ಬೆಂಗಳೂರು: ಮಂಗನ ಕಾಯಿಲೆಗೆ 2026ರ ವೇಳೆಗೆ ಲಸಿಕೆ ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜನತೆಗೆ ಗುಡ್ನ್ಯೂಸ್ ಕೊಟ್ಟಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಎಫ್ಡಿ ಲಸಿಕೆ 2026ಕ್ಕೆ ಲಭ್ಯವಾಗಲಿದೆ. ಆದರೆ ಅಲ್ಲಿಯವರೆಗೂ ಮಂಗನ ಕಾಯಿಲೆಯನ್ನು ಹತೋಟಿಯಲ್ಲಿಟ್ಟುಕೊಂಡು ಯಾವುದೇ ಸಾವುಗಳಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.
ಇನ್ನು ಪ್ರತಿ ವರ್ಷ ಜನವರಿ ತಿಂಗಳಿನಿಂದ ಆರಂಭವಾಗಿ ಬೇಸಿಕೆ ಕಾಲದಲ್ಲಿ ಮಂಗನ ಕಾಯಿಲೆ ತೀವ್ರವಾಗಿ ಉಲ್ಬಣಗೊಳ್ಳುತ್ತದೆ.
ಈ ಬಾರಿ ಆರಂಭದಲ್ಲೇ ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚು ಗಮನ ಹರಿಸಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಮುಂಜಾಗ್ರತ ಕ್ರಮವಾಗಿ ಮಂಗನ ಕಾಯಿಲೆ ಇರುವ ಪ್ರದೇಶಗಳಲ್ಲಿ ಯಾರಿಗೆ ಜ್ವರ ಬಂದರೂ ಕಡ್ಡಾಯವಾಗಿ ಟೆಸ್ಟಿಂಗ್ ಮಾಡಿ ಚಿಕಿತ್ಸೆ ಆರಂಭಿಸಬೇಕು. ಇದರಿಂದ ಆರಂಭದಲ್ಲಿಯೇ ಕೆಎಫ್ಡಿ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಬಹುದು ಎಂದರು.
ಈ ಮೂಲಕ ಮಂಗನ ಕಾಯಿಲೆ ತಡೆಗಟ್ಟಲು ಆರೋಗ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…