ಬೆಂಗಳೂರು: ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ 1ನೇ ತರಗತಿ ವಿದ್ಯಾರ್ಥಿಯ ಸಾವಿಗೆ ಕಾರಣರಾದ ಬಸ್ ಚಾಲಕನನ್ನು ಹೆಚ್ಎಎಲ್ ಪೊಲೀಸರು ಬಂಧಿಸಿದ್ದಾರೆ. ವಿಠ್ಠಲ್ ಬಂಧಿತ ಚಾಲಕ. ಮುನ್ನೇಕೊಳಾಲ ನಿವಾಸಿ ನಿತೀಶ್ ಕುಮಾರ್ (7) ಮೃತ ಬಾಲಕ.
ಬುಧವಾರ ಬೆಳಗ್ಗೆ 9 ಗಂಟೆ ವೇಳೆ ಶಾಲೆಯ ಸಮೀಪ ನಡೆದುಕೊಂಡು ಬರುವಾಗ ರಸ್ತೆಬದಿ ನಿಂತಿದ್ದ ಬಾಲಕನಿಗೆ ಖಾಸಗಿ ಶಾಲಾ ವಾಹನ ಚಾಲಕ ವಿಠ್ಠಲ್ ಡಿಕ್ಕಿ ಹೊಡೆದುಕೊಂಡು ಹೋಗಿದ್ದ. ಪರಿಣಾಮ ಬಾಲಕ ಕೆಳಗೆ ಬಿದ್ದು, ತಲೆಗೆ ಗಾಯವಾಗಿತ್ತು. ನೋವಿನಲ್ಲಿಯೇ ಬಾಲಕ, ಶಾಲೆಗೆ ಹೋಗಿ ತರಗತಿಯಲ್ಲಿ ಕುಳಿತುಕೊಂಡಿದ್ದ. ವಿಷಯ ತಿಳಿದ ಶಿಕ್ಷಕರು, ಬಾಲಕನ್ನು ಆರೈಕೆ ಮಾಡುತ್ತಿದ್ದಾಗ ಪ್ರಜ್ಞೆ ತಪ್ಪಿದ್ದ. ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮತ್ತೊಂದು ಆಸ್ಪತ್ರೆಗೆ ರವಾನೆ ಮಾಡಿದ್ದರು. ಆದ್ರೆ ಬಾಲಕನ ತಲೆಗೆ ತೀವ್ರ ಸ್ವರೂಪದ ಗಾಯವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾನೆ.
ವಿಷಯ ತಿಳಿದ ಸಂಚಾರ ಪೊಲೀಸರು, ಆಸ್ಪತ್ರೆಗೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಅನಾಹುತ ನಡೆದ ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಚಾಲಕನನ್ನು ಬಂಧಿಸಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.