ರಾಜ್ಯ

ತಮಿಳುನಾಡಿನಂತೆ ರಾಜ್ಯದಲ್ಲೂ RSS ವಿರುದ್ಧ ಕ್ರಮ : ಸಿಎಂ

ಬಾಗಲಕೋಟೆ : ಸರ್ಕಾರಿ ಸ್ಥಳದಲ್ಲಿ ಆರ್.ಎಸ್.ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಸೋಮವಾರ ಮಾತನಾಡಿದ ಅವರು, ಆರ್ ಎಸ್ ಎಸ್ ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ. ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಪತ್ರ ಬರೆದಿದ್ದಾರೆ ಎಂದರು.

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಸುಧಾರಿಸಿದೆ, ಇನ್ನೆರಡು ದಿನದಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳಿಲಿದ್ದಾರೆ ಎಂದರು.

ಇದನ್ನು ಓದಿ : ಆರ್‌ಎಸ್‌ಎಸ್‌ ಬ್ಯಾನ್‌ ಅಂತಾ ನಾನು ಹೇಳಿಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ

ಸಂಪುಟ ಪುನರ್ರಚನೆಗೂ ಇಂದಿನ ಭೋಜನಕೂಟಕ್ಕೂ ಸಂಬಂಧವಿಲ್ಲ
ರಾಜ್ಯದಲ್ಲಿ ಬದಲಾವಣೆಯಲ್ಲಿ ಹೈಕಮಾಂಡ್ ನವರ ನಿರ್ಧಾರವೇ ಮುಖ್ಯ ಎಂದು ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪಕ್ಷದ ವರಿಷ್ಠರ ಮತ್ತು ಶಾಸಕರ ಅಭಿಪ್ರಾಯ ಬಹಳ ಮುಖ್ಯ. ಶಾಸಕರ ಒಮ್ಮತ ಹಾಗೂ ಹೈಕಮಾಂಡ್ ನ ಆರ್ಶೀವಾದವಿರಬೇಕು. ಇಂದಿನ ಭೋಜನಕೂಟ ಕಾರ್ಯಕ್ರಮದಲ್ಲಿ ಯಾವುದೇ ವಿಶೇಷತೆ ಇಲ್ಲ. ಸಂಪುಟ ಪುನರ್ರಚನೆಗೂ ಇಂದಿನ ಭೋಜನಕೂಟಕ್ಕೂ ಯಾವುದೇ ಸಂಬಂಧವಿಲ್ಲ. ನವೆಂಬರ್ ತಿಂಗಳಲ್ಲಿ ಯಾವುದೇ ಕ್ರಾಂತಿಯೂ ಇಲ್ಲ ಎಂದರು.

ನನಗೆ ಮಾಟಮಂತ್ರಗಳಲ್ಲಿ ನಂಬಿಕೆಯಿಲ್ಲ
ಶಾಸಕ ಮುನಿರತ್ನ ಮತ್ತು ಡಿಕೆ ಶಿವಕುಮಾರ್ ಅವರ ನಡೆದ ಮಾತುಕತೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಡಿಸಿಎಂ ಡಿ ಕೆ ಶಿವಕುಮಾರ್ ರವರು ನಿನ್ನೆ ಬೆಂಗಳೂರು ನಡಿಗೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಲಾಲ್ಬಾಗ್ ನಂತೆ ಮತ್ತಿಕರೆಯ ಜೆ ಪಿಪಾರ್ಕ್ ದಲ್ಲಿಯೂ ಕಾರ್ಯಕ್ರಮವಿತ್ತು. ಶಾಸಕ ಮುನಿರತ್ನರವರು ವೇದಿಕೆಗೆ ಆಗಮಿಸಿ, ತಮ್ಮ ಅಭಿಪ್ರಾಯವನ್ನು ನೀಡಬಹುದಾಗಿತ್ತು. ಆದರೆ ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಲಿಲ್ಲ. ಕಾರ್ಯಕ್ರಮಕ್ಕೆ ಆಹ್ವಾನವಿತ್ತೇ ಇಲ್ಲವೇ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ . ನಾನು ಯಾವುದೇ ಮಾಟಮಂತ್ರಗಳಲ್ಲಿ ನಂಬಿಕೆಯಿರಿಸಿಲ್ಲ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಸೂಕ್ತ ಅನುದಾನ ನೀಡಿ, ಮುಂದಿನ ನಾಲ್ಕು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದರು.

ಸಂಪುಟ ಪುನರ್ರಚನೆ
ವಾಲ್ಮೀಕಿ ಸಮಾಜದವರಿಗೆ ಸಚಿವ ಸ್ಥಾನ ನೀಡಲಾಗುವುದೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಶಾಸಕರು ರಾಜಿನಾಮೆ ನೀಡಿದ್ದು, ಸರ್ಕಾರ ಅವರನ್ನು ತೆಗೆದುಹಾಕಿಲ್ಲ. ಮುಂದಿನ ದಿನಗಳಲ್ಲಿ ನಡೆಯುವ ಸಂಪುಟ ಪುನರ್ರಚನೆಯ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದವರಿಗೆ ಪ್ರಾತಿನಿಧ್ಯ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

16 mins ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

4 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

4 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

4 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

7 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

7 hours ago