ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ ಐತಿಹಾಸಿಕ ಅರ್ಧನಾರೇಶ್ವರ ದೇವಸ್ಥಾನ ಪತ್ತೆಯಾಗಿದ್ದು, ಪುರಾತತ್ವ ವಲಯದಲ್ಲಿ ಸಂಚಲನ ಮೂಡಿಸಿದೆ.
ಶಿವಯ್ಯ ಹಾಗೂ ಶೇಖರಯ್ಯ ಚೌಕಿಮಠ ಎಂಬವರ ಕುಟುಂಬ ದೇವಸ್ಥಾನದೊಳಗೆ ಮನೆ ನಿರ್ಮಾಣ ಮಾಡಿಕೊಂಡು ವಾಸಿಸುತ್ತಿದೆ. ಈ ಮನೆಯಲ್ಲಿ ಸುಮಾರು 5-6 ಮಂದಿ ವಾಸ ಮಾಡುತ್ತಿದ್ದಾರೆ. ದೇವಸ್ಥಾನದ ಹೊರಭಾಗದಲ್ಲಿ ಮನೆಯಿದೆ ಎನ್ನಲಾಗಿದೆ.
ಮೇಲ್ನೋಟಕ್ಕೆ ಸಾಮಾನ್ಯ ಮನೆ ಎನಿಸಿದರೂ, ಒಳಗೆ ಪ್ರವೇಶಿಸಿದರೆ ಸುಮಾರು ಹತ್ತು ಅಡಿ ಮಣ್ಣಿನಡಿಯಲ್ಲಿ ಹುದುಗಿದ್ದ ಚಾಲುಕ್ಯರ ಕಾಲದ ಪುರಾತನ ದೇವಾಲಯ ಪತ್ತೆಯಾಗಿದ್ದು ಇದು ನಾಲ್ಕನೇ ಶತಮಾನದ ಶಿವನ ಮೂರ್ತಿಯಾಗಿದೆ.
ಇತಿಹಾಸಕಾರರ ಪ್ರಕಾರ, ಇದು 10-11ನೇ ಶತಮಾನದ ಚಾಲುಕ್ಯರ ಕಾಲದ ಈಶ್ವರ ದೇವಸ್ಥಾನವಾಗಿದ್ದು, ವಾಸ್ತುಶಿಲ್ಪ ಹಾಗೂ ಶಿಲ್ಪಕಲೆ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ. ದೇವಸ್ಥಾನದ ಗರ್ಭಗುಡಿ, ಶಿಲ್ಪ ಕೆತ್ತನೆಗಳು ಹಾಗೂ ವಾಸ್ತು ವಿನ್ಯಾಸಗಳು ಪ್ರಾಚೀನ ಪರಂಪರೆಯನ್ನು ಪ್ರತಿಬಿಂಬಿಸುತ್ತಿವೆ.
ಈ ಬೆಳವಣಿಗೆ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಪುರಾತತ್ವ ಇಲಾಖೆ ದೇವಸ್ಥಾನವನ್ನು ವಶಕ್ಕೆ ಪಡೆದು ಜೀರ್ಣೋದ್ಧಾರ ಮಾಡುವ ಯೋಜನೆ ರೂಪಿಸುತ್ತಿದೆ. ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು ಶೀಘ್ರದಲ್ಲೇ ಸಂರಕ್ಷಣಾ ಕಾರ್ಯ ಆರಂಭಿಸುವ ಭರವಸೆ ನೀಡಿದ್ದಾರೆ.
ಆದರೆ, ಚೌಕಿಮಠ ಕುಟುಂಬದ ಶರಣಯ್ಯ ಹಾಗೂ ಶೇಖರಯ್ಯ ಚೌಕಿಮಠ ಅವರು ಸ್ಪಷ್ಟಪಡಿಸಿರುವಂತೆ ಇಲ್ಲಿ ವಾಸಿಸುವವರೆಲ್ಲರೂ ಬಡ ಕುಟುಂಬಗಳು. ಸರ್ಕಾರ ಸೂಕ್ತ ಪರಿಹಾರ ನೀಡಿದರೆ ಮಾತ್ರ ಮನೆ ಬಿಟ್ಟು ಕೊಡಲು ಸಿದ್ಧ ಎಂದಿದ್ದಾರೆ.
ಪ್ರಸ್ತುತ ಈ ಆವರಣದಲ್ಲಿ ಶರಣಯ್ಯ ಚೌಕಿಮಠ, ಶೇಖರಯ್ಯ ಚೌಕಿಮಠ, ಬಸವ್ವ ಈರಯ್ಯ ಚೌಕಿಮಠ, ಕೊಟ್ರಯ್ಯ ಚೌಕಿಮಠ ಹಾಗೂ ಈರಮ ಶಂಕ್ರಯ್ಯ ಚೌಕಿಮಠ ಕುಟುಂಬಗಳು ವಾಸಿಸುತ್ತಿವೆ.
ಇತಿಹಾಸ ಮತ್ತು ಜನಜೀವನದ ನಡುವಿನ ಈ ಮಹತ್ವದ ಪ್ರಕರಣದಲ್ಲಿ ಮುಂದಿನ ನಿರ್ಧಾರ ಸರ್ಕಾರದ ಕೈಯಲ್ಲಿದ್ದು, ಲಕ್ಕುಂಡಿ ಗ್ರಾಮ ಮತ್ತೊಮೆ ಐತಿಹಾಸಿಕ ಕೇಂದ್ರಬಿಂದುವಾಗಿ ಹೊರಹೊಮ್ಮುವ ಸಾಧ್ಯತೆ ದಟ್ಟವಾಗಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…