ರಾಜ್ಯ

ಜಾಮೀನು ಪ್ರಕ್ರಿಯೆ ಮುಗಿಸಲು ಸೆಷನ್ಸ್‌ ಕೋರ್ಟ್‌ಗೆ ಹಾಜರಾದ ಆರೋಪಿ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ ಹಿನ್ನೆಲೆಯಲ್ಲಿ ಆರೋಪಿ ದರ್ಶನ್‌ ಬಿಜಿಎಸ್‌ ಆಸ್ಪತ್ರೆಯಿಂದ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಲು ಸೆಷನ್ಸ್‌ ಕೋರ್ಟ್‌ಗೆ ಹಾಜರಾಗಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್‌.13 ರಂದು ಆರೋಪಿ ದರ್ಶನ್‌ಗೆ ಹೈಕೋರ್ಟ್‌ ಷರತ್ತು ಬದ್ಧ ರೆಗ್ಯುಲರ್‌ ಜಾಮೀನು ಮಂಜೂರು ಮಾಡಲಾಗಿದೆ ಎಂದು ಆದೇಶ ಹೊರಡಿತ್ತು. ಈ ಹಿನ್ನೆಲೆಯಲ್ಲಿ ಜಾಮೀನು ಪ್ರಕ್ರಿಯೆಯನ್ನು ಪೂರ್ಣಗೊಳಿಸಲು 57ನೇ ಸಿಸಿಎಚ್‌ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ.

ಈ ಕುರಿತು ಇಂದು(ಡಿಸೆಂಬರ್‌.16) 57ನೇ ಸಿಸಿಎಚ್‌ ನ್ಯಾಯಾಲಯದ ನ್ಯಾಯಾಧೀಶರಾದ ಜೈಶಂಕರ್‌ ಜಾಮೀನು ಬಾಂಡ್‌ ಕುರಿತು ವಿಚಾರಣೆ ನಡೆಸಿದ್ದಾರೆ. ಬಳಿಕ ಆರೋಪಿ ದರ್ಶನ್‌ 1 ಲಕ್ಷ ಜಾಮೀನು ಬಾಂಡ್‌ಗೆ ಸಹಿ ಹಾಕಿದ್ದಾರೆ. ಇದೇ ವೇಳೆ ಶ್ಯೂರಿಟಿಯಾಗಿ ಈ ಹಿಂದೆ ಮಧ್ಯಂತರ ಜಾಮೀನಿಗಾಗಿ ಸಹಿ ಹಾಕಿದ್ದ ದರ್ಶನ್‌ ಸಹೋದರ ದಿನಕರ್‌ ತೂಗುದೀಪ ಹಾಗೂ ಆಪ್ತ ಧನ್ವೀರ್‌ ಅವರೇ ಇಂದು ಸಹ ಶ್ಯೂರಿಟಿದಾರರಾಗಿ ಸಹಿ ಹಾಕಿದ್ದಾರೆ.

ಇನ್ನು ಈ ವೇಳೆ ನ್ಯಾಯಾಧೀಶರಿಗೆ ದರ್ಶನ್‌ ಪರ ವಕೀಲ ಸುನೀಲ್‌ ಕುಮಾರ್‌  ದರ್ಶನ್‌ಗೆ ಪಾಸ್‌ಪೋರ್ಟ್‌ ಹಿಂದಿರುಗಿಸಲು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ದರ್ಶನ್‌ಗೆ ಪಾಸ್‌ಪೋರ್ಟ್‌ ಹಿಂತಿರುಗಿಸುವಂತೆ ನ್ಯಾಯಾಧೀಶರು ಸೂಚನೆ ಹೊರಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

4 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

10 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

10 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

10 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

11 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

11 hours ago