ಶಿವಮೊಗ್ಗ: ಹಣವನ್ನು ಡಬಲ್ ಮಾಡುತ್ತದೆ ಎಂದು ನಂಬಿ ಆನ್ಲೈನ್ ಅಪ್ಲಿಕೇಷನ್ಗೆ ಹಣ ಹೂಡಿಕೆ ಮಾಡಿ ಮೋಸ ಹೋದ ಯುವನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಭದ್ರಾವತಿ ನಗರದ ಪೇಪರ್ ಲೇಔಟ್ನ 27 ವರ್ಷದ ಪ್ರದೀಪ್ ನೇಣಿಗೆ ಶರಣಾದ ಯುವಕನಾಗಿದ್ದಾನೆ.
ಮಾಚೇನಹಳ್ಳಿಯ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ, ಆನ್ಲೈನ್ನಲ್ಲಿ ಹಣ ಹೂಡಿಕೆ ಮಾಡಿದರೆ ಹಣ ಡಬಲ್ ಆಗುತ್ತದೆ ಎಂದು ನಂಬಿ ಹಲವು ಕಡೆಗಳಲ್ಲಿ ಸಾಲ ಮಾಡಿ ಸುಮಾರು 90 ಸಾವಿರ ರೂ.ಗಳನ್ನು ಖಾಸಗಿ ಆಪ್ನಲ್ಲಿ ಹೂಡಿಕೆ ಮಾಡಿದ್ದನು.
ಆದರೆ ಹಣ ವಾಪಸ್ ಸಿಗದೇ ಮನನೊಂದ ಪ್ರದೀಪ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಪೇಪರ್ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…
ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…
ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…
ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…
ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…