ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆ ತಂದವರು ಎಸ್.ಎಂ.ಕೃಷ್ಣ ಎಂದು ಅಭಿಷೇಕ್ ಅಂಬರೀಷ್ ಹೇಳಿದ್ದಾರೆ.
ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ರಾಜಕೀಯ ಗಣ್ಯರು ಹಾಗೂ ಸಿನಿಮಾ ಕಲಾವಿದರು ಸಂತಾಪ ಸೂಚಿಸಿದ್ದಾರೆ.
ಅಭಿಷೇಕ್ ಅಂಬರೀಷ್ ಕೂಡ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅಭಿಷೇಕ್ ಅಂಬರೀಷ್ ಅವರು, ಎಸ್.ಎಂ.ಕೃಷ್ಣ ಅವರನ್ನು ಕಳೆದುಕೊಂಡಿದ್ದು ದೇಶಕ್ಕೆ ನಷ್ಟ ಎಂದು ಭಾವುಕರಾದರು.
ಉತ್ತಮವಾದ ರಾಜಕಾರಣಿ ಎಸ್.ಎಂ.ಕೃಷ್ಣ ಅವರನ್ನು ಕಳೆದುಕೊಂಡದ್ದು ದೇಶಕ್ಕೆ ದೊಡ್ಡ ಲಾಸ್. ರಾಜ್ಯದ ರಾಜಕಾರಣದಲ್ಲಿ ಬದಲಾವಣೆ ತಂದವರು. ತಂದೆಯ ಜೊತೆಗಿನ ಕೃಷ್ಣ ಅವರ ಒಡನಾಟ ಹೇಳೋಕೆ ಆಗ ನಾನು ಚಿಕ್ಕವನಿದ್ದೆ. ಆದರೆ 1998ರಲ್ಲಿ ಮಂಡ್ಯ ಕಡೆ ಅವರೊಂದಿಗೆ ಕ್ಯಾಂಪೇನ್ ಮಾಡಿದ್ವಿ ಎಂದು ಹಳೆಯ ರಾಜಕೀಯ ನೆನಪುಗಳನ್ನು ಮೆಲುಕು ಹಾಕಿದರು.
ಇನ್ನು ಎಸ್.ಎಂ.ಕೃಷ್ಣ ಅವರು ಸಿಎಂ ಆಗಿದ್ದ ವೇಳೆ ಬೆಂಗಳೂರು ಸಾಕಷ್ಟು ಬದಲಾಯಿತು. ಚಿತ್ರರಂಗಕ್ಕೂ ಅವರ ಕೊಡುಗೆ ಸಾಕಷ್ಟಿದೆ. ಕಲಾವಿದರ ಮೇಲೆ ಅವರು ಸಾಕಷ್ಟು ಕಾಳಜಿ ತೋರಿಸುತ್ತಿದ್ದರು ಎಂದು ಸ್ಮರಿಸಿದರು.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…