ಬೆಂಗಳೂರು: ಮಂಗನ ಕಾಯಿಲೆಗೆ 2026ರ ವೇಳೆಗೆ ಲಸಿಕೆ ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜನತೆಗೆ ಗುಡ್ನ್ಯೂಸ್ ಕೊಟ್ಟಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಎಫ್ಡಿ ಲಸಿಕೆ 2026ಕ್ಕೆ ಲಭ್ಯವಾಗಲಿದೆ. ಆದರೆ ಅಲ್ಲಿಯವರೆಗೂ ಮಂಗನ ಕಾಯಿಲೆಯನ್ನು ಹತೋಟಿಯಲ್ಲಿಟ್ಟುಕೊಂಡು ಯಾವುದೇ ಸಾವುಗಳಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.
ಇನ್ನು ಪ್ರತಿ ವರ್ಷ ಜನವರಿ ತಿಂಗಳಿನಿಂದ ಆರಂಭವಾಗಿ ಬೇಸಿಕೆ ಕಾಲದಲ್ಲಿ ಮಂಗನ ಕಾಯಿಲೆ ತೀವ್ರವಾಗಿ ಉಲ್ಬಣಗೊಳ್ಳುತ್ತದೆ.
ಈ ಬಾರಿ ಆರಂಭದಲ್ಲೇ ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚು ಗಮನ ಹರಿಸಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಮುಂಜಾಗ್ರತ ಕ್ರಮವಾಗಿ ಮಂಗನ ಕಾಯಿಲೆ ಇರುವ ಪ್ರದೇಶಗಳಲ್ಲಿ ಯಾರಿಗೆ ಜ್ವರ ಬಂದರೂ ಕಡ್ಡಾಯವಾಗಿ ಟೆಸ್ಟಿಂಗ್ ಮಾಡಿ ಚಿಕಿತ್ಸೆ ಆರಂಭಿಸಬೇಕು. ಇದರಿಂದ ಆರಂಭದಲ್ಲಿಯೇ ಕೆಎಫ್ಡಿ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಬಹುದು ಎಂದರು.
ಈ ಮೂಲಕ ಮಂಗನ ಕಾಯಿಲೆ ತಡೆಗಟ್ಟಲು ಆರೋಗ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…