ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಯಾರೊಬ್ಬರೂ ದುರ್ವರ್ತನೆ ತೋರುವಂತಿಲ್ಲ.ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಮಾಧ್ಯಮಗಳಿಗೆ ಅವರು ಭಾನುವಾರ ಪ್ರತಿಕ್ರಿಯೆ ನೀಡಿದ ಅವರು ಇದನ್ನು ಮನವಿ ಎಂದಾದೂ ಅಥವಾ ಎಚ್ಚರಿಕೆ ಎಂದಾದರೂ ಪರಿಗಣಿಸಿ ಎಂದಿದ್ದಾರೆ.
ಬೆಂಗಳೂರಿನಾದ್ಯಂತ 10 ಸಾವಿರಕ್ಕೂ ಹೆಚ್ಚು ಸಿ.ಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಎಲ್ಲರ ಚಲನವಲನಗಳ ಮೇಲೆ ಕಣ್ಣಿಡಲಾಗುವುದು. ಹೊಸವರ್ಷಾಚರಣೆ ವೇಳೆ ರಾಜ್ಯದ ಗೌರವ ಹಾಗೂ ಗಾಂಭೀರ್ಯ ಕಾಪಾಡಬೇಕು ಎಂದು ತಿಳಿಸಿದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 7 ದಿನ ಶೋಕಾಚಾರಣೆ ಘೋಷಣೆ ಮಾಡಿದ್ದು, ಕೇವಲ ಸರ್ಕಾರಿ ಕಾರ್ಯಕ್ರಮಗಳನ್ನು ಮಾತ್ರ ತಡೆ ಹಿಡಿಯಲಾಗಿದೆ. ಅದರ ಹೊರತಾಗಿ ಖಾಸಗಿ ಕಾರ್ಯಕ್ರಮಗಳಲ್ಲಿ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಹೀಗಾಗಿ ಖಾಸಗಿಯಾಗಿ ಹೊಸ ವರ್ಷಾಚರಣೆ ಮಾಡುವವರು ಮಾಡಿಕೊಳ್ಳಬಹುದು ಎಂದರು.
ಹೊಸವರ್ಷಾಚರಣೆ ಮಾರ್ಗಸೂಚಿ, ಸಮಯಾವಕಾಶದ ಬಗ್ಗೆ ಪೊಲೀಸರು ಮಾಹಿತಿ ನೀಡಲಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇರಬೇಕು. ಪಾಲಿಕೆ ಹಾಗೂ ಪೊಲೀಸರು ವ್ಯಾಪಾರಸ್ಥರಿಗೆ ಮಾರ್ಗಸೂಚಿ ನೀಡಲಿದ್ದಾರೆ. ಕಾಲಾವಕಾಶ ವಿಸ್ತರಣೆ ಮಾಡಿದ್ದರೂ ಯಾರೊಬ್ಬರೂ ಕಾನೂನು ಉಲ್ಲಂಘನೆ ಮಾಡುವಂತಿಲ್ಲ ಎಂದು ತಿಳಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…