ರಾಜ್ಯ

ಹುಕ್ಕಾ ಬಾರ್‌ ನಿಯಂತ್ರಣಕ್ಕೆ ಶಿಘ್ರವೇ ಬರಲಿದೆ ವಿಶೇಷ ಕಾನೂನು

ಬೆಳಗಾವಿ : ಹುಕ್ಕಾ ಬಾರ್ ಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ವಿಶೇಷ ಕಾನೂನು ರೂಪಿಸಲಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರು ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರು ಹುಕ್ಕಾ ಬಾರ್‌ ಗಳು ಜನರ ಮೇಲೆ ಅದರಲ್ಲೂ ವಿಶೇಷವಾಗಿ ಯುವಕರ ಮೇಲೆ ಪರಿಣಾಮ ಬೀರುತ್ತಿವೆ. ಆದರೆ ಅವರ ಬಗ್ಗೆ ಏನೂ ಮಾತನಾಡಲು ಸಾಧ್ಯವಾಗಿಲ್ಲ ಎಂದಿದ್ದಾರೆ.

ಇದೇ ವೇಳೆ ಮಾತನಾಡಿದ ರಾಮಮೂರ್ತಿಯವರು ಬೃಹತ್‌ ಬೆಂಗಳೂರು ಮಹಾನಗರದ ವ್ಯಾಪ್ತಿಯಲ್ಲಿ ಹುಕ್ಕಾ ಬಾರ್‌ ಗಳು ನಾಯಿ ಕೊಡೆಗಳಂತೆ ಹುಟ್ಟಿಕೊಳ್ಳುತ್ತಿವೆ. ಅವರಿಗೆ ಯಾರು ಪರವಾನಗಿ ಕೊಟ್ಟಿದ್ದಾರೆ ಹೇಗೆ ಪಡೆದುಕೊಂಡಿದ್ದಾರೆ ಎಂಬುದು ನಮಗೆ ತಿಳಿಯುತ್ತಿಲ್ಲ ಎಂದು ಹೇಳಿದ್ದಾರೆ.

ಇತ್ತೀಚೆಗೆ ಹುಕ್ಕಾ ಬಾರ್‌ ನಲ್ಲಿ ಸಿಲಿಂಡರ್‌ ಸ್ಪೋಟಗೊಂಡ ಘಟನೆಯನ್ನೂ ಕೂಡ ಅವರು ಪ್ರಸ್ಥಾಪ ಮಾಡಿದ್ದಾರೆ. ಇದ್ದಕ್ಕೆ ಪ್ರತಿಕ್ರಿಯಿಸಿರುವ ಪರಮೇಶ್ವರ್‌ ಅವರು ಇದರ ಬಗ್ಗೆ ನನಗೆ ಮಾಹಿತಿ ಇದೆ. ಈ ರೀತಿಯ ಘಟನೆಗಳನ್ನು ತಡೆಗಟ್ಟಲು ಸರ್ಕಾರ ಕಾನೂನು ಕ್ರಮ ತರಲಿದೆ ಎಂದು ಹೇಳಿದ್ದಾರೆ. ಇದಕ್ಕೆ ದನಿಗೂಡಿಸಿದ ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌, ನಗರದಲ್ಲಿ ಹುಕ್ಕಾ ಬಾರ್‌ ಗಳು ಮಾರಕವಾಗುತ್ತಿವೆ. ಪಂಜಾಬ್‌ ರಾಜಸ್ಥಾನ ಮಧ್ಯಪ್ರದೇಶ, ಛತ್ತೀಸ್‌ಘಡ, ತಮಿಳುನಾಡು ಹಾಗೂ ಗುಜರಾತ್‌ ಸೇರಿದಂತೆ ಹತ್ತು ರಾಜ್ಯಗಳು ಹುಕ್ಕಾ ಬಾರ್‌ ಗಳನ್ನು ನಿಷೇಧ ಮಾಡಿವೆ. ನಮ್ಮಲ್ಲಿಯೂ ಕೂಡ ಅದೇ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ ಮಾಡಿದ್ದಾರೆ.

lokesh

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

43 mins ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

9 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

11 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

12 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

15 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

17 hours ago