ರಾಜ್ಯ

ತಮಿಳುನಾಡಿನಂತೆ ರಾಜ್ಯದಲ್ಲೂ RSS ವಿರುದ್ಧ ಕ್ರಮ : ಸಿಎಂ

ಬಾಗಲಕೋಟೆ : ಸರ್ಕಾರಿ ಸ್ಥಳದಲ್ಲಿ ಆರ್.ಎಸ್.ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಸೋಮವಾರ ಮಾತನಾಡಿದ ಅವರು, ಆರ್ ಎಸ್ ಎಸ್ ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ. ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಪತ್ರ ಬರೆದಿದ್ದಾರೆ ಎಂದರು.

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಸುಧಾರಿಸಿದೆ, ಇನ್ನೆರಡು ದಿನದಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳಿಲಿದ್ದಾರೆ ಎಂದರು.

ಇದನ್ನು ಓದಿ : ಆರ್‌ಎಸ್‌ಎಸ್‌ ಬ್ಯಾನ್‌ ಅಂತಾ ನಾನು ಹೇಳಿಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ

ಸಂಪುಟ ಪುನರ್ರಚನೆಗೂ ಇಂದಿನ ಭೋಜನಕೂಟಕ್ಕೂ ಸಂಬಂಧವಿಲ್ಲ
ರಾಜ್ಯದಲ್ಲಿ ಬದಲಾವಣೆಯಲ್ಲಿ ಹೈಕಮಾಂಡ್ ನವರ ನಿರ್ಧಾರವೇ ಮುಖ್ಯ ಎಂದು ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪಕ್ಷದ ವರಿಷ್ಠರ ಮತ್ತು ಶಾಸಕರ ಅಭಿಪ್ರಾಯ ಬಹಳ ಮುಖ್ಯ. ಶಾಸಕರ ಒಮ್ಮತ ಹಾಗೂ ಹೈಕಮಾಂಡ್ ನ ಆರ್ಶೀವಾದವಿರಬೇಕು. ಇಂದಿನ ಭೋಜನಕೂಟ ಕಾರ್ಯಕ್ರಮದಲ್ಲಿ ಯಾವುದೇ ವಿಶೇಷತೆ ಇಲ್ಲ. ಸಂಪುಟ ಪುನರ್ರಚನೆಗೂ ಇಂದಿನ ಭೋಜನಕೂಟಕ್ಕೂ ಯಾವುದೇ ಸಂಬಂಧವಿಲ್ಲ. ನವೆಂಬರ್ ತಿಂಗಳಲ್ಲಿ ಯಾವುದೇ ಕ್ರಾಂತಿಯೂ ಇಲ್ಲ ಎಂದರು.

ನನಗೆ ಮಾಟಮಂತ್ರಗಳಲ್ಲಿ ನಂಬಿಕೆಯಿಲ್ಲ
ಶಾಸಕ ಮುನಿರತ್ನ ಮತ್ತು ಡಿಕೆ ಶಿವಕುಮಾರ್ ಅವರ ನಡೆದ ಮಾತುಕತೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಡಿಸಿಎಂ ಡಿ ಕೆ ಶಿವಕುಮಾರ್ ರವರು ನಿನ್ನೆ ಬೆಂಗಳೂರು ನಡಿಗೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಲಾಲ್ಬಾಗ್ ನಂತೆ ಮತ್ತಿಕರೆಯ ಜೆ ಪಿಪಾರ್ಕ್ ದಲ್ಲಿಯೂ ಕಾರ್ಯಕ್ರಮವಿತ್ತು. ಶಾಸಕ ಮುನಿರತ್ನರವರು ವೇದಿಕೆಗೆ ಆಗಮಿಸಿ, ತಮ್ಮ ಅಭಿಪ್ರಾಯವನ್ನು ನೀಡಬಹುದಾಗಿತ್ತು. ಆದರೆ ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಲಿಲ್ಲ. ಕಾರ್ಯಕ್ರಮಕ್ಕೆ ಆಹ್ವಾನವಿತ್ತೇ ಇಲ್ಲವೇ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ . ನಾನು ಯಾವುದೇ ಮಾಟಮಂತ್ರಗಳಲ್ಲಿ ನಂಬಿಕೆಯಿರಿಸಿಲ್ಲ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಸೂಕ್ತ ಅನುದಾನ ನೀಡಿ, ಮುಂದಿನ ನಾಲ್ಕು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದರು.

ಸಂಪುಟ ಪುನರ್ರಚನೆ
ವಾಲ್ಮೀಕಿ ಸಮಾಜದವರಿಗೆ ಸಚಿವ ಸ್ಥಾನ ನೀಡಲಾಗುವುದೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಶಾಸಕರು ರಾಜಿನಾಮೆ ನೀಡಿದ್ದು, ಸರ್ಕಾರ ಅವರನ್ನು ತೆಗೆದುಹಾಕಿಲ್ಲ. ಮುಂದಿನ ದಿನಗಳಲ್ಲಿ ನಡೆಯುವ ಸಂಪುಟ ಪುನರ್ರಚನೆಯ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದವರಿಗೆ ಪ್ರಾತಿನಿಧ್ಯ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

27 mins ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

30 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್‌ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಿದ ಅಧಿಕಾರ ಹಂಚಿಕೆ

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…

34 mins ago

‘ಕೈಗೂಡಿದ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಕನಸು’

ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…

40 mins ago

ನಗರಸಭೆಗೆ ಗೆಜ್ಜಲಗೆರೆ-ಗೊರವನಹಳ್ಳಿ ಸೇರ್ಪಡೆಗೆ ವಿರೋಧ

ಹೇಮಂತ್‌ ಕುಮಾರ್‌  ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…

44 mins ago

ಮಧ್ಯಾಹ್ನದ ಬಿಸಿಯೂಟಕ್ಕೂ ತಟ್ಟಲಿದೆ ಗ್ಯಾಸ್ ಬಿಸಿ?

ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…

50 mins ago