ರಾಜ್ಯ

ಎನ್‌ಪಿಎಸ್‌ ರದ್ದುಗೊಳಿಸಿ ಒಪಿಎಸ್‌ ಜಾರಿ :ಸಿದ್ದರಾಮಯ್ಯ ಮಹತ್ವದ ನಿರ್ಧಾರ!

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಎನ್ ಪಿಎಸ್ ( NPS) ರದ್ದುಗೊಳಿಸಿ ಓಪಿಎಸ್(OPS) ಜಾರಿಗೊಳಿಸೋದಾಗಿದೆ. ಇಂತಹ ಬೇಡಿಕೆ ಈಡೇರಿಸೋ ಬಗ್ಗೆ ಸಿಎಂ ಸಿದ್ಧರಾಮಯ್ಯ  ಇಂದು ಮಹತ್ವದ ಘೋಷಣೆ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ ಪದಾಧಿಕಾರಿಗಳು ಇಂದು ಅವರನ್ನು ಭೇಟಿಯಾಗಿ ಎನ್.ಪಿ.ಎಸ್ ರದ್ದತಿ ಬಗ್ಗೆ ಚರ್ಚಿಸಿದರು.

ಈ ಬಳಿಕ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಎನ್.ಪಿ.ಎಸ್ ರದ್ದತಿ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸಂಪುಟ ಸದಸ್ಯರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ಎನ್.ಪಿ.ಎಸ್ ರದ್ದತಿಯ ಸಾಧ್ಯಾಸಾಧ್ಯತೆಗಳ ಕುರಿತು ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು. ಇದನ್ನು ರದ್ದು ಪಡಿಸಿದ ಇತರ ರಾಜ್ಯಗಳಲ್ಲಿ ಅನುಸರಿಸಿರುವ ಕ್ರಮಗಳ ಕುರಿತೂ ಸಹ ಪರಿಶೀಲಿಸಲಾಗುವುದು. ಆರ್ಥಿಕ ಇಲಾಖೆ ಕೂಡ ಈ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಲಿದೆ ಎಂದರು.

ಮುಖ್ಯಮಂತ್ರಿಗಳ ಹಾಗೂ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ: ತ್ರಿಲೋಕ್ ಚಂದ್ರ , ಎಸ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ತೇಜ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ್ ಹಾಗೂ ವಿವಿಧ ಸರ್ಕಾರಿ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ಬರಿಗೈಯಲ್ಲಿ ಚರಂಡಿ ಸ್ವಚ್ಛ ಮಾಡಿದ ಪೌರಕಾರ್ಮಿಕರು

ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…

3 mins ago

ಮಾರ್ಚ್.‌10ರ ಬಳಿಕ ಐದು ರಾಜ್ಯಗಳ ಚುನಾವಣಾ ವೇಳಾಪಟ್ಟಿ ಪ್ರಕಟ.?

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ನಾಲ್ಕು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಲು…

9 mins ago

ಓದುಗರ ಪತ್ರ: ಲಂಚದ ಹಾವಳಿಗೆ ಕಡಿವಾಣ ಹಾಕಿ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಲಂಚದ ಹಾವಳಿ ಮಿತಿ ಮೀರಿದೆ. ಉಳ್ಳವರು ಲಂಚ ಕೊಟ್ಟು ತಮ್ಮ ಕೆಲಸವನ್ನು ಮಾಡಿಸಿಕೊಳ್ಳುತ್ತಾರೆ. ಆದರೆ…

12 mins ago

ಓದುಗರ ಪತ್ರ: ಗ್ಯಾರಂಟಿ ಯೋಜನೆಗೆ ಪರಿಶಿಷ್ಟರ ಮೀಸಲು ಹಣ ಬಳಸಬೇಡಿ

ಮಾರ್ಚ್ ೬ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೦೨೬-೨೭ ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ. ಈ ಬಾರಿಯ ಆಯವ್ಯದಲ್ಲಿ ಪರಿಶಿಷ್ಟ ಜಾತಿ…

14 mins ago

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಚಾಮರಾಜನಗರದ ಅಗ್ರಹಾರ ಮೊದಲಾದ ಪ್ರದೇಶದಲ್ಲಿರುವ ಚರಂಡಿಗಳಲ್ಲಿ ಹೂಳು ತುಂಬಿದ್ದು, ಸ್ವಚ್ಛತೆ ಇಲ್ಲದೆ ಸೊಳ್ಳೆ, ನೊಣಗಳ ಹಾವಳಿ ತೀವ್ರವಾಗಿದ್ದು, ರೋಗ ಭೀತಿಯುಂಟಾಗಿದೆ.…

16 mins ago

ಓದುಗರ ಪತ್ರ: ಶಾಲಾ ಪ್ರವೇಶಾತಿಗೆ ವಯೋಮಿತಿ ಸಡಿಲಿಸಿ

ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ರ ಕಟ್ಟುನಿಟ್ಟಿನ ವಯೋಮಿತಿ ನಿಗದಿಪಡಿಸಿರುವುದು ರಾಜ್ಯದ ಸುಮಾರು ೨.೩೦ ಲಕ್ಷ ಮಕ್ಕಳ ಶೈಕ್ಷಣಿಕ ಹಿತಾಸಕ್ತಿಗೆ…

20 mins ago