ರಾಜ್ಯ

ಭ್ರೂಣ ಹತ್ಯೆಯಲ್ಲಿ ಭಾಗಿಯಾಗಿರುವವರ ಮೇಲೆ ಕ್ರಮ: ಸಿದ್ದರಾಮಯ್ಯ

ಬೆಂಗಳೂರು : ಭ್ರೂಣ ಹತ್ಯೆ ಪ್ರಕರಣದಲ್ಲಿರುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.

ಸಂವಿಧಾನ ಸಮರ್ಪಣಾ ದಿನಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧ ಮುಂಭಾಗದಲ್ಲಿರುವ ಅಂಬೇಡ್ಕರ್‌ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ತಪ್ಪು ಯಾರೇ ಮಾಡಿದ್ದರು ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮತ್ತು ಈ ಬಗ್ಗೆ ಸಭೆ ನಡೆಸಿ ಸೂಕ್ರ ನಿರ್ಣಯ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸಿಎಂ ಸ್ಥಾನದಿಂದ ಇಳಿಸಲು ಹೊರಟಿದೆ ಎಂಬ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಅವರ ಹೇಳಿಕೆಗೆ ಪಾಪ ವಿಪಕ್ಷ ನಾಯಕರು ಏನೇನೋ ಮಾತನಾಡುತ್ತಾರೆ, ಮಾತನಾಡಲಿ ಬಿಡಿ ಎಂದು ಪ್ರತಿಕ್ರಿಯಿಸಿದರು.

ಇನ್ನೂ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಈ ಬಗ್ಗೆ ಆಮೇಲೆ ಮಾತನಾಡುತ್ತೇನೆಂದು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಇದೇ ವೇಳೆ ತೆಲಂಗಾಣ ಚುನವಾಣೆ ಸಂಬಂಧ ನಾವು ಶೇ ೧೦೦ ರಷ್ಟು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು, ದೇಶದ ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೇ ಸಂವಿಧಾನದ ಆಶಯ. ಇಂದು ಡಾ.ಬಾಬು ರಾಜೇಂದ್ರ ಪ್ರಸಾದ್, ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಮಿತಿಯ ಎಲ್ಲ ಸದಸ್ಯರನ್ನು ನೆನಪಿಸಿಕೊಳ್ಳಬೇಕು. ಇಂದು ಸಂವಿಧಾನ ಅಂಗೀಕಾರವಾದ ದಿನ. 1949ರ ನವೆಂಬರ್ 26ರಂದು ಭಾರತದ ಸಂವಿಧಾನವನ್ನು ಅರ್ಪಿಸಲಾಯಿತು. ನಂತರ ಸಂವಿಧಾನ ಅಂಗೀಕಾರವಾಯಿತು. ಆದ್ದರಿಂದ ಈ ದಿನವನ್ನು ಸಂವಿಧಾನ ದಿನವೆಂದು ಇಡೀ ದೇಶದಲ್ಲಿ ಆಚರಿಸಲಾಗುತ್ತದೆ ಎಂದು ಹೇಳಿದರು.

ಅಂಬೇಡ್ಕರ್ ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು. ಭಾರತದ ಸಂವಿಧಾನ ಶ್ರೇಷ್ಠವಾದುದು. ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ, ಸರಿಯಾದ ಕೈಗಳಲ್ಲಿ ಸಂವಿಧಾನವಿರದಿದ್ದರೆ ಸಾರ್ಥಕವಾಗುವುದಿಲ್ಲ ಎಂದು ಅಂಬೇಡ್ಕರ್ ಎಚ್ಚರಿಕೆಯ ಮಾತುಗಳನ್ನು ಹೇಳಿದ್ದರು. ಸಂವಿಧಾನದ ಪರವಾಗಿರುವ ಕೈಗಳಲ್ಲಿದ್ದಾಗ ಮಾತ್ರ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಸಾಧಿಸಿದಂತಾಗುತ್ತದೆ ಎಂದು ತಿಳಿಸಿದರು.

ರಾಷ್ಟ್ರಕವಿ ಕುವೆಂಪು ಹೇಳಿದಂತೆ ‘ಸರ್ವ ಜನಾಂಗದ ಶಾಂತಿಯ ತೋಟ’ ಎನ್ನುವಂತಹ ಸಮಾಜ ನಿರ್ಮಾಣವಾಗಬೇಕೆಂದು. ನಮ್ಮ ಸರ್ಕಾರ ಸಂವಿಧಾನದ ಆಶಯಗಳಂತೆ ನಡೆಯಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿದೆ. ಸಂವಿಧಾನದ ಪೀಠಿಕೆಯಲ್ಲಿ ಇದರ ಸಾರವಿದೆ. ಶಾಲೆಗಳಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಸರ್ಕಾರದ ಈ ಕ್ರಮದಿಂದ ಇಂದಿನ ಮಕ್ಕಳು ಮುಂದಿನ ಪ್ರಜೆಗಳಾಗಿ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ನಡೆಯಲು ಸಾಧ್ಯವಾಗುತ್ತದೆ ಎಂದರು.

andolanait

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

6 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

6 hours ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

6 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

6 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

7 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

7 hours ago