ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ ಆಗುತ್ತದೆ ಎಂದು ಸಚಿವ ಭೈರತಿ ಸುರೇಶ್ ಹೇಳಿದರು.
ಈ ಕುರಿತು ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಬಿಜೆಪಿ ಸದಸ್ಯೆ ಭಾರತ ಶೆಟ್ಟಿ ಅವರು, ಪೌರಾಡಳಿತ ಇಲಾಖೆಯಲ್ಲಿ ಬ್ಯಾನರ್ ಹಾಕಲು ನಿಯಮ ಇದೆ. ಅನುಮತಿ ಪಡೆದು ಹಾಕಬಹುದು ಅಂತಿದೆ. ಶಿಡ್ಲಘಟ್ಟದಲ್ಲಿ ರಾಜೀವ್ ಗೌಡ ಅನ್ನೋರು ಮಹಿಳಾ ಅಧಿಕಾರಿಯನ್ನು ನಿಂದಿಸಿದ್ದಾರೆ. ಫೋನ್ನಲ್ಲಿ ಕೆಟ್ಟದಾಗಿ ಮಾತಾಡಿದ್ದಾರೆ. ಆ ಅಧಿಕಾರಿ ಕಣ್ಣೀರು ಹಾಕಿದ್ದಾರೆ. ಪೌರಾಡಳಿತ ಇಲಾಖೆಯಿಂದ ರಾಜೀವ್ ಗೌಡ ಮೇಲೆ ಕೇಸ್ ಹಾಕಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಉತ್ತರಿಸಿದ ಸಚಿವ ಭೈರತಿ ಸುರೇಶ್ ಅವರು, ಈ ಘಟನೆ ಆದ ಕೂಡಲೇ ಎಸ್ಪಿಗೆ ಸೂಚನೆ ನೀಡಲಾಗಿದೆ. ಆಕೆಯೇ ದೂರು ಕೊಟ್ಟಿದ್ದಾರೆ. ಅದರ ಆಧಾರದಲ್ಲಿ ಕ್ರಮ ಆಗಿದೆ. ರಾಜೀವ್ ಗೌಡನನ್ನು ಬಂಧನ ಮಾಡಲಾಗಿದೆ. ಆತನನ್ನು ಹೊರರಾಜ್ಯದಲ್ಲಿ ಅರೆಸ್ಟ್ ಮಾಡಲಾಗಿದೆ. ಕಾನೂನು ಅಡಿಯಲ್ಲಿ ಎಲ್ಲಾ ಸೆಕ್ಷನ್ ಹಾಕಲಾಗಿದೆ. ಪಕ್ಷಾತೀತವಾಗಿ ಶಿಕ್ಷೆ ಕೊಡುತ್ತೇವೆ. ಯಾರನ್ನೂ ರಕ್ಷಣೆ ಮಾಡಲ್ಲ. ಕಾನೂನು ಕ್ರಮ ಆಗುತ್ತದೆ ಎಂದು ಹೇಳಿದರು.
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…