ರಾಜ್ಯ

ತಾಯಂದಿರ ಬಗ್ಗೆ ಹೇಳಿಕೆ; ಹೆಚ್.ಡಿ.ಕುಮಾರಸ್ವಾಮಿ ವಿಷಾದ !

  • ಮಹಿಳೆಯರಿಗೆ ಕಾಂಗ್ರೆಸ್ ಎಸಗಿದ ಅಪಮಾನಗಳ ಕಂತೆ ಕಂತೆ ಪಟ್ಟಿ ಕೊಟ್ಟ ಮಾಜಿ ಮುಖ್ಯಮಂತ್ರ

ಬೆಂಗಳೂರು: ನನ್ನ ಹೇಳಿಕೆಯಿಂದ ತಾಯಂದಿರಿಗೆ ನೋವಾಗಿದ್ದರೆ ನಾನು ವಿಷಾದಿಸುತ್ತೇನೆ. ಮಹಿಳೆಯರನ್ನು ಅಪಮಾನಿಸಿಲ್ಲ, ಅಂತಹ ಜಾಯಮಾನವೂ ನನ್ನದಲ್ಲ. ವಿಷಾದಿಸುವುದಕ್ಕೆ ನನಗೆ ಯಾವ ಪ್ರತಿಷ್ಠೆಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು; ನಾಡಿನ ಜನರನ್ನು ಮರಳು ಮಾಡುತ್ತಿರುವ ಐದು ಗ್ಯಾರಂಟಿಗಳ ವಿರುದ್ಧ ಕಿಡಿಕಾರಿದರು.

ಅಳಬೇಡಪ್ಪ ಡಿ.ಕೆ.ಶಿವಕುಮಾರ್. ನಾನೇನು ವಿಷಾದ ವ್ಯಕ್ತಪಡಿಸುತ್ತೇನೆ. ನೀನು ದುಃಖ ಪಡಬೇಡಪ್ಪ. ನೀನು ಏನ್ ದುಃಖ ಪಟ್ಟಿದ್ದೀಯಾ ಎನ್ನುವುದನ್ನು ನೋಡಿದ್ದೇನೆ ಎಂದು ನೇರ ಡಿಕೆಶಿಯನ್ನು ತರಾಟೆಗೆ ತೆಗೆದುಕೊಂಡರು ಕುಮಾರಸ್ವಾಮಿ ಅವರು.

ಕಾಂಗ್ರೆಸ್ ಮಹಿಳಾ ನಾಯಕಿಯರಿಗೆ ದುಃಖ ಆಗಿದ್ದರೆ ಅದಕ್ಕೂ ವಿಷಾದ ವ್ಯಕ್ತಪಡಿಸುತ್ತೇನೆ. ಯಾರಿಗೇ ದುಃಖ ಆಗಿದ್ದರೂ ವಿಷಾದ ವ್ಯಕ್ತಪಡಿಸುತ್ತೇನೆ. ಆದರೆ ನಾನು ಇವರಂತೆ ಕೆನ್ನೆ ನೆಕ್ಕೋದು, ಹೆಣ್ಣು ಮಕ್ಕಳಿಗೆ ರೇಟ್ ಫಿಕ್ಸ್ ಮಾಡಿದ ರೀತಿ ನಾನು ಮಾತನಾಡಿಲ್ಲ. ನಾನು ತಪ್ಪು ಮಾಡಿಲ್ಲ. ಜನರಿಗೇ ನನ್ನ ಹೇಳಿಕೆಯನ್ನು ಬಿಡುತ್ತೇನೆ. ಅವರೇ ತೀರ್ಮಾನ ಮಾಡಲಿ ಎಂದು ಹೇಳಿದರು ಅವರು.

ತಮ್ಮ ಹೇಳಿಕೆಯ ಮಾಧ್ಯಮ ವರದಿಗಳನ್ನು ಮಾಧ್ಯಮಗೋಷ್ಠಿಯಲ್ಲಿ ಓದಿದ ಕುಮಾರಸ್ವಾಮಿ ಅವರು; ಜನರಿಂದ ಕಿತ್ತುಕೊಂಡ ಹಣವನ್ನೇ ಕಾಂಗ್ರೆಸ್ಸಿನವರು ಗ್ಯಾರಂಟಿ ಎಂದು ಕೊಡುತ್ತಿದೆ. ಈ ಐದು ಗ್ಯಾರಂಟಿಗಳು ‘ಪಿಕ್ ಪಾಕೆಟ್ ಗ್ಯಾರಂಟಿಗಳು’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತುಮಕೂರು ಲೋಕಸಭೆ ಕ್ಷೇತ್ರದ ತುರುವೇಕೆರೆಯಲ್ಲಿ ನಾನು ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದೆ‌. ಆ ಸಭೆಯಲ್ಲಿ ಹಲವಾರು ವಿಷಯಗಳನ್ನು ಪ್ರಸ್ತಾಪ ಮಾಡಿದ್ದೆ. ಕುಮಾರಸ್ವಾಮಿ ತಾಯಂದಿರಿಗೆ ಅಪಮಾನ ಮಾಡಿದ್ದಾರೆ. ಅವರು ಕ್ಷಮೆಗೆ ಅರ್ಹರಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ. ವಾಯುವೆಗದಲ್ಲಿ ತಮ್ಮ ಶಾಸಕರು, ಮಾಜಿ ಶಾಸಕರು, ಮಹಿಳಾ ಘಟಕದವರ ಜತೆ ಝೂಮ್ ಮೀಟಿಂಗ್ ಮಾಡಿದ್ದಾರೆ. ಇಂದಿರಾ ಗಾಂಧಿ ಅವರು ಹತ್ಯೆಯಾದ ಸಮಯದಲ್ಲಿ ದುಃಖಪಟ್ಟಿದ್ದು ಬಿಟ್ಟರೆ ಅಷ್ಟು ದುಃಖಪಟ್ಟಿದ್ದು ಈ ದಿನವೇ ಎಂದು ಅವರು ಹೇಳಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ಕೊಟ್ಟರು.

ಹೆಣ್ಣು ಮಕ್ಕಳನ್ನು ಕಿಡ್ನಾಪ್ ಮಾಡಿ ಬೇಲಿ ಹಾಕಿದಾಗ ದುಃಖ ಆಗಲಿಲ್ಲವೇ? : ತಾಯಂದಿರ ಕಣ್ಣೀರು ಈ ವ್ಯಕ್ತಿಗೆ ಈಗ ಕಾಣುತ್ತಿದೆಯಾ? ನಾನು ಡಿ.ಕೆ.ಶಿವಕುಮಾರ್ ಗೆ ಕೇಳಲು ಬಯಸುತ್ತೇನೆ. ಕೆಲ ಹೆಣ್ಣು ಮಕ್ಕಳನ್ನು ಅಪಹರಣ (ಕಿಡ್ನಾಪ್) ಮಾಡಿ ಅವರ ಅಪ್ಪ ಅಮ್ಮನಿಂದ ಜಮೀನು ಬರೆಸಿಕೊಂಡಾಗ ನಿಮಗೆ ದುಃಖ ಆಗಲಿಲ್ಲವೇ.. ಪಾಪ.. ಇದೆಲ್ಲವನ್ನು ನಾನು ಕಂಡಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ನೇರ ವಾಗ್ದಾಳಿ ನಡೆಸಿದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

9 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

9 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

10 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

10 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

10 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

10 hours ago