದರ್ಶಕತೆ ನೀಡುತ್ತದೆ.

ವಿಶ್ವವಿದ್ಯಾಲಯದ ಆಯ್ಕೆ, ಏಜೆನ್ಸಿ ಶುಲ್ಕವಿಲ್ಲದೆ ಉಚಿತ ಮಾರ್ಗದರ್ಶನವನ್ನು ನಾವು ನೀಡುತ್ತೇವೆ ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ಸ್ಪಷ್ಟಪಡಿಸಿದರು. ಎಕ್ಸ್‌ಪೋದ ಪ್ರಮುಖ ಅಂಶಗಳು ವಿಶ್ವವಿದ್ಯಾಲಯದ ಪ್ರತಿನಿಧಿಗಳೊಂದಿಗೆ ಒನ್-ಆನ್-ಒನ್ ಸೆಷನ್‌; ಸ್ಪಾಟ್ ವಿದ್ಯಾರ್ಥಿವೇತನಗಳು ಮತ್ತು ಅರ್ಹತಾ ಮೌಲ್ಯಮಾಪನಗಳು; ವೀಸಾ ಪ್ರಕ್ರಿಯೆ, ಹಣಕಾಸು ಯೋಜನೆ, ಆರೋಗ್ಯ ವಿಮೆ, ಭಾಷಾ ಪ್ರಾವೀಣ್ಯತೆ ಮತ್ತು ಇತರೆ ಮಾರ್ಗದರ್ಶನ. ಆಸ್ಟ್ರೇಲಿಯಾ, ಯುನೈಟೆಡ್‌ ಕಿಂಗ್‌ಡಮ್‌, ಅಮೆರಿಕ, ಐರ್ಲೆಂಡ್, ನ್ಯೂಜಿಲೆಂಡ್ ಮತ್ತು ಮಧ್ಯಪ್ರಾಚ್ಯ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳು ಇರಲಿದ್ದಾರೆ.

ಎಕ್ಸ್‌ಪೋದಲ್ಲಿ ಭಾಗವಹಿಸಲು http://studyabroad.ksdckarnataka.com ನಲ್ಲಿ ನೋಂದಾಯಿಸಿಕೊಳ್ಳಬಹುದು ಪ್ರಮುಖ ವಿಶ್ವವಿದ್ಯಾಲಯಗಳು ಮತ್ತು ಕೊಡುಗೆಗಳು – ಬ್ಯಾಂಗೋರ್ ವಿಶ್ವವಿದ್ಯಾಲಯ (ಯುಕೆ): ₹3–5 ಲಕ್ಷದವರೆಗಿನ ವಿದ್ಯಾರ್ಥಿವೇತನ, ಒಂದು ಆರ್ಥಿಕ ದರ್ಜೆಯ ವಿಮಾನ ಟಿಕೆಟ್, ಜೊತೆಗೆ ಎರಡು 50% ಬೋಧನಾ ಶುಲ್ಕ ವಿದ್ಯಾರ್ಥಿವೇತನಗಳು – ಉತ್ತರ ಟೆಕ್ಸಾಸ್ ವಿಶ್ವವಿದ್ಯಾಲಯ (ಅಮೆರಿಕ): ₹8–10 ಲಕ್ಷದವರೆಗಿನ ವಿದ್ಯಾರ್ಥಿವೇತನಗಳು – ಜೇಮ್ಸ್ ಕುಕ್ ವಿಶ್ವವಿದ್ಯಾಲಯ (ಆಸ್ಟ್ರೇಲಿಯಾ): ₹8–10 ಲಕ್ಷದವರೆಗಿನ ವಿದ್ಯಾರ್ಥಿವೇತನಗಳು – ಕರ್ಟಿನ್ ವಿಶ್ವವಿದ್ಯಾಲಯ (ಸಿಂಗಾಪುರ): ₹5 ಲಕ್ಷದವರೆಗಿನ ವಿದ್ಯಾರ್ಥಿವೇತನಗಳು – ಮುರ್ಡೋಕ್ ದುಬೈ (ಅಮೆರಿಕ): ₹5 ಲಕ್ಷದವರೆಗಿನ ವಿದ್ಯಾರ್ಥಿವೇತನಗಳು – GISMA ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯ (ಜರ್ಮನಿ): ₹10 ಲಕ್ಷದವರೆಗಿನ ವಿದ್ಯಾರ್ಥಿವೇತನಗಳು

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

35 mins ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

2 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

3 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

4 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

5 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

6 hours ago