ರಾಜ್ಯ

ತಾಯಂದಿರ ಬಗ್ಗೆ ಹೇಳಿಕೆ; ಹೆಚ್.ಡಿ.ಕುಮಾರಸ್ವಾಮಿ ವಿಷಾದ !

  • ಮಹಿಳೆಯರಿಗೆ ಕಾಂಗ್ರೆಸ್ ಎಸಗಿದ ಅಪಮಾನಗಳ ಕಂತೆ ಕಂತೆ ಪಟ್ಟಿ ಕೊಟ್ಟ ಮಾಜಿ ಮುಖ್ಯಮಂತ್ರ

ಬೆಂಗಳೂರು: ನನ್ನ ಹೇಳಿಕೆಯಿಂದ ತಾಯಂದಿರಿಗೆ ನೋವಾಗಿದ್ದರೆ ನಾನು ವಿಷಾದಿಸುತ್ತೇನೆ. ಮಹಿಳೆಯರನ್ನು ಅಪಮಾನಿಸಿಲ್ಲ, ಅಂತಹ ಜಾಯಮಾನವೂ ನನ್ನದಲ್ಲ. ವಿಷಾದಿಸುವುದಕ್ಕೆ ನನಗೆ ಯಾವ ಪ್ರತಿಷ್ಠೆಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು; ನಾಡಿನ ಜನರನ್ನು ಮರಳು ಮಾಡುತ್ತಿರುವ ಐದು ಗ್ಯಾರಂಟಿಗಳ ವಿರುದ್ಧ ಕಿಡಿಕಾರಿದರು.

ಅಳಬೇಡಪ್ಪ ಡಿ.ಕೆ.ಶಿವಕುಮಾರ್. ನಾನೇನು ವಿಷಾದ ವ್ಯಕ್ತಪಡಿಸುತ್ತೇನೆ. ನೀನು ದುಃಖ ಪಡಬೇಡಪ್ಪ. ನೀನು ಏನ್ ದುಃಖ ಪಟ್ಟಿದ್ದೀಯಾ ಎನ್ನುವುದನ್ನು ನೋಡಿದ್ದೇನೆ ಎಂದು ನೇರ ಡಿಕೆಶಿಯನ್ನು ತರಾಟೆಗೆ ತೆಗೆದುಕೊಂಡರು ಕುಮಾರಸ್ವಾಮಿ ಅವರು.

ಕಾಂಗ್ರೆಸ್ ಮಹಿಳಾ ನಾಯಕಿಯರಿಗೆ ದುಃಖ ಆಗಿದ್ದರೆ ಅದಕ್ಕೂ ವಿಷಾದ ವ್ಯಕ್ತಪಡಿಸುತ್ತೇನೆ. ಯಾರಿಗೇ ದುಃಖ ಆಗಿದ್ದರೂ ವಿಷಾದ ವ್ಯಕ್ತಪಡಿಸುತ್ತೇನೆ. ಆದರೆ ನಾನು ಇವರಂತೆ ಕೆನ್ನೆ ನೆಕ್ಕೋದು, ಹೆಣ್ಣು ಮಕ್ಕಳಿಗೆ ರೇಟ್ ಫಿಕ್ಸ್ ಮಾಡಿದ ರೀತಿ ನಾನು ಮಾತನಾಡಿಲ್ಲ. ನಾನು ತಪ್ಪು ಮಾಡಿಲ್ಲ. ಜನರಿಗೇ ನನ್ನ ಹೇಳಿಕೆಯನ್ನು ಬಿಡುತ್ತೇನೆ. ಅವರೇ ತೀರ್ಮಾನ ಮಾಡಲಿ ಎಂದು ಹೇಳಿದರು ಅವರು.

ತಮ್ಮ ಹೇಳಿಕೆಯ ಮಾಧ್ಯಮ ವರದಿಗಳನ್ನು ಮಾಧ್ಯಮಗೋಷ್ಠಿಯಲ್ಲಿ ಓದಿದ ಕುಮಾರಸ್ವಾಮಿ ಅವರು; ಜನರಿಂದ ಕಿತ್ತುಕೊಂಡ ಹಣವನ್ನೇ ಕಾಂಗ್ರೆಸ್ಸಿನವರು ಗ್ಯಾರಂಟಿ ಎಂದು ಕೊಡುತ್ತಿದೆ. ಈ ಐದು ಗ್ಯಾರಂಟಿಗಳು ‘ಪಿಕ್ ಪಾಕೆಟ್ ಗ್ಯಾರಂಟಿಗಳು’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತುಮಕೂರು ಲೋಕಸಭೆ ಕ್ಷೇತ್ರದ ತುರುವೇಕೆರೆಯಲ್ಲಿ ನಾನು ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದೆ‌. ಆ ಸಭೆಯಲ್ಲಿ ಹಲವಾರು ವಿಷಯಗಳನ್ನು ಪ್ರಸ್ತಾಪ ಮಾಡಿದ್ದೆ. ಕುಮಾರಸ್ವಾಮಿ ತಾಯಂದಿರಿಗೆ ಅಪಮಾನ ಮಾಡಿದ್ದಾರೆ. ಅವರು ಕ್ಷಮೆಗೆ ಅರ್ಹರಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ. ವಾಯುವೆಗದಲ್ಲಿ ತಮ್ಮ ಶಾಸಕರು, ಮಾಜಿ ಶಾಸಕರು, ಮಹಿಳಾ ಘಟಕದವರ ಜತೆ ಝೂಮ್ ಮೀಟಿಂಗ್ ಮಾಡಿದ್ದಾರೆ. ಇಂದಿರಾ ಗಾಂಧಿ ಅವರು ಹತ್ಯೆಯಾದ ಸಮಯದಲ್ಲಿ ದುಃಖಪಟ್ಟಿದ್ದು ಬಿಟ್ಟರೆ ಅಷ್ಟು ದುಃಖಪಟ್ಟಿದ್ದು ಈ ದಿನವೇ ಎಂದು ಅವರು ಹೇಳಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ಕೊಟ್ಟರು.

ಹೆಣ್ಣು ಮಕ್ಕಳನ್ನು ಕಿಡ್ನಾಪ್ ಮಾಡಿ ಬೇಲಿ ಹಾಕಿದಾಗ ದುಃಖ ಆಗಲಿಲ್ಲವೇ? : ತಾಯಂದಿರ ಕಣ್ಣೀರು ಈ ವ್ಯಕ್ತಿಗೆ ಈಗ ಕಾಣುತ್ತಿದೆಯಾ? ನಾನು ಡಿ.ಕೆ.ಶಿವಕುಮಾರ್ ಗೆ ಕೇಳಲು ಬಯಸುತ್ತೇನೆ. ಕೆಲ ಹೆಣ್ಣು ಮಕ್ಕಳನ್ನು ಅಪಹರಣ (ಕಿಡ್ನಾಪ್) ಮಾಡಿ ಅವರ ಅಪ್ಪ ಅಮ್ಮನಿಂದ ಜಮೀನು ಬರೆಸಿಕೊಂಡಾಗ ನಿಮಗೆ ದುಃಖ ಆಗಲಿಲ್ಲವೇ.. ಪಾಪ.. ಇದೆಲ್ಲವನ್ನು ನಾನು ಕಂಡಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ನೇರ ವಾಗ್ದಾಳಿ ನಡೆಸಿದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

1 hour ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

2 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

2 hours ago

ಏಪ್ರಿಲ್.‌20ರಿಂದ ಸಿಎಂ ಸಿದ್ದರಾಮಯ್ಯ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.‌20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.‌20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…

2 hours ago

ತಿದ್ದುಪಡಿ ಮಸೂದೆಗೆ ಸೋಲು: ಕರಾಳ ಇತಿಹಾಸ ಮರುಕಳಿಸಲಿದೆ ಎಂದ ಎಚ್.ಡಿ.ಕುಮಾರಸ್ವಾಮಿ ಕಿಡಿ

ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ…

3 hours ago

ಮೈಸೂರು| ತೃತೀಯ ಲಿಂಗಿಗೆ ಲೈಂಗಿಕ ಕಿರುಕುಳ, ಅಪಹರಣ ಯತ್ನ ಪ್ರಕರಣ: ಮೂವರ ಬಂಧನ

ಮೈಸೂರು: ನಗರದ ಮೇಟಗಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ತೃತೀಯ ಲಿಂಗಿಯೊಬ್ಬರಿಗೆ ಅಪಹರಣ ಯತ್ನ ಹಾಗೂ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ…

4 hours ago