ರಾಜ್ಯ

ವಲಸೆ ಕುರಿಗಾರರ ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ತಡೆಯುವ ಕಾಯ್ದೆ ರೂಪಿಸಲಾಗುವುದು : ಸಿಎಂ ಭರವಸೆ

  • ಕುರಿಗಾಹಿಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕುರಿಗಾಹಿಗಳ ರಕ್ಷಣೆ ನಮ್ಮ ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲೆಮಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದ  ಬಳಿಕ ಮಾತನಾಡಿದ ಅವರು, ಅರಣ್ಯ ಪ್ರದೇಶದಲ್ಲಿ ಕುರಿಗಳನ್ನು ಮಾತ್ರ ಮೇಯಿಸಲು ಅವಕಾಶ ನೀಡುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕುರಿಗಳು ಸತ್ತರೆ ಒಂದು ಕುರಿಗೆ 5 ಸಾವಿರ ರೂಪಾಯಿ ಪರಿಹಾರ ನೀಡುವ ಅನುಗ್ರಹ ಯೋಜನೆ ಜಾರಿಯಲ್ಲಿದೆ. ಈ ಮೊತ್ತವನ್ನು ಇನ್ನಷ್ಟು ಹೆಚ್ಚಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದರು. ರಾಜ್ಯದಲ್ಲಿನ ವಲಸೆ ಕುರಿಗಾರರ ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ತಡೆಯುವ ಕಾಯ್ದೆ ರೂಪಿಸುವುದು, ಕುರಿಗಳಿಗೆ ಉಚಿತ ಲಸಿಕೆ ನೀಡಲೂ ಅಗತ್ಯ ಸೂಚನೆ ನೀಡಲಾಗುವುದು ಎಂದರು.

ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ ನೀಡಲು ವ್ಯವಸ್ಥೆ ಮಾಡಲಾಗುವುದು. ಈ ಗುರುತಿನ ಚೀಟಿ ಆಧಾರದ ಮೇಲೆ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವಂತೆ ಕೇರಂ ಕೈಗೊಳ್ಳಲಾಗುವುದು ಎಂದರು.

ಬಂದೂಕು ಪರವಾನಗಿ ನೀಡಲು ವ್ಯವಸ್ಥೆ, ಕುರಿಗಾಹಿಗಳ ಮಕ್ಕಳಿಗೆ ಸರ್ಕಾರಿ ವಸತಿ ಶಾಲೆಗಳಲ್ಲಿ ಆದ್ಯತೆ ಮೇರೆಗೆ ಪ್ರವೇಶ ನೀಡುವ ಬಗ್ಗೆ ಬಜೆಟ್ ನಲ್ಲಿ ಘೋಷಣೆ ಮಾಡಿದ್ದು ಇವುಗಳಿಗೆ ಸರ್ಕಾರಿ ಆದೇಶ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಪಶುಸಂಗೋಪನಾ ಇಲಾಖೆಯಲ್ಲಿ 1300 ವೈದ್ಯರ ಹುದ್ದೆ ಖಾಲಿ ಇದ್ದು, ಪ್ರಸ್ತುತ 400 ವೈದ್ಯರನ್ನು ನೇಮಕ ಮಾಡಲಾಗುತ್ತಿದೆ. ಮುಂದಿನ ವರ್ಷ ಬಾಕಿ ವೈದ್ಯರ ನೇಮಕಾತಿ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕುರಿಗಾರರು ಕ್ಯಾಂಪ್ ಮಾಡಿರುವ ಕಡೆಗಳಲ್ಲೇ ವೈದ್ಯರು ಬಂದು ಚಿಕಿತ್ಸೆ ನೀಡಬೇಕು ಎಂದು ಸೂಚಿಸಲಾಗುವುದು. ಕುರಿಗಾರರ ಕುರಿ ಕಳ್ಳತನವಾದರೆ ಕೂಡಲೇ ಪ್ರಕರಣ ದಾಖಲು ಮಾಡಬೇಕು, ಬಂಧಿಸಿ ತನಿಖೆ ಮಾಡಲು ಹಾಗು ರಕ್ಷಣೆ ನೀಡುವ ವ್ಯವಸ್ಥೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

ಹಿಂದಿನ ಸರ್ಕಾರ ಸತ್ತ ಕುರಿಗಳಿಗೆ ನೀಡುವ ಅನುಗ್ರಹ ಯೋಜನೆಯನ್ನು ನಿಲ್ಲಿಸಿದ್ದು, ಈ ಕುರಿತು ಪರಿಹಾರ ನೀಡುವ ಬಗ್ಗೆ ಎಲ್ಲಾ ಜಿಲ್ಲೆಗಳಿಂದ ವರದಿ ತರಿಸಲಾಗುವುದು ಎಂದರು.

ಗೋಮಾಳಗಳನ್ನು ಯಾರಿಗೂ ಪರಭಾರೆ ಮಾಡಬಾರದೆಂದು ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಆದೇಶ ಹೊರಡಿಸಲಾಗಿತ್ತು. ಗೋಮಾಳಗಳ ರಕ್ಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಈ ಭರವಸೆ ನೀಡಿದರು.

ಪಶುಸಂಗೋಪನಾ ಸಚಿವ ವೆಂಕಟೇಶ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವೇಂದ್ರಪ್ಪ ವರ್ತೂರು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಪಶು ಸಂಗೋಪನಾ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್ ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

2 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

2 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

2 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

2 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

2 hours ago