ಬೆಳಗಾವಿ: ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಏಳು ಮಂದ ಕನ್ನಡಿಗರರು ಸಾವನ್ನಪ್ಪಿದ್ದಾರೆ.
144 ವರ್ಷಗಳಿಗೊಮ್ಮೆ ಮಹಾಕುಂಭಮೇಳ ಮುಕ್ತಾಯಗೊಳ್ಳಲು ಇನ್ನೆರಡು ದಿನಗಳಷ್ಟೇ ಬಾಕಿಯಿದ್ದು, ಈ ಹಿನ್ನೆಲೆಯಲ್ಲಿ ಪುಣ್ಯಸ್ನಾನಕ್ಕೆ ತೆರಳುತ್ತಿದ್ದ ಬೆಳಗಾವಿ ಗೋಕಾಕ್ ನಗರದ ಏಳು ಮಂದಿ ಮರಣ ಹೊಂದಿದ್ದಾರೆ.
ಈ ದುರ್ಮರಣ ಮಧ್ಯಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಬೆಳಗಿನ ಜಾವ ಕ್ರೂಸರ್ ಹಾಗೂ ಬಸ್ಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಏಳು ಮಂದಿ ಕನ್ನಡಿಗರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಎರಡು ದಿನಗಳ ಹಿಂದೆ ಅಷ್ಟೇ ಗೋಕಾಕ್ ನಗರದಿಂದ 10 ಮಂದಿ ಕ್ರೂಸರ್ನಲ್ಲಿ ಮಹಾಕುಂಭಮೇಳಕ್ಕೆ ಹೊರಟಿದ್ದರು. ಆದರೆ ಇಂದು(ಫೆಬ್ರವರಿ.24) ಮುಂಜಾನೆ ಮಧ್ಯಪ್ರವೇಶದ ಸಮೀಪದಲ್ಲಿ ಕ್ರೂಸರ್ಗೆ ಸಾರಿಗೆ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮದಿಂದಾಗಿ ಈ ಅಪಘಾತ ಸಂಭವಿಸಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…