ರಾಜ್ಯ

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ ಆಗುತ್ತದೆ ಎಂದು ಸಚಿವ ಭೈರತಿ ಸುರೇಶ್‌ ಹೇಳಿದರು.

ಈ ಕುರಿತು ವಿಧಾನಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಬಿಜೆಪಿ ಸದಸ್ಯೆ ಭಾರತ ಶೆಟ್ಟಿ ಅವರು, ಪೌರಾಡಳಿತ ಇಲಾಖೆಯಲ್ಲಿ ಬ್ಯಾನರ್‌ ಹಾಕಲು ನಿಯಮ ಇದೆ. ಅನುಮತಿ ಪಡೆದು ಹಾಕಬಹುದು ಅಂತಿದೆ. ಶಿಡ್ಲಘಟ್ಟದಲ್ಲಿ ರಾಜೀವ್‌ ಗೌಡ ಅನ್ನೋರು ಮಹಿಳಾ ಅಧಿಕಾರಿಯನ್ನು ನಿಂದಿಸಿದ್ದಾರೆ. ಫೋನ್‌ನಲ್ಲಿ ಕೆಟ್ಟದಾಗಿ ಮಾತಾಡಿದ್ದಾರೆ. ಆ ಅಧಿಕಾರಿ ಕಣ್ಣೀರು ಹಾಕಿದ್ದಾರೆ. ಪೌರಾಡಳಿತ ಇಲಾಖೆಯಿಂದ ರಾಜೀವ್‌ ಗೌಡ ಮೇಲೆ ಕೇಸ್‌ ಹಾಕಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಭೈರತಿ ಸುರೇಶ್‌ ಅವರು, ಈ ಘಟನೆ ಆದ ಕೂಡಲೇ ಎಸ್ಪಿಗೆ ಸೂಚನೆ ನೀಡಲಾಗಿದೆ. ಆಕೆಯೇ ದೂರು ಕೊಟ್ಟಿದ್ದಾರೆ. ಅದರ ಆಧಾರದಲ್ಲಿ ಕ್ರಮ ಆಗಿದೆ. ರಾಜೀವ್‌ ಗೌಡನನ್ನು ಬಂಧನ ಮಾಡಲಾಗಿದೆ. ಆತನನ್ನು ಹೊರರಾಜ್ಯದಲ್ಲಿ ಅರೆಸ್ಟ್‌ ಮಾಡಲಾಗಿದೆ. ಕಾನೂನು ಅಡಿಯಲ್ಲಿ ಎಲ್ಲಾ ಸೆಕ್ಷನ್‌ ಹಾಕಲಾಗಿದೆ. ಪಕ್ಷಾತೀತವಾಗಿ ಶಿಕ್ಷೆ ಕೊಡುತ್ತೇವೆ. ಯಾರನ್ನೂ ರಕ್ಷಣೆ ಮಾಡಲ್ಲ. ಕಾನೂನು ಕ್ರಮ ಆಗುತ್ತದೆ ಎಂದು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

3 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

7 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

9 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

10 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

15 hours ago