ಬೆಳಗಾವಿ : ಹುಕ್ಕಾ ಬಾರ್ ಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ವಿಶೇಷ ಕಾನೂನು ರೂಪಿಸಲಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಹುಕ್ಕಾ ಬಾರ್ ಗಳು ಜನರ ಮೇಲೆ ಅದರಲ್ಲೂ ವಿಶೇಷವಾಗಿ ಯುವಕರ ಮೇಲೆ ಪರಿಣಾಮ ಬೀರುತ್ತಿವೆ. ಆದರೆ ಅವರ ಬಗ್ಗೆ ಏನೂ ಮಾತನಾಡಲು ಸಾಧ್ಯವಾಗಿಲ್ಲ ಎಂದಿದ್ದಾರೆ.
ಇದೇ ವೇಳೆ ಮಾತನಾಡಿದ ರಾಮಮೂರ್ತಿಯವರು ಬೃಹತ್ ಬೆಂಗಳೂರು ಮಹಾನಗರದ ವ್ಯಾಪ್ತಿಯಲ್ಲಿ ಹುಕ್ಕಾ ಬಾರ್ ಗಳು ನಾಯಿ ಕೊಡೆಗಳಂತೆ ಹುಟ್ಟಿಕೊಳ್ಳುತ್ತಿವೆ. ಅವರಿಗೆ ಯಾರು ಪರವಾನಗಿ ಕೊಟ್ಟಿದ್ದಾರೆ ಹೇಗೆ ಪಡೆದುಕೊಂಡಿದ್ದಾರೆ ಎಂಬುದು ನಮಗೆ ತಿಳಿಯುತ್ತಿಲ್ಲ ಎಂದು ಹೇಳಿದ್ದಾರೆ.
ಇತ್ತೀಚೆಗೆ ಹುಕ್ಕಾ ಬಾರ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡ ಘಟನೆಯನ್ನೂ ಕೂಡ ಅವರು ಪ್ರಸ್ಥಾಪ ಮಾಡಿದ್ದಾರೆ. ಇದ್ದಕ್ಕೆ ಪ್ರತಿಕ್ರಿಯಿಸಿರುವ ಪರಮೇಶ್ವರ್ ಅವರು ಇದರ ಬಗ್ಗೆ ನನಗೆ ಮಾಹಿತಿ ಇದೆ. ಈ ರೀತಿಯ ಘಟನೆಗಳನ್ನು ತಡೆಗಟ್ಟಲು ಸರ್ಕಾರ ಕಾನೂನು ಕ್ರಮ ತರಲಿದೆ ಎಂದು ಹೇಳಿದ್ದಾರೆ. ಇದಕ್ಕೆ ದನಿಗೂಡಿಸಿದ ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್, ನಗರದಲ್ಲಿ ಹುಕ್ಕಾ ಬಾರ್ ಗಳು ಮಾರಕವಾಗುತ್ತಿವೆ. ಪಂಜಾಬ್ ರಾಜಸ್ಥಾನ ಮಧ್ಯಪ್ರದೇಶ, ಛತ್ತೀಸ್ಘಡ, ತಮಿಳುನಾಡು ಹಾಗೂ ಗುಜರಾತ್ ಸೇರಿದಂತೆ ಹತ್ತು ರಾಜ್ಯಗಳು ಹುಕ್ಕಾ ಬಾರ್ ಗಳನ್ನು ನಿಷೇಧ ಮಾಡಿವೆ. ನಮ್ಮಲ್ಲಿಯೂ ಕೂಡ ಅದೇ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ ಮಾಡಿದ್ದಾರೆ.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…