ರಾಜ್ಯ

ತಮಿಳುನಾಡಿನಂತೆ ರಾಜ್ಯದಲ್ಲೂ RSS ವಿರುದ್ಧ ಕ್ರಮ : ಸಿಎಂ

ಬಾಗಲಕೋಟೆ : ಸರ್ಕಾರಿ ಸ್ಥಳದಲ್ಲಿ ಆರ್.ಎಸ್.ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಸೋಮವಾರ ಮಾತನಾಡಿದ ಅವರು, ಆರ್ ಎಸ್ ಎಸ್ ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ. ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಪತ್ರ ಬರೆದಿದ್ದಾರೆ ಎಂದರು.

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಸುಧಾರಿಸಿದೆ, ಇನ್ನೆರಡು ದಿನದಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳಿಲಿದ್ದಾರೆ ಎಂದರು.

ಇದನ್ನು ಓದಿ : ಆರ್‌ಎಸ್‌ಎಸ್‌ ಬ್ಯಾನ್‌ ಅಂತಾ ನಾನು ಹೇಳಿಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ

ಸಂಪುಟ ಪುನರ್ರಚನೆಗೂ ಇಂದಿನ ಭೋಜನಕೂಟಕ್ಕೂ ಸಂಬಂಧವಿಲ್ಲ
ರಾಜ್ಯದಲ್ಲಿ ಬದಲಾವಣೆಯಲ್ಲಿ ಹೈಕಮಾಂಡ್ ನವರ ನಿರ್ಧಾರವೇ ಮುಖ್ಯ ಎಂದು ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪಕ್ಷದ ವರಿಷ್ಠರ ಮತ್ತು ಶಾಸಕರ ಅಭಿಪ್ರಾಯ ಬಹಳ ಮುಖ್ಯ. ಶಾಸಕರ ಒಮ್ಮತ ಹಾಗೂ ಹೈಕಮಾಂಡ್ ನ ಆರ್ಶೀವಾದವಿರಬೇಕು. ಇಂದಿನ ಭೋಜನಕೂಟ ಕಾರ್ಯಕ್ರಮದಲ್ಲಿ ಯಾವುದೇ ವಿಶೇಷತೆ ಇಲ್ಲ. ಸಂಪುಟ ಪುನರ್ರಚನೆಗೂ ಇಂದಿನ ಭೋಜನಕೂಟಕ್ಕೂ ಯಾವುದೇ ಸಂಬಂಧವಿಲ್ಲ. ನವೆಂಬರ್ ತಿಂಗಳಲ್ಲಿ ಯಾವುದೇ ಕ್ರಾಂತಿಯೂ ಇಲ್ಲ ಎಂದರು.

ನನಗೆ ಮಾಟಮಂತ್ರಗಳಲ್ಲಿ ನಂಬಿಕೆಯಿಲ್ಲ
ಶಾಸಕ ಮುನಿರತ್ನ ಮತ್ತು ಡಿಕೆ ಶಿವಕುಮಾರ್ ಅವರ ನಡೆದ ಮಾತುಕತೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಡಿಸಿಎಂ ಡಿ ಕೆ ಶಿವಕುಮಾರ್ ರವರು ನಿನ್ನೆ ಬೆಂಗಳೂರು ನಡಿಗೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಲಾಲ್ಬಾಗ್ ನಂತೆ ಮತ್ತಿಕರೆಯ ಜೆ ಪಿಪಾರ್ಕ್ ದಲ್ಲಿಯೂ ಕಾರ್ಯಕ್ರಮವಿತ್ತು. ಶಾಸಕ ಮುನಿರತ್ನರವರು ವೇದಿಕೆಗೆ ಆಗಮಿಸಿ, ತಮ್ಮ ಅಭಿಪ್ರಾಯವನ್ನು ನೀಡಬಹುದಾಗಿತ್ತು. ಆದರೆ ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಲಿಲ್ಲ. ಕಾರ್ಯಕ್ರಮಕ್ಕೆ ಆಹ್ವಾನವಿತ್ತೇ ಇಲ್ಲವೇ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ . ನಾನು ಯಾವುದೇ ಮಾಟಮಂತ್ರಗಳಲ್ಲಿ ನಂಬಿಕೆಯಿರಿಸಿಲ್ಲ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಸೂಕ್ತ ಅನುದಾನ ನೀಡಿ, ಮುಂದಿನ ನಾಲ್ಕು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದರು.

ಸಂಪುಟ ಪುನರ್ರಚನೆ
ವಾಲ್ಮೀಕಿ ಸಮಾಜದವರಿಗೆ ಸಚಿವ ಸ್ಥಾನ ನೀಡಲಾಗುವುದೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಶಾಸಕರು ರಾಜಿನಾಮೆ ನೀಡಿದ್ದು, ಸರ್ಕಾರ ಅವರನ್ನು ತೆಗೆದುಹಾಕಿಲ್ಲ. ಮುಂದಿನ ದಿನಗಳಲ್ಲಿ ನಡೆಯುವ ಸಂಪುಟ ಪುನರ್ರಚನೆಯ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದವರಿಗೆ ಪ್ರಾತಿನಿಧ್ಯ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

4 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

4 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

4 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

4 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

4 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

5 hours ago