ರಾಜ್ಯ

ತಾಯಂದಿರ ಬಗ್ಗೆ ಹೇಳಿಕೆ; ಹೆಚ್.ಡಿ.ಕುಮಾರಸ್ವಾಮಿ ವಿಷಾದ !

  • ಮಹಿಳೆಯರಿಗೆ ಕಾಂಗ್ರೆಸ್ ಎಸಗಿದ ಅಪಮಾನಗಳ ಕಂತೆ ಕಂತೆ ಪಟ್ಟಿ ಕೊಟ್ಟ ಮಾಜಿ ಮುಖ್ಯಮಂತ್ರ

ಬೆಂಗಳೂರು: ನನ್ನ ಹೇಳಿಕೆಯಿಂದ ತಾಯಂದಿರಿಗೆ ನೋವಾಗಿದ್ದರೆ ನಾನು ವಿಷಾದಿಸುತ್ತೇನೆ. ಮಹಿಳೆಯರನ್ನು ಅಪಮಾನಿಸಿಲ್ಲ, ಅಂತಹ ಜಾಯಮಾನವೂ ನನ್ನದಲ್ಲ. ವಿಷಾದಿಸುವುದಕ್ಕೆ ನನಗೆ ಯಾವ ಪ್ರತಿಷ್ಠೆಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು; ನಾಡಿನ ಜನರನ್ನು ಮರಳು ಮಾಡುತ್ತಿರುವ ಐದು ಗ್ಯಾರಂಟಿಗಳ ವಿರುದ್ಧ ಕಿಡಿಕಾರಿದರು.

ಅಳಬೇಡಪ್ಪ ಡಿ.ಕೆ.ಶಿವಕುಮಾರ್. ನಾನೇನು ವಿಷಾದ ವ್ಯಕ್ತಪಡಿಸುತ್ತೇನೆ. ನೀನು ದುಃಖ ಪಡಬೇಡಪ್ಪ. ನೀನು ಏನ್ ದುಃಖ ಪಟ್ಟಿದ್ದೀಯಾ ಎನ್ನುವುದನ್ನು ನೋಡಿದ್ದೇನೆ ಎಂದು ನೇರ ಡಿಕೆಶಿಯನ್ನು ತರಾಟೆಗೆ ತೆಗೆದುಕೊಂಡರು ಕುಮಾರಸ್ವಾಮಿ ಅವರು.

ಕಾಂಗ್ರೆಸ್ ಮಹಿಳಾ ನಾಯಕಿಯರಿಗೆ ದುಃಖ ಆಗಿದ್ದರೆ ಅದಕ್ಕೂ ವಿಷಾದ ವ್ಯಕ್ತಪಡಿಸುತ್ತೇನೆ. ಯಾರಿಗೇ ದುಃಖ ಆಗಿದ್ದರೂ ವಿಷಾದ ವ್ಯಕ್ತಪಡಿಸುತ್ತೇನೆ. ಆದರೆ ನಾನು ಇವರಂತೆ ಕೆನ್ನೆ ನೆಕ್ಕೋದು, ಹೆಣ್ಣು ಮಕ್ಕಳಿಗೆ ರೇಟ್ ಫಿಕ್ಸ್ ಮಾಡಿದ ರೀತಿ ನಾನು ಮಾತನಾಡಿಲ್ಲ. ನಾನು ತಪ್ಪು ಮಾಡಿಲ್ಲ. ಜನರಿಗೇ ನನ್ನ ಹೇಳಿಕೆಯನ್ನು ಬಿಡುತ್ತೇನೆ. ಅವರೇ ತೀರ್ಮಾನ ಮಾಡಲಿ ಎಂದು ಹೇಳಿದರು ಅವರು.

ತಮ್ಮ ಹೇಳಿಕೆಯ ಮಾಧ್ಯಮ ವರದಿಗಳನ್ನು ಮಾಧ್ಯಮಗೋಷ್ಠಿಯಲ್ಲಿ ಓದಿದ ಕುಮಾರಸ್ವಾಮಿ ಅವರು; ಜನರಿಂದ ಕಿತ್ತುಕೊಂಡ ಹಣವನ್ನೇ ಕಾಂಗ್ರೆಸ್ಸಿನವರು ಗ್ಯಾರಂಟಿ ಎಂದು ಕೊಡುತ್ತಿದೆ. ಈ ಐದು ಗ್ಯಾರಂಟಿಗಳು ‘ಪಿಕ್ ಪಾಕೆಟ್ ಗ್ಯಾರಂಟಿಗಳು’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತುಮಕೂರು ಲೋಕಸಭೆ ಕ್ಷೇತ್ರದ ತುರುವೇಕೆರೆಯಲ್ಲಿ ನಾನು ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದೆ‌. ಆ ಸಭೆಯಲ್ಲಿ ಹಲವಾರು ವಿಷಯಗಳನ್ನು ಪ್ರಸ್ತಾಪ ಮಾಡಿದ್ದೆ. ಕುಮಾರಸ್ವಾಮಿ ತಾಯಂದಿರಿಗೆ ಅಪಮಾನ ಮಾಡಿದ್ದಾರೆ. ಅವರು ಕ್ಷಮೆಗೆ ಅರ್ಹರಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ. ವಾಯುವೆಗದಲ್ಲಿ ತಮ್ಮ ಶಾಸಕರು, ಮಾಜಿ ಶಾಸಕರು, ಮಹಿಳಾ ಘಟಕದವರ ಜತೆ ಝೂಮ್ ಮೀಟಿಂಗ್ ಮಾಡಿದ್ದಾರೆ. ಇಂದಿರಾ ಗಾಂಧಿ ಅವರು ಹತ್ಯೆಯಾದ ಸಮಯದಲ್ಲಿ ದುಃಖಪಟ್ಟಿದ್ದು ಬಿಟ್ಟರೆ ಅಷ್ಟು ದುಃಖಪಟ್ಟಿದ್ದು ಈ ದಿನವೇ ಎಂದು ಅವರು ಹೇಳಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ಕೊಟ್ಟರು.

ಹೆಣ್ಣು ಮಕ್ಕಳನ್ನು ಕಿಡ್ನಾಪ್ ಮಾಡಿ ಬೇಲಿ ಹಾಕಿದಾಗ ದುಃಖ ಆಗಲಿಲ್ಲವೇ? : ತಾಯಂದಿರ ಕಣ್ಣೀರು ಈ ವ್ಯಕ್ತಿಗೆ ಈಗ ಕಾಣುತ್ತಿದೆಯಾ? ನಾನು ಡಿ.ಕೆ.ಶಿವಕುಮಾರ್ ಗೆ ಕೇಳಲು ಬಯಸುತ್ತೇನೆ. ಕೆಲ ಹೆಣ್ಣು ಮಕ್ಕಳನ್ನು ಅಪಹರಣ (ಕಿಡ್ನಾಪ್) ಮಾಡಿ ಅವರ ಅಪ್ಪ ಅಮ್ಮನಿಂದ ಜಮೀನು ಬರೆಸಿಕೊಂಡಾಗ ನಿಮಗೆ ದುಃಖ ಆಗಲಿಲ್ಲವೇ.. ಪಾಪ.. ಇದೆಲ್ಲವನ್ನು ನಾನು ಕಂಡಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ನೇರ ವಾಗ್ದಾಳಿ ನಡೆಸಿದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

8 mins ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

11 mins ago

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

17 mins ago

ಶಿಕ್ಷಕರಿಗೆ ಪಠ್ಯಪುಸ್ತಕ ಸಾಗಣೆ ಹೊರೆ?

ಬೋಧಿಸಬೇಕೆಂದರೆ  ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ…

21 mins ago

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

12 hours ago