ರಾಜ್ಯ

ತಮಿಳುನಾಡಿನಂತೆ ರಾಜ್ಯದಲ್ಲೂ RSS ವಿರುದ್ಧ ಕ್ರಮ : ಸಿಎಂ

ಬಾಗಲಕೋಟೆ : ಸರ್ಕಾರಿ ಸ್ಥಳದಲ್ಲಿ ಆರ್.ಎಸ್.ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಸೋಮವಾರ ಮಾತನಾಡಿದ ಅವರು, ಆರ್ ಎಸ್ ಎಸ್ ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ. ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಪತ್ರ ಬರೆದಿದ್ದಾರೆ ಎಂದರು.

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಸುಧಾರಿಸಿದೆ, ಇನ್ನೆರಡು ದಿನದಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳಿಲಿದ್ದಾರೆ ಎಂದರು.

ಇದನ್ನು ಓದಿ : ಆರ್‌ಎಸ್‌ಎಸ್‌ ಬ್ಯಾನ್‌ ಅಂತಾ ನಾನು ಹೇಳಿಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ

ಸಂಪುಟ ಪುನರ್ರಚನೆಗೂ ಇಂದಿನ ಭೋಜನಕೂಟಕ್ಕೂ ಸಂಬಂಧವಿಲ್ಲ
ರಾಜ್ಯದಲ್ಲಿ ಬದಲಾವಣೆಯಲ್ಲಿ ಹೈಕಮಾಂಡ್ ನವರ ನಿರ್ಧಾರವೇ ಮುಖ್ಯ ಎಂದು ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪಕ್ಷದ ವರಿಷ್ಠರ ಮತ್ತು ಶಾಸಕರ ಅಭಿಪ್ರಾಯ ಬಹಳ ಮುಖ್ಯ. ಶಾಸಕರ ಒಮ್ಮತ ಹಾಗೂ ಹೈಕಮಾಂಡ್ ನ ಆರ್ಶೀವಾದವಿರಬೇಕು. ಇಂದಿನ ಭೋಜನಕೂಟ ಕಾರ್ಯಕ್ರಮದಲ್ಲಿ ಯಾವುದೇ ವಿಶೇಷತೆ ಇಲ್ಲ. ಸಂಪುಟ ಪುನರ್ರಚನೆಗೂ ಇಂದಿನ ಭೋಜನಕೂಟಕ್ಕೂ ಯಾವುದೇ ಸಂಬಂಧವಿಲ್ಲ. ನವೆಂಬರ್ ತಿಂಗಳಲ್ಲಿ ಯಾವುದೇ ಕ್ರಾಂತಿಯೂ ಇಲ್ಲ ಎಂದರು.

ನನಗೆ ಮಾಟಮಂತ್ರಗಳಲ್ಲಿ ನಂಬಿಕೆಯಿಲ್ಲ
ಶಾಸಕ ಮುನಿರತ್ನ ಮತ್ತು ಡಿಕೆ ಶಿವಕುಮಾರ್ ಅವರ ನಡೆದ ಮಾತುಕತೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಡಿಸಿಎಂ ಡಿ ಕೆ ಶಿವಕುಮಾರ್ ರವರು ನಿನ್ನೆ ಬೆಂಗಳೂರು ನಡಿಗೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಲಾಲ್ಬಾಗ್ ನಂತೆ ಮತ್ತಿಕರೆಯ ಜೆ ಪಿಪಾರ್ಕ್ ದಲ್ಲಿಯೂ ಕಾರ್ಯಕ್ರಮವಿತ್ತು. ಶಾಸಕ ಮುನಿರತ್ನರವರು ವೇದಿಕೆಗೆ ಆಗಮಿಸಿ, ತಮ್ಮ ಅಭಿಪ್ರಾಯವನ್ನು ನೀಡಬಹುದಾಗಿತ್ತು. ಆದರೆ ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಲಿಲ್ಲ. ಕಾರ್ಯಕ್ರಮಕ್ಕೆ ಆಹ್ವಾನವಿತ್ತೇ ಇಲ್ಲವೇ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ . ನಾನು ಯಾವುದೇ ಮಾಟಮಂತ್ರಗಳಲ್ಲಿ ನಂಬಿಕೆಯಿರಿಸಿಲ್ಲ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಸೂಕ್ತ ಅನುದಾನ ನೀಡಿ, ಮುಂದಿನ ನಾಲ್ಕು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದರು.

ಸಂಪುಟ ಪುನರ್ರಚನೆ
ವಾಲ್ಮೀಕಿ ಸಮಾಜದವರಿಗೆ ಸಚಿವ ಸ್ಥಾನ ನೀಡಲಾಗುವುದೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಶಾಸಕರು ರಾಜಿನಾಮೆ ನೀಡಿದ್ದು, ಸರ್ಕಾರ ಅವರನ್ನು ತೆಗೆದುಹಾಕಿಲ್ಲ. ಮುಂದಿನ ದಿನಗಳಲ್ಲಿ ನಡೆಯುವ ಸಂಪುಟ ಪುನರ್ರಚನೆಯ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದವರಿಗೆ ಪ್ರಾತಿನಿಧ್ಯ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

2 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

2 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

2 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

2 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

2 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

3 hours ago