ರಾಜ್ಯ

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ ಘನತೆಗೆ ಭಾರೀ ಧಕ್ಕೆ ಬಗ್ಗೆ ತಿಳಿದಿದ್ದರೂ ಸುಮ್ಮನಿದ್ದ ಸಭಾಧ್ಯಕ್ಷರು 24 ಗಂಟೆ ಒಳಗೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಮುಖಂಡ ಹಾಗೂ ವಕೀಲರಾದ ಜಿ. ದೇವರಾಜೇಗೌಡ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಇಂತಹ ಗಂಭೀರ ಘಟನೆ ನಡೆದರೂ ಸಭಾಧ್ಯಕ್ಷರು ನಗುತ್ತಾ ಕುಳಿತಿರುವುದು ಅತ್ಯಂತ ಖಂಡನೀಯ. ಸದನವು ಸಂವಿಧಾನದ ದೇವಾಲಯವಾಗಿದ್ದು, ಅಲ್ಲಿ ಬಳಸಿದ ಪದಗಳು ಎಲ್ಲರೂ ತಲೆತಗ್ಗಿಸುವಂತಾಗಿವೆ ಎಂದರು.

ಮಹಿಳೆಯರ ಕುರಿತು, ಅದರಲ್ಲೂ ಹೆಣ್ಣುಮಗಳ ಬಗ್ಗೆ ಲಘುವಾಗಿ ಹಾಗೂ ಅವಹೇಳನಕಾರಿಯಾಗಿ ಮಾತನಾಡಿರುವುದು ಕ್ಷಮಾರ್ಹವಲ್ಲ. ಆದರೆ ಈ ಎಲ್ಲವನ್ನು ನೋಡುತ್ತಾ ಸಭಾಧ್ಯಕ್ಷರು ಯಾವುದೇ ಕ್ರಮ ಕೈಗೊಳ್ಳದೇ ಮೌನ ವಹಿಸಿರುವುದು ನೈತಿಕ ದೌರ್ಬಲ್ಯದ ಪರಮಾವಽ ಎಂದು ಕಿಡಿಕಾರಿದರು.

ಆರ್‌ಎಸ್‌ಎಸ್ ಬಗ್ಗೆ ಶಾಸಕ ಶಿವಲಿಂಗೇಗೌಡ ಅವರು ‘ಛಿ, ಥೂ’ ಎಂಬ ಪದ ಬಳಸಿ ಮಾತನಾಡಿರುವುದು ಅತ್ಯಂತ ಅಸಹ್ಯಕರ. ವಿಶ್ವಾದ್ಯಂತ ಒಪ್ಪಿಗೆಯಾದ ಸಂಘಟನೆಯಾದ ಆರ್ ಎಸ್ ಎಸ್ ಕಾರಣದಿಂದಲೇ ಇಂದು ರಾಜ್ಯದಲ್ಲಿ ಹಿಂದುತ್ವ ಉಳಿದಿದೆ ಎಂದರು.

ಸರ್ಕಾರಿ ಪಾರ್ಕ್ ಜಾಗವನ್ನು ಅಕ್ರಮವಾಗಿ ಕಬಳಿಸಿಕೊಂಡ ಪ್ರಕರಣದಲ್ಲಿ, ರೋಹಿಣಿ ಸಿಂಧೂರಿ ಅವರು ಜಿಲ್ಲಾಧಿಕಾರಿಯಾಗಿದ್ದ ವೇಳೆ ‘ಭೂಮಿ ಕಳ್ಳ’ ಎಂದು ವರದಿ ಸಲ್ಲಿಸಲಾಗಿತ್ತು. ಆ ವೇಳೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕ್ಯಾಬಿನೆಟ್ ನಲ್ಲಿ ಬದಲಿ ನಿವೇಶನ ನೀಡಲು ತೀರ್ಮಾನ ಮಾಡಿದ್ದು ದೊಡ್ಡ ತಪ್ಪು ಎಂದು ಆರೋಪಿಸಿದರು.

ಹಾಸನ ಮತ್ತು ಅರಸೀಕೆರೆ ನಗರ ಪ್ರದೇಶದಲ್ಲಿ ಪಾರ್ಕ್ ಗಾಗಿ ಮೀಸಲಿದ್ದ ಸರ್ವೆ ನಂ.290/2ರ 10043 ಚದರ ಅಡಿ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಲಾಗಿದೆ. ಹೂಡಾ ಮೂಲಕ ಸೈಟ್ ಮಾರಾಟ ಮಾಡಿ ಅಧಿಕಾರಿಗಳಿಗೆ ಹಣ ಕೊಟ್ಟಿದ್ದಾರೆ. ಹಾಸನದಲ್ಲಿ ಉಳಿಯಲು ಅಧಿಕಾರಿಗಳಿಗೆ ಲಂಚ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಸಿ.ಟಿ.ರವಿ ಅವರು ಮಹಿಳೆಯರ ಬಗ್ಗೆ ಮಾತನಾಡಿದಾಗ ಕಾಂಗ್ರೆಸ್ ಯಾವ ಕ್ರಮ ಕೈಗೊಂಡಿತು ಎಂಬುದನ್ನು ನೆನಪಿಸಿದ ದೇವರಾಜೇಗೌಡ, ಇದೇ ಮಾನದಂಡವನ್ನು ಶಿವಲಿಂಗೇಗೌಡ ಮೇಲೂ ಅನ್ವಯಿಸಬೇಕು ಎಂದು ಆಗ್ರಹಿಸಿದರು.
ಇದೆ ವೇಳೆ ಬಿಜೆಪಿ ಮುಖಂಡ ಮನೋಹರ್, ವಕೀಲರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

2 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

2 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

2 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

2 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

2 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

3 hours ago