ಬೆಂಗಳೂರು : ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಸಧ್ಯ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ನೋಡಲು ವಿಶೇಷಚೇತನ ಅಭಿಮಾನಿಯೊಬ್ಬ 500ಕಿ.ಮೀ ಕ್ರಮಿಸಿ ಬೆಂಗಳೂರಿಗೆ ಬಂದಿದ್ದಾನೆ.
ಗುಲ್ಬರ್ಗಾದ ಶಾಪುರದಿಂದ ಬೆಂಗಳೂರಿಗೆ ಬಂದಿರುವ ಅಭಿಮಾನಿ ಕಳೆದ ಶುಕ್ವಾರ ತನ್ನ ಊರಿನಿಂದ ತನ್ನ ಮೂರು ಚಕ್ರದ ವಾಹನ ಓಡಿಸಿಕೊಂಡು ಬೆಂಗಳೂರಿನತ್ತ ಹೊರಟು ಇಂದು ಬೆಂಗಳೂರಿಗೆ ತಲುಪಿದ್ದಾನೆ. ನಟ ದರ್ಶನ್ ನೋಡುವವರೆಗೆ ನಾನು ಹಿಂದಿರುಗುವುದಿಲ್ಲ ಎಂದು ಪರಪ್ಪನ ಅಗ್ರಹಾರ ಜೈಲಿನ ಮುಂದೆಯೇ ನಿಂತಿದ್ದಾನೆ.
ಇನ್ನು ಮಾಧ್ಯಮಗಳೊಂದಿಗೆ ಮಾತನಾಡಿರುವ ಆತ, ನಮಗೆ ಡಿ ಬಾಸ್ ಮುಖ್ಯ. ದರ್ಶನ್ ಅವರು ಕೊಲೆ ಮಾಡಿಲ್ಲ. ದರ್ಶನ್ ಅವರನ್ನು ನೋಡಲು ಪೊಲೀಸರು ನನ್ನನ್ನು ಒಳಗೆ ಬಿಡುತ್ತಿಲ್ಲ. ಅವರನ್ನು ನೋಡುವವರೆಗೆ ನಾನು ನಮ್ಮ ಊರಿಗೆ ಹಿಂದಿರುಗುವುದಿಲ್ಲ.
ನೂರಾರು ಜನರಿಗೆ ದರ್ಶನ್ ಸಹಾಯ ಮಾಡಿದ್ದಾರೆ ಹಾಗೆ ನನಗೂ ಸಹಾಯ ಮಾಡಿದ್ದಾರೆ. ಅವರು ಯಾವುದೇ ತಪ್ಪು ಮಾಡಿಲ್ಲ. ಅವರು ಹೊರಗೆ ಬಂದೇ ಬರುತ್ತಾರೆ ಎಂದು ಹೇಳಿದ್ದಾನೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…